AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: 3 ದಿನ ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ

ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್​​​​5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್​ಪಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಮಗಳೂರು: 3 ದಿನ ಮುಳ್ಳಯ್ಯನಗಿರಿ ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ
ದತ್ತಪೀಠ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Oct 27, 2023 | 12:23 PM

Share

ಚಿಕ್ಕಮಗಳೂರು ಅ.27: ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರಿಂದ ದತ್ತಮಾಲಾ ಅಭಿಯಾನ (Dattamala) ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಮುಳ್ಳಯ್ಯನಗಿರಿ, ದತ್ತಪೀಠ (Dattapeeta) ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ನವೆಂಬರ್ 4ರ ಬೆಳಗ್ಗೆ 6ರಿಂದ ನವೆಂಬರ್ 6ರ ಬೆಳಗ್ಗೆ 10ರವರೆಗೆ ಚಂದ್ರದ್ರೋಣ ಪವರ್ತ ಸಾಲಿನ ದತ್ತಪೀಠ, ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ (Mullayangiri), ಹೊನ್ನಮ್ಮನಹಳ್ಳ, ಮಾಣಿಕ್ಯಾಧಾರ, ಗಾಳಿಕೆರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರಿಂದ ಅಕ್ಟೋಬರ್ 30ರಿಂದ ನವೆಂಬರ್​​​​5ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಎಸ್​ಪಿ ದತ್ತಪೀಠಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

7 ಪ್ರಮುಖ ಬೇಡಿಕೆ ಮುಂದಿಟ್ಟ ಶ್ರೀರಾಮಸೇನೆ

ಅಕ್ಟೋಬರ್ 30 ರಿಂದ ರಾಜ್ಯಾದ್ಯಂತ ಏಳು ದಿನಗಳ ಕಾಲ ದತ್ತಮಾಲೆ ಅಭಿಯಾನ ನಡೆಯಲಿದೆ. ದತ್ತಮಾಲೆ  ಅಭಿಯಾನದ ಮೂಲಕ ಏಳು ಪ್ರಮುಖ ಬೇಡಿಕೆಗಳನ್ನು ರಾಜ್ಯ ಸರ್ಕಾರದ ಮುಂದಿಡಲು ನಿರ್ಧರಿಸಿದೆ. ನವೆಂಬರ್ 5 ರಂದು ಶ್ರೀರಾಮಸೇನೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪವರ್ತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ಆಗಮಿಸಲಿದ್ದಾರೆ. ಅಂದು ದತ್ತಪೀಠದಲ್ಲಿ ಹೋಮ, ದತ್ತ ಪಾದುಕೆ‌ ದರ್ಶನ ನಡೆಯಲಿದೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಗುರು ದತ್ತಾತ್ರೇಯ ಸ್ವಾಮಿಗೆ ಅರ್ಚಕರಿಂದ ನೆರೆವೇರಿದ ಪೂಜೆ

ದತ್ತಮಾಲೆ ಅಭಿಮಾಯನದ ಮೂಲಕ ಶ್ರೀರಾಮಸೇನೆ ಕಾರ್ಯಕರ್ತರು ಸರ್ಕಾರಕ್ಕೆ ಏಳು ಬೇಡಿಕೆಗಳನ್ನು ಸಲ್ಲಿಸಲಿದ್ದಾರೆ. “ಕಾಣೆಯಾದ ಅಮೂಲ್ಯ ವಿಗ್ರಹಗಳ ಬಗ್ಗೆ ತನಿಖೆ ನಡೆಸಬೇಕು. ದತ್ತಪೀಠದಲ್ಲಿ ಇಸ್ಲಾಂ ಚಟುವಟಿಕೆಗೆ ಅವಕಾಶ ನೀಡಬಾರದು. ದತ್ತಪೀಠದಲ್ಲಿ ದತ್ತಾತ್ರೇಯ ವಿಗ್ರಹ ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು. ಉರ್ದು ನಾಮಫಲಕವನ್ನ ತೆಗೆಯಬೇಕು. ದತ್ತಪೀಠದಲ್ಲಿರುವ ಗೋರಿಗಳ ಸ್ಥಳಾಂತರಿಸಬೇಕು” ಎಂದು ಆಗ್ರಹಿಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:33 am, Fri, 27 October 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು