AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ

ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುವ ಭಕ್ತರಿಗಾಗಿ ಕೇಂದ್ರ ಗುಡ್​ ನ್ಯೂಸ್​ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಟ್ವೀಟ್​ ಮಾಡಿದ್ದಾರೆ. ಇದು ಮಲೆನಾಡು, ತುಮಕೂರು, ಬೆಂಗಳೂರು ಮತ್ತು ಕೋಲಾರದ ಭಕ್ತರಿಗೆ ಇದು ಅನುಕೂಲವಾಗಲಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 28, 2025 | 12:20 PM

Share

ಬೆಂಗಳೂರು, ಜೂನ್ 28: ತಿರುಪತಿಗೆ (Tirupati) ಹೋಗುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್​ ನ್ಯೂಸ್​ ನೀಡಿದೆ. ಚಿಕ್ಕಮಗಳೂರು ಟು ತಿರುಪತಿಗೆ ನೂತನ ರೈಲು (Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. ಚಿಕ್ಕಮಗಳೂರು ಟು ತಿರುಪತಿ ನೂತನ ರೈಲಿನ ಸಂಪೂರ್ಣ ವಿವರ ಇಲ್ಲಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ವಿ. ಸೋಮಣ್ಣ, ತಿರುಪತಿಯ ಶ್ರೀ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ (Weekly Train) ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
ಜೋಹ್ರಾನ್ ಮಮ್ದಾನಿ ವಿರುದ್ಧ ಕಾಂಗ್ರೆಸ್, ಬಿಜೆಪಿ ವಾಗ್ದಾಳಿ
Image
ತೆಲಂಗಾಣ: ರೈಲ್ವೆ ಹಳಿ ಮೇಲೆ ಕಾರು ಚಲಾಯಿಸಿದ ಯುವತಿ
Image
ಕಾಜಿಪೇಟೆ ರೈಲು ಉತ್ಪಾದನಾ ಘಟಕದಲ್ಲಿ MEMU ರೈಲುಗಳ ತಯಾರಿ
Image
ರೈಲಿನಡಿ ಬೀಳುತ್ತಿದ್ದವನ ದೇವರಂತೆ ರಕ್ಷಿಸಿದ ಸಿಬ್ಬಂದಿ, ಇಲ್ಲಿದೆ ವಿಡಿಯೋ

ವಿ. ಸೋಮಣ್ಣ ಟ್ವೀಟ್​

ಇದನ್ನೂ ಓದಿ: ಆಷಾಢ ಏಕಾದಶಿ ಪ್ರಯುಕ್ತ ಎರಡು ವಿಶೇಷ ರೈಲು: ಇಲ್ಲಿದೆ ಸಂಚಾರ ವೇಳಾಪಟ್ಟಿ

ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಜನತೆ ಈ ವಾರದ ರೈಲಿನ ಸೌಲಭ್ಯ ಪಡೆದುಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

ರೈಲಿನ ವಿವರ

  • ತಿರುಪತಿ ಟು ಚಿಕ್ಕಮಗಳೂರು (ರೈಲು ಸಂಖ್ಯೆ 17423): ಈ ರೈಲು ಪ್ರತಿ ಗುರುವಾರ ರಾತ್ರಿ 09 ಗಂಟೆಗೆ ತಿರುಪತಿಯಿಂದ ಹೊರಡಲಿದ್ದು, ಮರುದಿನ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಚಿಕ್ಕಮಗಳೂರು ತಲುಪಲಿದೆ.
  • ಚಿಕ್ಕಮಗಳೂರು-ತಿರುಪತಿ (ರೈಲು ಸಂಖ್ಯೆ 17424): ಈ ರೈಲು ಪ್ರತಿ ಶುಕ್ರವಾರ ಸಂಜೆ 05:30 ಚಿಕ್ಕಮಗಳೂರಿನಿಂದ ಹೊರಡಲಿದ್ದು, ಶನಿವಾರ ಬೆಳಿಗ್ಗೆ 07:40ಕ್ಕೆ ತಿರುಪತಿ ತಲುಪಲಿದೆ.

ನಿಲ್ದಾಣಗಳು ಹೀಗಿವೆ

ಚಿತ್ತೂರು, ಕಟ್ಟಾಡಿ, ಕುಪ್ಪಂ, ಬಂಗಾರಪೇಟೆ, ವೈಟ್‌ಫೀಲ್ಡ್, ಕೆ ಆರ್ ಪುರಂ, ಎಸ್‌ಎಂವಿಬಿ ಬೆಂಗಳೂರು, ಚಿಕ್ಕ ಬಾಣಾವರ, ತುಮಕೂರು, ತಿಪಟೂರು, ಅರಸೀಕೆರೆ, ದೇವನೂರು, ಬಿರೂರು, ಕಡೂರು, ಬಿಸಲೇಹಳ್ಳಿ, ಸಕರಾಯಪಟ್ಟಣ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More