AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapura Gelatin Blast | ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆ

ಘಟನೆಯಲ್ಲಿ ಮೃತಪಟ್ಟ ರಾಮು ಮನೆಗೆ ಸಚಿವ ಸುಧಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಹಾಗೂ ರಾಮು ಬಗ್ಗೆ ಪತ್ನಿಯಿಂದ ಮಾಹಿತಿ ಪಡೆದಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಹಿರೇನಾಗವೇಲಿ ಗ್ರಾಮದ ರಾಮು ಮೃತಪಟ್ಟಿದ್ದಾರೆ. ಪಿಯುಸಿ ಓದಿದ್ದ ರಾಮು ಕ್ವಾರಿ ಬಳಿ ಅಂಗಡಿಯಿಟ್ಟುಕೊಂಡಿದ್ದ. ಕ್ವಾರಿ ಮಾಲೀಕರೇ ಬಂದು ಕ್ವಾರಿ ನೋಡಿಕೊಳ್ಳಲು ಹೇಳಿದ್ದರು.

Chikkaballapura Gelatin Blast | ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿಕೆ
ಘಟನಾಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಸಚಿವ ಡಾ.ಕೆ.ಸುಧಾಕರ್
Follow us
ಆಯೇಷಾ ಬಾನು
|

Updated on:Feb 23, 2021 | 12:03 PM

ಚಿಕ್ಕಬಳ್ಳಾಪುರ: ಜಿಲ್ಲೆಯ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಫೋಟ ಕೇಸ್​ಗೆ ಸಂಬಂಧಿಸಿ ದುರಂತದಲ್ಲಿ 6 ಜನರು ಮೃತಪಟ್ಟಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಹಿರೇನಾಗವೇಲಿಯ ಒಬ್ಬರು, ಬಾಗೇಪಲ್ಲಿಯ ಒಬ್ಬರು, ಆಂಧ್ರ ಮೂಲದ ಮೂವರು, ನೇಪಾಳದ ಒಬ್ಬರು ಮೃತಪಟ್ಟಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ಬಳಿಕ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಇನ್ನು ಈ ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಭ್ರಮರವರ್ಷಿಣಿ ಮಾಲೀಕರು ಸ್ಫೋಟಕ ಸಂಗ್ರಹಿಸಿದ್ದು ತಿಳಿದಿದೆ, ಭ್ರಮರವರ್ಷಿಣಿ ಕಲ್ಲು ಕ್ವಾರಿಗೆ ಮೂವರು ಮಾಲೀಕರಿದ್ದಾರೆ. ಇಬ್ಬರು ಆಂಧ್ರ ಮೂಲದವರು, ಒಬ್ಬರು ಗುಡಿಬಂಡೆಯವರು. ಆದಷ್ಟು ಶೀಘ್ರದಲ್ಲಿ ಅವರನ್ನು ಹಿಡಿಯುವ ಕೆಲಸ ಆಗುತ್ತದೆ. ಕಲ್ಲು ಕ್ವಾರಿ ಮಾಲೀಕರ ಬಂಧನಕ್ಕೆ ಪೊಲೀಸ್ ತಂಡ ರಚನೆ ಮಾಡಲಾಗುತ್ತೆ. ಅವರಿಗೆ ಅಕ್ರಮವಾಗಿ ಸ್ಫೋಟಕ ನೀಡಿದವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತೆ. ನಿಯಮಬಾಹಿರ ಚಟುವಟಿಕೆಗಳಿಂದ ಇಂಥ ಘಟನೆ ನಡೆಯುತ್ತೆ. ಅಧಿಕಾರಿಗಳು ಈ ರೀತಿ ನಡೆಯದಂತೆ ಕಠಿಣ ಕ್ರಮಕೈಗೊಳ್ತಾರೆ. ಈ ಘಟನೆಗೆ ಮಾಲೀಕರೇ ಪ್ರಮುಖ ಆರೋಪಿಗಳಾಗುತ್ತಾರೆ. ಆದಷ್ಟು ಶೀಘ್ರದಲ್ಲಿ ಅವರನ್ನು ಹಿಡಿಯುವ ಕೆಲಸ ಆಗುತ್ತದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ.

Chikkaballapura Gelatin Blast Sudhakar

ಘಟನಾಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಸಚಿವ ಡಾ.ಕೆ.ಸುಧಾಕರ್

ರಾಮು ಮನೆಗೆ ಸಚಿವ ಸುಧಾಕರ್ ಭೇಟಿ ಘಟನೆಯಲ್ಲಿ ಮೃತಪಟ್ಟ ರಾಮು ಮನೆಗೆ ಸಚಿವ ಸುಧಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಹಾಗೂ ರಾಮು ಬಗ್ಗೆ ಪತ್ನಿಯಿಂದ ಮಾಹಿತಿ ಪಡೆದಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಹಿರೇನಾಗವೇಲಿ ಗ್ರಾಮದ ರಾಮು ಮೃತಪಟ್ಟಿದ್ದಾರೆ. ಪಿಯುಸಿ ಓದಿದ್ದ ರಾಮು ಕ್ವಾರಿ ಬಳಿ ಅಂಗಡಿಯಿಟ್ಟುಕೊಂಡಿದ್ದ. ಕ್ವಾರಿ ಮಾಲೀಕರೇ ಬಂದು ಕ್ವಾರಿ ನೋಡಿಕೊಳ್ಳಲು ಹೇಳಿದ್ದರು. ನಿನ್ನೆ ಬೆಳಗ್ಗೆ 8 ಗಂಟೆಗೆ ಕ್ವಾರಿಯಲ್ಲಿ ಕೆಲಸಕ್ಕೆ‌ ಹೋಗಿದ್ದ. ಬಳಿಕ ಗುಡಿಬಂಡೆಗೆ ಸ್ನೇಹಿತನ ಮನೆ ಗೃಹ ಪ್ರವೇಶಕ್ಕೆ‌ ಹೋಗಿದ್ದ. ಆದ್ರೆ ರಾತ್ರಿ ನಡೆದ ಘಟನೆಯಲ್ಲಿ ರಾಮು ಮೃತಪಟ್ಟಿದ್ದು ಹೇಗೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಮೃತ ರಾಮು ಬಗ್ಗೆ ಕುಟುಂಬಸ್ಥರಿಗೆ ಯಾವುದೇ ಮಾಹಿತಿ ಇಲ್ಲ. ರಾತ್ರಿಯೇ ಘಟನೆ‌ ನಡೆದರೂ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ. ಸ್ಫೋಟ ಸ್ಥಳದಿಂದ ಕೂಗಳತೆ ದೂರದಲ್ಲಿ ರಾಮು ಕುಟುಂಬವಿದೆ. ಆರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ರಾಮು ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಗ್ರಾಮಸ್ಥನ ತೀವ್ರ ಆಕ್ರೋಶ ಇನ್ನು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಹಿರೇನಾಗವೇಲಿ ಗ್ರಾಮಸ್ಥ ರಾಘವೇಂದ್ರ ಎಂಬುವವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಗೆ ಡಾ.ಸುಧಾಕರ್ ನೇರ ಕಾರಣ ಎಂದು ಸ್ಥಳ ಪರಿಶೀಲನೆಗೆ ಬಂದಿದ್ದ ಸಚಿವ ಸುಧಾಕರ್ ವಿರುದ್ಧ ರಾಘವೇಂದ್ರ ಗರಂ ಆಗಿದ್ದಾರೆ. ಸುಧಾಕರ್ ಎದುರು ಅವರ ಸಂಬಂಧಿಗಳ ವಿರುದ್ಧವೇ ಕಿಡಿಕಾರಿದ್ರು. ದಬ್ಬಾಳಿಕೆಯಿಂದ ಜಮೀನು ಖರೀದಿಸಿದ್ದಾರೆಂದು ಆರೋಪ ಮಾಡಿದ್ದಾರೆ. ಇದೆಲ್ಲ ಹೇಳುತ್ತಿದ್ದಂತೆ ತಕ್ಷಣ ಪೊಲೀಸರು ಗ್ರಾಮಸ್ಥ ರಾಘವೇಂದ್ರನನ್ನ ಹೊರಹಾಕಿದ್ದಾರೆ.

Chikkaballapura Gelatin Blast Sudhakar

ಘಟನಾಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ ಸಚಿವ ಡಾ.ಕೆ.ಸುಧಾಕರ್

ಇದನ್ನೂ ಓದಿ: Chikkaballapura Gelatin Blast | ಶಿವಮೊಗ್ಗ ಸ್ಫೋಟ ಮಾಸುವ ಮುನ್ನವೇ ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಫೋಟ, ಐವರ ಸಾವು

Published On - 8:07 am, Tue, 23 February 21

ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ