AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಳಿ ಗೂಡಿನಂತಿರುವ ಶೆಡ್​ನಲ್ಲಿ ವಿದ್ಯಾರ್ಥಿಗಳಿಗೆ ಪಾಠ: ಹೊಸ ಕಟ್ಟಡ ಉದ್ಘಾಟನೆಗೆ ಮಿನಿಸ್ಟ್ರು ಬರ್ತಿಲ್ಲ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದ ಬಾಲಕಿಯರ ಅಂಬೇಡ್ಕರ್ ವಸತಿ ಶಾಲೆಯ ಮಕ್ಕಳು 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೊಸ ಕಟ್ಟಡ ಬಳಸದೆ, ಕೋಳಿ ಶೆಡ್‌ನಂತಹ ಬಾಡಿಗೆ ಕಟ್ಟಡದಲ್ಲಿ ಕಲಿಯುತ್ತಿದ್ದಾರೆ. ಹೊಸ ಕಟ್ಟಡದ ಉದ್ಘಾಟನೆ ವಿಳಂಬದಿಂದ ಮಕ್ಕಳು ಕಷ್ಟ ಅನುಭವಿಸುತ್ತಿದ್ದಾರೆ.

ಕೋಳಿ ಗೂಡಿನಂತಿರುವ ಶೆಡ್​ನಲ್ಲಿ ವಿದ್ಯಾರ್ಥಿಗಳಿಗೆ ಪಾಠ: ಹೊಸ ಕಟ್ಟಡ ಉದ್ಘಾಟನೆಗೆ ಮಿನಿಸ್ಟ್ರು ಬರ್ತಿಲ್ಲ
ಕೋಳಿ ಗೂಡಿನಂತಿರುವ ಶೆಡ್​ನಲ್ಲಿ ವಿದ್ಯಾರ್ಥಿಗಳಿಗೆ ಪಾಠ: ಹೊಸ ಕಟ್ಟಡ ಉದ್ಘಾಟನೆಗೆ ಮಿನಿಸ್ಟ್ರು ಬರ್ತಿಲ್ಲ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 14, 2024 | 6:24 PM

Share

ಚಿಕ್ಕಮಗಳೂರು, ನವೆಂಬರ್​ 14: ಹೈಟೆಕ್ ಕಟ್ಟಡ, ಆಟವಾಡಲು ಸುಸಜ್ಜಿತ ಮೈದಾನ ಎಲ್ಲವನ್ನೂ ಹೊಂದಿರುವ ಈ ಸರ್ಕಾರಿ ವಸತಿ ಶಾಲೆಯಲ್ಲಿ ಕಲಿಯಬೇಕಿದ್ದ ಮಕ್ಕಳು (students) ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದ ತೋಟದೊಳಗಿರುವ ಕೋಳಿ ಶೆಡ್‌ನಂತಿರುವ ಬಾಡಿಗೆ ಕಟ್ಟಡದಲ್ಲಿ ಕಷ್ಟಪಟ್ಟು ಕಲಿಯುತ್ತಿದ್ದಾರೆ. ಈ ಮಕ್ಕಳು ಮಲಗೋದೂ ಅಲ್ಲೇ, ಪಾಠ ಕೇಳೋದೂ ಅಲ್ಲಿಯೇ.

ಮೂಲಭೂತ ಸೌಕರ್ಯ ಸೇರಿದಂತೆ ಸೆಕ್ಯೂರಿಟಿ ಕೂಡ ಇಲ್ಲ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಿಂಗಟಗೆರೆ ಗ್ರಾಮದಲ್ಲಿರುವ ಬಾಲಕಿಯರ ಅಂಬೇಡ್ಕರ್ ವಸತಿ ಶಾಲೆಯ ಸ್ಥಿತಿ ಇದು. 2016 17 ರಿಂದಲೂ ಇದೇ ಶಾಲೆಯಲ್ಲಿ ಮಕ್ಕಳು ಕಲಿಯುತ್ತಿದ್ದಾರೆ. ಬರೋಬ್ಬರಿ 236 ವಿದ್ಯಾರ್ಥಿಗಳಿರುವ ಈ ವಸತಿ ಶಾಲೆಯಲ್ಲಿ ಹೈಟೆಕ್ ಸೌಲಭ್ಯಗಳಿರಲಿ ಮೂಲಭೂತ ಸೌಕರ್ಯ ಸೇರಿದಂತೆ ಯಾವುದೇ ರೀತಿಯ ಸೆಕ್ಯೂರಿಟಿ ಕೂಡ ಇಲ್ಲದಂತಾಗಿದೆ.

ಇದನ್ನೂ ಓದಿ: ಸರಳ ಮದುವೆ: ಉಳಿದ ಹಣದಿಂದ 26 ಶಾಲೆಗೆ ಶುದ್ಧ ನೀರಿನ ಯಂತ್ರ ನೀಡಿದ ನವಜೋಡಿ

ಈ ಶಾಲೆಯಲ್ಲಿ ಮಕ್ಕಳಿಗೆ ಹಾಸ್ಟೆಲ್​ ಕೂಡ ಅದೇ. ಶಾಲೆ ಕೂಡ ಅದೇ. ರಾತ್ರಿಯಾದರೆ ಬೆಂಚುಗಳನ್ನೆಲ್ಲಾ ಒಟ್ಟುಗೂಡಿಸಿ ಹಾಸಿಗೆ ಹಾಕಿಕೊಂಡು ಮಲಗಬೇಕು. ಬೆಳಗ್ಗೆ ಎದ್ದ ತಕ್ಷಣ ಮತ್ತೆ ಬೆಂಚುಗಳನ್ನು ಹಾಕಬೇಕು. ಮತ್ತೆ ಕೆಲವು ಮಕ್ಕಳಿಗೆ ಬೆಂಚುಗಳು ಇಲ್ಲ. ಹೀಗಾಗಿ ತಾವು ಮಲಗಲು ಹಾಕಿಕೊಂಡ ಚಾಪೆಯ ಮೇಲೆ ಕೂತು ಪಾಠ ಕೇಳುವ ಪರಿಸ್ಥಿತಿ ಇದೆ.

ಮಕ್ಕಳ ಈ ಪರಿಸ್ಥಿತಿಯನ್ನು ಕಂಡು ಸರ್ಕಾರ ಸುಸಜ್ಜಿತವಾದ ವಸತಿ ಶಾಲೆ ನಿರ್ಮಾಣಕ್ಕೆ 25 ಕೋಟಿ ರೂ. ಅನುದಾನ ಕೊಟ್ಟು ಅದರಲ್ಲಿ ಹೈಟೆಕ್ ಕಟ್ಟಡವು ಕೂಡ ನಿರ್ಮಾಣವಾಗಿದೆ. ಸರ್ಕಾರ 25 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಬರೋಬ್ಬರಿ ಆರು ತಿಂಗಳುಗಳೆ ಕಳೆದರೂ ಕೂಡ ಲೋಕಾರ್ಪಣೆ ಭಾಗ್ಯ ಮಾತ್ರ ಕೂಡಿಬಂದಿಲ್ಲ. ಕಟ್ಟಡ ಪೂರ್ಣಗೊಂಡಿದ್ದರು ಉದ್ಘಾಟನೆಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆಜೆ ಜಾರ್ಜ್ ಅವರು ಬರಲೆಂದೇ ಅಧಿಕಾರಿಗಳು ಕಾದು ಕುಳಿತಿದ್ದಾರೆ.

ವಸತಿ ಶಾಲೆ ನಿರ್ಮಾಣವಾಗಿದೆ ಉದ್ಘಾಟನೆ ಯಾವಾಗ ಸಾರ್ ಎಂದು ಪೋಷಕರು ಮತ್ತು ಪ್ರಾಂಶುಪಾಲರು ಕೇಳಿದರೆ, ಅಧಿಕಾರಿಗಳಿಂದ ಬರುವ ಉತ್ತರ ಮಾತ್ರ ಮಿನಿಸ್ಟರ್ ಸಿಕ್ಕಿಲ್ಲ, ಮಿನಿಸ್ಟರ್ ಬರುವ ದಿನಾಂಕ ನಿಗದಿಯಾದ ಮೇಲೆ ಉದ್ಘಾಟನೆ ಮಾಡುವುದಾಗಿ ಪ್ರಾಂಶುಪಾಲರಾದ ರಮೇಶ್ ಅವರ ಉತ್ತರವಾಗಿದೆ.

ಇದನ್ನೂ ಓದಿ: ತುಂಬಿ ತುಳುಕುತ್ತಿರುವ ಚಿತ್ರದುರ್ಗದ ಐತಿಹಾಸಿಕ ಜಲಮೂಲಗಳು, ಫೋಟೋಸ್​ ನೋಡಿ

ಸರ್ಕಾರ ಮಕ್ಕಳಿಗಾಗಿ 25 ಕೋಟಿ ರೂ. ವೆಚ್ಚ ಮಾಡಿ 7-8 ಎಕರೆ ವಿಸ್ತೀರ್ಣದಲ್ಲಿ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಿದೆ. ಆದರೆ ಅಧಿಕಾರಿಗಳ ಇಂತಹ ನಡೆಯಿಂದಾಗಿ ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುವುದರೊಳಗಾದ್ರೂ ಹೊಸ ಕಟ್ಟಡಕ್ಕೆ ಶಿಫ್ಟ್ ಆಗಿ ಪಾಠದ ಜೊತೆಗೆ ಆಟೋಟದಲ್ಲೂ ಉತ್ತಮ ಸಾಧನೆ ಮಾಡಬೇಕು ಎನ್ನುವ ವಿದ್ಯಾರ್ಥಿಗಳ ಕನಸು ಶೀಘ್ರವಾಗಿ ಈಡೇರಲಿ ಅನ್ನೋದು ಪೋಷಕರು ಹಾಗೂ ಮಕ್ಕಳ ಒತ್ತಾಯವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್