AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟದ ಹೇಮಾವತಿ ಎಂಬ ಮಹಿಳೆ ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಹೇಮಾವತಿ ಅವರ ಬಳಿ ಅಪರಿಚಿತ ವ್ಯಕ್ತಿಗಳು 25 ಸಾವಿರ ರೂಪಾಯಿಗೆ ಕುರಿಗಳನ್ನು ಖರೀದಿಸಿದ್ದಾರೆ. ಆದರೆ, ಹೇಮಾವತಿಯವರಿಗೆ ಖೋಟಾ ನೋಟುಗಳನ್ನು ನೀಡಿದ್ದಾರೆ. ಹೇಮಾವತಿಯವರು ಬ್ಯಾಂಕ್​​ಗೆ ಹಣ ಜಮೆ ಮಾಡಲು ತೆರಳಿದಾಗ ಖೋಟಾ ನೋಟುಗಳು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು: ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು
ಸಖರಾಯಪಟ್ಟಣ ಪೊಲೀಸ್​ ಠಾಣೆ, ನಕಲಿ ನೋಟುಗಳು
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ

Updated on:Apr 18, 2025 | 3:35 PM

ಚಿಕ್ಕಮಗಳೂರು, ಏಪ್ರಿಲ್​ 18: ಕುರಿ ಸಾಕಾಣಿಕೆ (Sheep farming) ಯಿಂದ ಅನೇಕರು ಜೀವನ ಕಟ್ಟಿಕೊಂಡಿದ್ದಾರೆ. ಕುರಿ ಹಾಲು ಮತ್ತು ಕುರಿಗಳನ್ನು ಮಾರಿ ಅನೇಕ ಕುರಿಗಾಹಿಗಳು (Shepherd) ತಮ್ಮ ಸಂಸಾರದ ಬಂಡಿಯನ್ನು ಸಾಗಿಸುತ್ತಿದ್ದಾರೆ. ಇದರಂತೆ, ಕಡೂರು (Kadur) ತಾಲೂಕಿನ ನಿಢಘಟ್ಟ ಗ್ರಾಮದ ಮಹಿಳೆಯೊಬ್ಬರು ಕುರಿ ಸಾಕಾಣಿಕೆ ಮಾಡಿ ಇದರಿಂದ ಬಂದ ಲಾಭದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ. ಆದರೆ, ಯಾರೋ ಅಪರಿಚಿತರು ಈ ಮಹಿಳೆಯಿಂದ ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೀಡಿ ಪರಾರಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಖೋಟಾ ನೋಟು ಜನರ ಕೈಯಲ್ಲಿ ಹರಿದಾಡುತ್ತಿವೆ. ಕಡೂರು ತಾಲೂಕಿನ ನಿಡಘಟ್ಟ ಗ್ರಾಮದ ಹೇಮಾವತಿ ಎಂಬವರ ಬಳಿ ಅಪರಿಚಿತರು ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೋಟು ನೀಡಿದ್ದಾರೆ. ಕುರಿಗಳನ್ನು ಮಾರಿ ಬಂದ ಹಣವನ್ನು ಹೇಮಾವತಿಯವರು ಎಸ್​ಬಿಐ ಬ್ಯಾಂಕ್​ನಲ್ಲಿರುವ ತಮ್ಮ ಖಾತೆಗೆ ಜಮೆ ಮಾಡಲು ಹೋಗಿದ್ದಾಗ ಖೋಟಾ ನೋಟು ಎಂದು ತಿಳಿದಿದೆ.

ಹೇಮಾವತಿ ಅವರು 25 ಸಾವಿರ ರೂಪಾಯಿಗೆ ಕುರಿಗಳನ್ನು ಮಾರಿದ್ದರು. ಈ ಹಣವನ್ನು ಹೇಮಾವತಿಯವರು ಬ್ಯಾಂಕ್​ಗೆ ಜಮೆ ಮಾಡಲು ತೆರಳಿದ್ದಾರೆ. ಈ 25 ಸಾವಿರ ರೂಪಾಯಿಯಲ್ಲಿ 14 ಸಾವಿರ ರೂಪಾಯಿಯಷ್ಟು ನೋಟುಗಳು ಖೋಟಾ ಆಗಿವೆ. 500 ರೂ. ಮುಖಬೆಲೆಯ 28 ನೋಟುಗಳು ನೋಟುಗಳು ನಕಲಿ ಎಂದು ಬ್ಯಾಂಕ್​ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
Image
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
Image
ದಾಂಡೇಲಿ ಮನೆಯಲ್ಲಿ 14 ಕೋಟಿ ರೂ. ನಕಲಿ ನೋಟು: ಪೊಲೀಸರೇ ಶಾಕ್
Image
ಪಕ್ಕದ ಊರಿಗೆ ಪಾತ್ರೆ ಕೊಟ್ಟ ಗ್ರಾಮದ ಮುಖ್ಯಸ್ಥನಿಗೆ ದಂಡ, ಬಹಿಷ್ಕಾರ!

ಇದನ್ನೂ ಓದಿ: ದಾಂಡೇಲಿ ಮನೆಯಲ್ಲಿ ಕಂತೆ ಕಂತೆ ನಕಲಿ ನೋಟು ಪತ್ತೆ ಪ್ರಕರಣ: ಉತ್ತರ ಪ್ರದೇಶದ ಲಖನೌನಲ್ಲಿ ಆರೋಪಿಯ ಬಂಧನ

ಬಳಿಕ, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರು ಎಲ್ಲ ನಕಲಿ ನೋಟುಗಳನ್ನು ವಶಕ್ಕೆ ಪಡೆದು, ಸಖರಾಯಪಟ್ಟಣ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹೇಮಾವತಿಯವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾ, “ಕುರಿಗಳನ್ನು ಮಾರಾಟ ಮಾಡಿ ಬಂದಿರುವ ಹಣ ಎಂದು ಹೇಳಿದ್ದಾರೆ. ನಂತರ, ಪೊಲೀಸರು ಹೇಮಾವತಿ ಅವರ ವಿರುದ್ಧ ಎಫ್​ಐಆರ್​ ದಾಖಲಿಸಿ ಪೊಲೀಸರು ಬಿಟ್ಟು ಕಳಿಸಿದ್ದಾರೆ. ನಕಲಿ ನೋಟು ನೀಡಿದ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Fri, 18 April 25

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು