AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿ ಹೋದ ಬಾಲಕಿ: ‘ನಿನ್ನೆಯೂ ವಿದ್ಯಾರ್ಥಿನಿಗೆ ಹುಷಾರಿಲ್ಲದಿದ್ದರೆ ಚೆನ್ನಾಗಿರುತ್ತಿತ್ತು, ಆಕೆಯ ಜೀವ ಉಳಿಯುತ್ತಿತ್ತು: ಕಣ್ಣೀರಿಟ್ಟ ಶಿಕ್ಷಕರು

ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯ ಪತ್ತೆಗಾಗಿ ಇಂದು ಕೂಡ ಶೋಧಕಾರ್ಯ ಮುಂದುವರೆದಿದೆ. ತನ್ನ ಸಹೋದರಿ ತನ್ನ ಕಣ್ಣೆದುರೇ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಸಹೋದರ ತೊದಲು ನುಡಿಗಳಿಂದ ಮಾತನಾಡಿದ್ದು, ತಾಯಿಯೂ ಕಣ್ಣೀರಿಟ್ಟು ಘಟನೆಯನ್ನು ವಿವರಿಸಿದ್ದಾರೆ.

ಕೊಚ್ಚಿ ಹೋದ ಬಾಲಕಿ: 'ನಿನ್ನೆಯೂ ವಿದ್ಯಾರ್ಥಿನಿಗೆ ಹುಷಾರಿಲ್ಲದಿದ್ದರೆ ಚೆನ್ನಾಗಿರುತ್ತಿತ್ತು, ಆಕೆಯ ಜೀವ ಉಳಿಯುತ್ತಿತ್ತು: ಕಣ್ಣೀರಿಟ್ಟ ಶಿಕ್ಷಕರು
ಬಾಲಕಿ ಸುಪ್ರೀತಾ ಮತ್ತು ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jul 05, 2022 | 12:31 PM

Share

ಚಿಕ್ಕಮಗಳೂರು: ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯ ಪತ್ತೆಗಾಗಿ ಇಂದು ಕೂಡ ಶೋಧಕಾರ್ಯ ಮುಂದುವರೆದಿದೆ. ನಿನ್ನೆ ಶಾಲೆ ಮುಗಿಸಿ ಮನೆಗೆ ಹೋಗುವಾಗ ಬಾಲಕಿ ಕೊಚ್ಚಿಹೋಗಿದ್ದಾಳೆ. ಬಾಲಕಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಶಿಕ್ಷಕ ವೃಂದ ದುಃಖತಪ್ತವಾಗಿದೆ. ಆ ಮಗು ಅನಾರೋಗ್ಯದಿಂದ ಒಂದು ವಾರ ಶಾಲೆಗೆ ಬಂದಿರಲಿಲ್ಲ. ಒಂದು ವಾರದ ನಂತರ ಆಕೆ ಶಾಲೆಗೆ ಬಂದಿದ್ದಾಳೆ. ನಿನ್ನೆಯು ಕೂಡ ಬಾಲಕಿಗೆ ಹುಷಾರಿಲ್ಲದಿದ್ದರೆ ಚೆನ್ನಾಗಿರುತ್ತಿತ್ತು. ಆಗ ಸುಪ್ರೀತಾ ಶಾಲೆಗೆ ಬರುತ್ತಿರಲಿಲ್ಲ, ಜೀವ ಉಳಿಯುತ್ತಿತ್ತು ಎಂದು ಟಿವಿ9 ಜೊತೆ ಮಾತನಾಡುತ್ತಾ ಶಿಕ್ಷಕರು ಕಣ್ಣೀರು ಹಾಕಿದ್ದಾರೆ.

ನಿನ್ನೆ ನಡೆದಿದ್ದ ಹೃದಯ ವಿದ್ರಾವಕ ಘಟನೆಯನ್ನು ಕಣ್ಣಾರೆ ಕಂಡ ಬಗ್ಗೆ 1ನೇ ತರಗತಿಯಲ್ಲಿ ಓದುತ್ತಿದ್ದ ಸುಪ್ರೀತಾಳ ಸಹೋದರ ಸೈಮಂಡ್ಸ್ ತೊದಲು ನುಡಿಗಳಿಂದ ಮಾತನಾಡಿದ್ದು, ಕೈ ಕಾಲು ತೊಳೆಯಲು ಹಳ್ಳಕ್ಕೆ ತಂಗಿ ಹೋಗಿದ್ದಳು. ಈ ವೇಳೆ ನೀರು ಜೋರಾಗಿ ಬಂತು, ಸುಪ್ರೀತಾಳನ್ನ ಕೊಚ್ಚಿಕೊಂಡು ಹೋಯ್ತು ಎಂದಿದ್ದಾನೆ. ನಿನ್ನೆ ಶಾಲೆಯಿಂದ ಇಬ್ಬರು ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘೋರ ದುರಂತ ನಡೆದಿದೆ.

ಇದನ್ನೂ ಓದಿ: ಕರ್ನಾಟಕದ ಹಲವೆಡೆ ಭಾರಿ ಮಳೆ, ಇಲ್ಲಿದೆ ಕೆಲವು ಅವಾಂತರಗಳ ಫೋಟೋಗಳು

ಶಾಲೆಗೆ ಹೋಗುವಾಗ ಮಗಳ ಮುಖವನ್ನೂ ಸರಿಯಾಗಿ ನೋಡಲಾಗಿರಲಿಲ್ಲ

ಮಗಳನ್ನು ಕಳೆದುಕೊಂಡ ದುಃಖದಲ್ಲಿರುವ ಸುಪ್ರೀತಾಳ ತಾಯಿ ಗೌರಿ, ನಿನ್ನೆ ಶಾಲೆಗೆ ಕಳುಹಿಸುವಾಗ ಆಕೆಯ ಮುಖವನ್ನೂ ಸರಿಯಾಗಿ ನೋಡಲು ಆಗಿರಿಲ್ಲ ಎಂದು ಹೇಳುತ್ತಾ ಕಣ್ಣೀರಿಟಿದ್ದಾರೆ. ಮಗಳಿಗೆ ಜ್ವರವಿದ್ದ ಕಾರಣ ಒಂದು ವಾರ ಶಾಲೆಗೆ ಕಳುಹಿಸಿರಲಿಲ್ಲ. ನಾಳೆ ಶಾಲೆಗೆ ಹೋಗುತ್ತೇನೆ ಎಂದು ಭಾನುವಾರವೇ ಸಿದ್ಧತೆ ಮಾಡಿಕೊಂಡಿದ್ದಳು. ಮಗಳಿಗೆ ಮತ್ತು ನನಗೂ ಹುಷಾರಿರಲಿಲ್ಲ, ನಿನ್ನೆ ಮಗಳು ಶಾಲೆಗೆ ಹೊರಡುವಾಗ ಆಕೆಯ ತಲೆ ಬಾಚಿದ್ದೇನೆ. ಶಾಲೆಗೆ ಹೋಗುವಾಗ ಆಕೆಯ ಮುಖವನ್ನೂ ಸರಿಯಾಗಿ ನೋಡಲಿಲ್ಲ. ಶಾಲೆಯಿಂದ ಬರುವಾಗ ಛತ್ರಿಯನ್ನ ಇಟ್ಟು ಹಳ್ಳಕ್ಕೆ ಕಾಲು ತೊಳೆಯಲು ಹೋಗಿದ್ದಾಳೆ. ಆ ವೇಳೆ ಛತ್ರಿ ಹಾರಿ ಹೋಗಿದ್ದನ್ನು ಹಿಡಿಯಲು ಹೋಗಿ ನೀರಿಗೆ ಬಿದ್ದು ಕೊಚ್ಚಿ ಹೋಗಿದ್ದಾಳೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Dakshina Kannada Rain: ಕರಾವಳಿಯಲ್ಲಿ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ರಜೆ

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ