AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು

ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ.

Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು
ಮೃತ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
|

Updated on: Jun 18, 2023 | 12:15 PM

Share

ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ(Srinivasa Sagara Dam)ದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ. ಇತ ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದು, ವೀಕೆಂಡ್​ ಹಿನ್ನೆಲೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದಾಗ​ ಈ ಅವಘಡ ಸಂಭವಿಸಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯ ಹತ್ಯೆ

ಶಿವಮೊಗ್ಗ: ನಗರದ ವಿಜಯನಗರದಲ್ಲಿ ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:Raga : ಮೃತ ವ್ಯಕ್ತಿಯನ್ನೂ ಬದುಕಿಸಬಲ್ಲ, ರೋಗಗಳನ್ನೂ ಗುಣಪಡಿಸಬಲ್ಲ ಸಂಜೀವಿನಿಯೇ ರಾಗ

ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌ಯಾಗಿದೆ. ಮಂಗಳೂರುನಿಂದ ಮೂಡಿಗೆರೆ ಹೋಗುವ ಸರಕಾರಿ ಬಸ್​ ಫುಲ್​ ಆಗಿದ್ದು, ಕಾಲೇಜ್ ವಿದ್ಯಾರ್ಥಿಗಳು ಉಜಿರೆಯಲ್ಲಿ ಬಸ್ ಹತ್ತಿದ್ದಾರೆ. ಈ ವೇಳೆ ಕಂಡಕ್ಟರ್ ವಿದ್ಯಾರ್ಥಿಗಳನ್ನು ಬಸ್​ನಲ್ಲಿ ಮುಂದೆ ಹೋಗಲು ತಳ್ಳಾಟ‌ ನಡೆದಿದೆ. ಈ ವಿಚಾರದಲ್ಲಿ ಬಸ್ ಕಂಡಕ್ಟರ್ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು, ವಿದ್ಯಾರ್ಥಿಗಳು ಚಾರ್ಮಾಡಿ ಯುವಕರಿಗೆ ಕರೆ ಮಾಡಿ ಬಸ್ ಅಡ್ಡಹಾಕಲು ಮಾಹಿತಿ ನೀಡಿದ್ದಾರೆ. ಚಾರ್ಮಾಡಿಯಲ್ಲಿದ್ದ ಯುವಕರು ಚೆಕ್ ಪೋಸ್ಟ್ ಗೆ ಬಂದು ಗಲಾಟೆ ಮಾಡಿ, ಸರಕಾರಿ ಬಸ್ ಕಂಡಕ್ಟರ್ ಮತ್ತು ಪ್ಯಾಸೆಂಜರ್​ಗೆ ಸ್ಥಳೀಯರು ಸೇರಿ ಹಲ್ಲೆಗೆ ಯತ್ನಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು