AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟದ ಹೇಮಾವತಿ ಎಂಬ ಮಹಿಳೆ ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಹೇಮಾವತಿ ಅವರ ಬಳಿ ಅಪರಿಚಿತ ವ್ಯಕ್ತಿಗಳು 25 ಸಾವಿರ ರೂಪಾಯಿಗೆ ಕುರಿಗಳನ್ನು ಖರೀದಿಸಿದ್ದಾರೆ. ಆದರೆ, ಹೇಮಾವತಿಯವರಿಗೆ ಖೋಟಾ ನೋಟುಗಳನ್ನು ನೀಡಿದ್ದಾರೆ. ಹೇಮಾವತಿಯವರು ಬ್ಯಾಂಕ್​​ಗೆ ಹಣ ಜಮೆ ಮಾಡಲು ತೆರಳಿದಾಗ ಖೋಟಾ ನೋಟುಗಳು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು: ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು
ಸಖರಾಯಪಟ್ಟಣ ಪೊಲೀಸ್​ ಠಾಣೆ, ನಕಲಿ ನೋಟುಗಳು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Apr 18, 2025 | 3:35 PM

Share

ಚಿಕ್ಕಮಗಳೂರು, ಏಪ್ರಿಲ್​ 18: ಕುರಿ ಸಾಕಾಣಿಕೆ (Sheep farming) ಯಿಂದ ಅನೇಕರು ಜೀವನ ಕಟ್ಟಿಕೊಂಡಿದ್ದಾರೆ. ಕುರಿ ಹಾಲು ಮತ್ತು ಕುರಿಗಳನ್ನು ಮಾರಿ ಅನೇಕ ಕುರಿಗಾಹಿಗಳು (Shepherd) ತಮ್ಮ ಸಂಸಾರದ ಬಂಡಿಯನ್ನು ಸಾಗಿಸುತ್ತಿದ್ದಾರೆ. ಇದರಂತೆ, ಕಡೂರು (Kadur) ತಾಲೂಕಿನ ನಿಢಘಟ್ಟ ಗ್ರಾಮದ ಮಹಿಳೆಯೊಬ್ಬರು ಕುರಿ ಸಾಕಾಣಿಕೆ ಮಾಡಿ ಇದರಿಂದ ಬಂದ ಲಾಭದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ. ಆದರೆ, ಯಾರೋ ಅಪರಿಚಿತರು ಈ ಮಹಿಳೆಯಿಂದ ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೀಡಿ ಪರಾರಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಖೋಟಾ ನೋಟು ಜನರ ಕೈಯಲ್ಲಿ ಹರಿದಾಡುತ್ತಿವೆ. ಕಡೂರು ತಾಲೂಕಿನ ನಿಡಘಟ್ಟ ಗ್ರಾಮದ ಹೇಮಾವತಿ ಎಂಬವರ ಬಳಿ ಅಪರಿಚಿತರು ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೋಟು ನೀಡಿದ್ದಾರೆ. ಕುರಿಗಳನ್ನು ಮಾರಿ ಬಂದ ಹಣವನ್ನು ಹೇಮಾವತಿಯವರು ಎಸ್​ಬಿಐ ಬ್ಯಾಂಕ್​ನಲ್ಲಿರುವ ತಮ್ಮ ಖಾತೆಗೆ ಜಮೆ ಮಾಡಲು ಹೋಗಿದ್ದಾಗ ಖೋಟಾ ನೋಟು ಎಂದು ತಿಳಿದಿದೆ.

ಹೇಮಾವತಿ ಅವರು 25 ಸಾವಿರ ರೂಪಾಯಿಗೆ ಕುರಿಗಳನ್ನು ಮಾರಿದ್ದರು. ಈ ಹಣವನ್ನು ಹೇಮಾವತಿಯವರು ಬ್ಯಾಂಕ್​ಗೆ ಜಮೆ ಮಾಡಲು ತೆರಳಿದ್ದಾರೆ. ಈ 25 ಸಾವಿರ ರೂಪಾಯಿಯಲ್ಲಿ 14 ಸಾವಿರ ರೂಪಾಯಿಯಷ್ಟು ನೋಟುಗಳು ಖೋಟಾ ಆಗಿವೆ. 500 ರೂ. ಮುಖಬೆಲೆಯ 28 ನೋಟುಗಳು ನೋಟುಗಳು ನಕಲಿ ಎಂದು ಬ್ಯಾಂಕ್​ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ.

ಇದನ್ನೂ ಓದಿ
Image
ಜಾತಿ ಗಣತಿ ವರದಿ ಸಂಬಂಧಿಸಿದ ಚರ್ಚೆಗೆ ಮಾಜಿ ಸಚಿವ ಡಿಸಿಎಂ ಮನೆಗೆ ಬಂದರೇ?
Image
ಸಂಬಂಧಪಟ್ಟ ಸಚಿವರಿಂದ ಜಾತಿ ಗಣತಿ ವರದಿಯಲ್ಲಿನ ಮಾಹಿತಿ ಸಂಗ್ರಹಿಸಬೇಕು: ಸಚಿವ
Image
ದಾಂಡೇಲಿ ಮನೆಯಲ್ಲಿ 14 ಕೋಟಿ ರೂ. ನಕಲಿ ನೋಟು: ಪೊಲೀಸರೇ ಶಾಕ್
Image
ಪಕ್ಕದ ಊರಿಗೆ ಪಾತ್ರೆ ಕೊಟ್ಟ ಗ್ರಾಮದ ಮುಖ್ಯಸ್ಥನಿಗೆ ದಂಡ, ಬಹಿಷ್ಕಾರ!

ಇದನ್ನೂ ಓದಿ: ದಾಂಡೇಲಿ ಮನೆಯಲ್ಲಿ ಕಂತೆ ಕಂತೆ ನಕಲಿ ನೋಟು ಪತ್ತೆ ಪ್ರಕರಣ: ಉತ್ತರ ಪ್ರದೇಶದ ಲಖನೌನಲ್ಲಿ ಆರೋಪಿಯ ಬಂಧನ

ಬಳಿಕ, ಬ್ಯಾಂಕ್​ನ ವ್ಯವಸ್ಥಾಪಕ ನಿರ್ದೇಶಕರು ಎಲ್ಲ ನಕಲಿ ನೋಟುಗಳನ್ನು ವಶಕ್ಕೆ ಪಡೆದು, ಸಖರಾಯಪಟ್ಟಣ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹೇಮಾವತಿಯವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದಾ, “ಕುರಿಗಳನ್ನು ಮಾರಾಟ ಮಾಡಿ ಬಂದಿರುವ ಹಣ ಎಂದು ಹೇಳಿದ್ದಾರೆ. ನಂತರ, ಪೊಲೀಸರು ಹೇಮಾವತಿ ಅವರ ವಿರುದ್ಧ ಎಫ್​ಐಆರ್​ ದಾಖಲಿಸಿ ಪೊಲೀಸರು ಬಿಟ್ಟು ಕಳಿಸಿದ್ದಾರೆ. ನಕಲಿ ನೋಟು ನೀಡಿದ ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Fri, 18 April 25

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ