AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು

ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ.

Chikkaballapur News: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕ ಸಾವು
ಮೃತ ವ್ಯಕ್ತಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Jun 18, 2023 | 12:15 PM

Share

ಚಿಕ್ಕಬಳ್ಳಾಪುರ: ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ(Srinivasa Sagara Dam)ದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೊಹಮ್ಮದ್ ಯಾಸೀನ್ ಮೃತ ವ್ಯಕ್ತಿ. ಇತ ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದು, ವೀಕೆಂಡ್​ ಹಿನ್ನೆಲೆ ಸ್ನೇಹಿತರ ಜೊತೆಗೆ ಪ್ರವಾಸಕ್ಕೆ ಬಂದಿದ್ದಾಗ​ ಈ ಅವಘಡ ಸಂಭವಿಸಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯ ಹತ್ಯೆ

ಶಿವಮೊಗ್ಗ: ನಗರದ ವಿಜಯನಗರದಲ್ಲಿ ಉಸಿರುಗಟ್ಟಿಸಿ ಇಂಜಿನಿಯರ್ ಪತ್ನಿಯನ್ನ ಹತ್ಯೆ ಮಾಡಿದ ಘಟನೆ ನಡೆದಿದೆ. ಕಮಲಮ್ಮ(57) ಕೊಲೆಯಾದ ಮಹಿಳೆ. ಪತಿ ಮಲ್ಲಿಕಾರ್ಜುನ ಗೋವಾಕ್ಕೆ ತೆರಳಿದ್ದಾಗ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:Raga : ಮೃತ ವ್ಯಕ್ತಿಯನ್ನೂ ಬದುಕಿಸಬಲ್ಲ, ರೋಗಗಳನ್ನೂ ಗುಣಪಡಿಸಬಲ್ಲ ಸಂಜೀವಿನಿಯೇ ರಾಗ

ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಬಳಿ ಉಚಿತ ಬಸ್ ವಿಚಾರವಾಗಿ ವಿದ್ಯಾರ್ಥಿಗಳು-ಪ್ರಯಾಣಿಕರ ನಡುವೆ ಗಲಾಟೆ‌ಯಾಗಿದೆ. ಮಂಗಳೂರುನಿಂದ ಮೂಡಿಗೆರೆ ಹೋಗುವ ಸರಕಾರಿ ಬಸ್​ ಫುಲ್​ ಆಗಿದ್ದು, ಕಾಲೇಜ್ ವಿದ್ಯಾರ್ಥಿಗಳು ಉಜಿರೆಯಲ್ಲಿ ಬಸ್ ಹತ್ತಿದ್ದಾರೆ. ಈ ವೇಳೆ ಕಂಡಕ್ಟರ್ ವಿದ್ಯಾರ್ಥಿಗಳನ್ನು ಬಸ್​ನಲ್ಲಿ ಮುಂದೆ ಹೋಗಲು ತಳ್ಳಾಟ‌ ನಡೆದಿದೆ. ಈ ವಿಚಾರದಲ್ಲಿ ಬಸ್ ಕಂಡಕ್ಟರ್ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು, ವಿದ್ಯಾರ್ಥಿಗಳು ಚಾರ್ಮಾಡಿ ಯುವಕರಿಗೆ ಕರೆ ಮಾಡಿ ಬಸ್ ಅಡ್ಡಹಾಕಲು ಮಾಹಿತಿ ನೀಡಿದ್ದಾರೆ. ಚಾರ್ಮಾಡಿಯಲ್ಲಿದ್ದ ಯುವಕರು ಚೆಕ್ ಪೋಸ್ಟ್ ಗೆ ಬಂದು ಗಲಾಟೆ ಮಾಡಿ, ಸರಕಾರಿ ಬಸ್ ಕಂಡಕ್ಟರ್ ಮತ್ತು ಪ್ಯಾಸೆಂಜರ್​ಗೆ ಸ್ಥಳೀಯರು ಸೇರಿ ಹಲ್ಲೆಗೆ ಯತ್ನಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳನ್ನು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ