AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್

ಚಿಕ್ಕಮಗಳೂರಿನಲ್ಲಿ 25ನೇ ವರ್ಷದ ದತ್ತ ಜಯಂತಿ ಆಚರಣೆಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದೆ. ಡಿ.6 ರಿಂದ 14 ರವರೆಗೆ ನಡೆಯುವ ಈ ಜಯಂತಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಸುಗಮ ಆಚರಣೆಗೆ ಸುಮಾರು 4000 ಪೊಲೀಸರನ್ನು ನಿಯೋಜಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಚೆಕ್ ಪೋಸ್ಟ್​ಗಳು ಹಾಗೂ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್
25ನೇ ವರ್ಷದ ದತ್ತಜಯಂತಿ: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ‌ಹೈಅಲರ್ಟ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Dec 09, 2024 | 9:10 PM

Share

ಚಿಕ್ಕಮಗಳೂರು, ಡಿಸೆಂಬರ್​ 09: ಕರ್ನಾಟಕದ ಅತಿದೊಡ್ಡ ವಿವಾದಿತ ಪ್ರದೇಶ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ (Datta Peetha) ಆಗ್ರಹಿಸಿ ನಡೆಯುತ್ತಿರುವ 25 ನೇ ವರ್ಷದ ದತ್ತಜಯಂತಿ ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಿದ್ದವಾಗಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ. ಕಾಫಿನಾಡಿನಲ್ಲಿ ಖಾಕಿ ಕಟ್ಟೆಚ್ಚರ ವಹಿಸಿದೆ.

5 ದಿನ ಹೈ ಅಲರ್ಟ್!

ಜಿಲ್ಲೆಯ ವಿವಾದಿತ ಸ್ಥಳ ಚಂದ್ರದ್ರೋಣ ಪರ್ವತದ ಸಾಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ವಿಹೆಚ್​ಪಿ, ಭಜರಂಗದಳ ನೇತೃತ್ವದಲ್ಲಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿಗೆ ಚಿಕ್ಕಮಗಳೂರು ಜಿಲ್ಲಾಡಳಿತ ಸಕಲ‌ ಸಿದ್ದತೆ ನಡೆಸಿದೆ. ಡಿಸೆಂಬರ್ 6 ರಂದು ದತ್ತಮಾಲಾ ಧಾರಣೆ ಮೂಲಕ ಆರಂಭವಾಗಿರುವ ದತ್ತಜಯಂತಿ 14ರವರೆಗೂ ನಡೆಯಲಿದೆ. ಪ್ರಮುಖ ಕಾರ್ಯಕ್ರಮಗಳು 12 ರಿಂದ 14 ರ ವರೆಗೂ ನಡೆಯಲಿದ್ದು, ಪೊಲೀಸ್ ಇಲಾಖೆ, ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಿದೆ.

ಇದನ್ನೂ ಓದಿ: ದತ್ತ ಜಯಂತಿ: ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ವಾರಾಂತ್ಯದಲ್ಲಿ ನಿರ್ಬಂಧ

25ನೇ ವರ್ಷದ ದತ್ತಜಯಂತಿ ಹಿನ್ನೆಲೆ ವಿಹೆಚ್​ಪಿ, ಭಜರಂಗದಳ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧರ್ಮ ಸಭೆ, ಶೋಭಾಯಾತ್ರೆ ನಡೆಯಲಿದೆ. ಶಾಂತಿಯುತ ದತ್ತಜಯಂತಿಗಾಗಿ ಚಿಕ್ಕಮಗಳೂರು ಪೊಲೀಸ್ ಇಲಾಖೆ, ಜಿಲ್ಲಾಡಳಿತ ಅಲರ್ಟ್ ಆಗಿದ್ದು ಇಂದಿನಿಂದ ಚಿಕ್ಕಮಗಳೂರು ಪೋಲಿಸ್ ಕಾವಲಿನಲ್ಲಿ ಇರಲಿದೆ. 7 ಎಸ್ಪಿಗಳ ನೇತೃತ್ವದಲ್ಲಿ 4000 ಪೊಲೀಸರ ನಿಯೋಜನೆ ಮಾಡಲಾಗಿದೆ. 27 ಮಂದಿ ಡಿವೈಎಸ್ಪಿ, 45 ಮಂದಿ ಇನ್ಸ್‌ಸ್ಪೆಕ್ಟರ್‌, 300 ಪೊಲೀಸ್‌ ಸಬ್‌ ಇನ್ಸ್‌ಸ್ಪೆಕ್ಟರ್‌, 500 ಮಂದಿ ಗೃಹ ರಕ್ಷಕದಳ ಸಿಬ್ಬಂದಿ, 20 ಕೆಎಸ್‌ಆರ್‌ಪಿ, 28 ಡಿಎಆರ್‌ ನಿಯೋಜನೆ ಮಾಡಲಾಗಿದೆ.

ಇದರ ಜತೆಗೆ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿರುವ ಸ್ಥಳೀಯರಲ್ಲಿ ಆತ್ಮಸ್ಥೈರ್ಯ ತುಂಬಲು ರೂಟ್‌ ಮಾರ್ಚ್‌ ನಡೆಸಲು ಆರ್‌ಐಎಫ್‌ ತುಕಡಿಯನ್ನು ನಿಯೋಜಿಸಲಾಗಿದೆ. ಇನ್ನೂ 61 ವಿಶೇಷ ಅಧಿಕಾರಿಗಳ ನೇಮಕ ಮಾಡಿದ್ದು, ಜಿಲ್ಲೆಯ ಗಡಿ ಭಾಗ ಸೇರಿದಂತೆ ಚಿಕ್ಕಮಗಳೂರು ನಗರದಲ್ಲಿ 36 ಚೆಕ್ ಪೋಸ್ಟ್, 400 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಮದ್ಯ ಮಾರಾಟ ನಿಷೇಧ

ಚಿಕ್ಕಮಗಳೂರು ಮೂಡಿಗೆರೆ, ಶೃಂಗೇರಿ ಕೊಪ್ಪ, ಎಚ್​ಆರ್​ ಪುರ, ಕಡೂರು, ತರೀಕೆರೆ ತಾಲೂಕಿನಲ್ಲಿ 13 ರಿಂದ 14ರ ವರೆಗೂ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಡಿ.11 ರಿಂದ 15 ರ ಬೆಳಗ್ಗೆ 10 ಗಂಟೆಯ ವರೆಗೂ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿದಂತೆ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಾಧಾರ ಸೇರಿದಂತೆ ಚಂದ್ರದ್ರೋಣ ಪರ್ವತದ ಸಾಲಿನ ಪ್ರವಾಸಿತಾಣಗಳಿಗೆ ನಿರ್ಬಂಧ ಹೇರಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ

ಡಿ.12 ರಂದು ಚಿಕ್ಕಮಗಳೂರು ನಗರದಲ್ಲಿ ಮೂರು ಸಾವಿರಕ್ಕೂ ಅಧಿಕ ಮಹಿಳೆಯರು ಸಂಕೀರ್ತನ ಯಾತ್ರೆ ಮೂಲಕ ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಪಡೆದರೆ, ಡಿ.13 ರಂದು ಚಿಕ್ಕಮಗಳೂರು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ‌ ಶೋಭಾಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾಗಲಿದ್ದು, ದತ್ತಜಯಂತಿಯ ಕೊನೆಯ ದಿನ ಅಂದರೆ ಡಿ. 14ರಂದು ಹಿಂದೂ ಸಂಘಟನೆಯ ಮುಖಂಡರು, ಬಿಜೆಪಿ ನಾಯಕರು, ಮಠಾಧೀಶರು ಸೇರಿದಂತೆ ‌40 ಸಾವಿರಕ್ಕೂ ಅಧಿಕ ದತ್ತ ಭಕ್ತರು ಇನಾಂ ದತ್ತಾತ್ರೇಯ ಪೀಠಕ್ಕೆ ತೆರಳಿ, ದತ್ತ ಪಾದುಕೆ ದರ್ಶನ ಪಡದು ವಿವಾದ ಗುಹೆಯ ಮುಂಭಾಗದಲ್ಲಿರುವ ತುಳಸಿ ಕಟ್ಟೆಯ ಬಳಿ ಹೋಮ ಪೂಜೆ ನಡೆಸಲಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು