AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು ಜಿಲ್ಲೆಯ 5 ಗ್ರಾಮಗಳು ಅಪಾಯಕರ ಸ್ಥಿತಿಯಲ್ಲಿ: ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸಮೀಕ್ಷೆ ನಡೆಸಿದ ಬಳಿಕ ಇದೀಗ ಚಿಕ್ಕಮಗಳೂರು ಜಿಲ್ಲೆಯ ಐದು ಗ್ರಾಮಗಳ ಜನರಿಗೆ ಸಂಕಷ್ಟ ಎದುರಾಗಿದೆ. ವಾಸಿಸುತ್ತಿರುವ ಜಾಗ ತೊರೆಯಬೇಕಾಗುವ ಅನಿವಾರ್ಯತೆ ಎದುರಾಗುವ ಎಲ್ಲ ಸನ್ನಿವೇಶಗಳೂ ಸೃಷ್ಟಿಯಾಗಿವೆ. ಹಾಗಾದರೆ, ಆ ಐದು ಗ್ರಾಮಗಳು ಯಾವುವು? ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸಮೀಕ್ಷೆಯಲ್ಲಿ ಕಂಡುಬಂದಿದ್ದೇನು? ಎಲ್ಲ ಮಾಹಿತಿ ಇಲ್ಲಿದೆ.

ಚಿಕ್ಕಮಗಳೂರು ಜಿಲ್ಲೆಯ 5 ಗ್ರಾಮಗಳು ಅಪಾಯಕರ ಸ್ಥಿತಿಯಲ್ಲಿ: ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ
ಭೂಕುಸಿತ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Oct 17, 2024 | 10:27 AM

Share

ಚಿಕ್ಕಮಗಳೂರು, ಅಕ್ಟೋಬರ್ 17: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿದ್ದು, ಅಲ್ಲಿನ ಕುಟುಂಬಗಳ ಸ್ಥಳಾಂತರ ಮಾಡುವಂತೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸೂಚನೆ ನೀಡಿದೆ. ಈ ಗ್ರಾಮಗಳಲ್ಲಿ ಮತ್ತೆ ಭೂ ಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಗ್ರಾಮಗಳಲ್ಲಿರುವ ಜನರ ಸ್ಥಳಾಂತರಕ್ಕೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

2019 ರಲ್ಲಿ ಮಹಾಮಳೆಗೆ ಈ 5 ಗ್ರಾಮಗಳಲ್ಲಿ ಭೂಕುಸಿತ ಸಂಭವಿಸಿತ್ತು. ಅದೇ ಗ್ರಾಮಗಳಲ್ಲಿ ಮತ್ತೆ ಭೂಮಿ ಕುಸಿಯುವ ಸೂಚನೆಯನ್ನು ವಿಜ್ಞಾನಿಗಳು ನೀಡಿದ್ದಾರೆ.

ಐದು ಡೇಂಜರಸ್ ಗ್ರಾಮಗಳು ಯಾವುವು?

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡೇತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಸ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ಇತ್ತೀಚೆಗೆ ಜಿಲ್ಲಾಧಿಕಾರಿಗೆ ಸಲ್ಲಿಸಿದ ಸಮೀಕ್ಷಾ ವರದಿಯಲ್ಲಿ ಉಲ್ಲೇಖಿಸಿದೆ. ಮಳೆ‌ ಹೆಚ್ಚಾದ್ರೆ ಮತ್ತೆ ಈ 5 ಗ್ರಾಮಗಳಲ್ಲಿ ಭೂ ಕುಸಿತವಾಗುವ ಸಾಧ್ಯತೆ ಎಂದು ವರದಿಯಲ್ಲಿ ಹೇಳಲಾಗಿದೆ.

5 ಗ್ರಾಮಗಳ ಜನರ ಸ್ಥಳಾಂತರಕ್ಕೆ ಡಿಸಿ ಸೂಚನೆ

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿ ಆಧರಿಸಿ ಕ್ರಮ ಕೈಗೊಳ್ಳಲು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದಾರೆ. ಗುಡ್ಡೇತೋಟ ಸೇರಿದಂತೆ 5 ಗ್ರಾಮಗಳ ಸ್ಥಳಾಂತರ ಮಾಡಲು ಸೂಚನೆ ನೀಡಲಾಗಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯನ್ನು ಸರ್ಕಾರಕ್ಕೆ ಕಳುಹಿಸಿ ಚರ್ಚೆ ನಡೆಸಲಾಗುತ್ತದೆ. ಸರ್ಕಾರದ ಸೂಚನೆ ಮೇರೆಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

5 villages in Chikmagaluru district are at risk: geological survey of india advised to relocate families

ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ವರದಿಯ ಪ್ರತಿ

ಕೇರಳದ ವಯನಾಡು ಗುಡ್ಡ ಕುಸಿತ ದುರಂತದ ಬಳಿಕ‌ ಕರ್ನಾಟಕದಲ್ಲಿಯೂ ಸಂಭಾವ್ಯ ಅಪಾಯಕರ ಪ್ರದೇಶಗಳ ಬಗ್ಗೆ ಪರಿಶೀಲನೆ ನಡೆಸುವಂತೆ ಜಿಯೋಲಾಜಿಕಲ್ ಸರ್ವೇ ತಂಡದ ತನಿಖೆಗೆ ಸರ್ಕಾರ ಆದೇಶ ನೀಡಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಿದ ತಂಡಕ್ಕೆ ಆಘಾತಕಾರಿ ಅಂಶಗಳು ತಿಳಿದುಬಂದಿದ್ದವು.

ಇದನ್ನೂ ಓದಿ: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಅಪಾಯಕಾರಿ: ಜಿಯೋಲಾಜಿಕಲ್ ಸರ್ವೇ ವರದಿ

ವಾಹನಗಳ ಅತಿಯಾದ ದಟ್ಟಣೆ, ಅವೈಜ್ಞಾನಿಕ ಕಾಮಗಾರಿ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ. ಚಂದ್ರದ್ರೋಣ ಪರ್ವತದ ಸಾಲು, ಮುಳ್ಳಯ್ಯನಗಿರಿ ಹಾಗೂ ಚಾರ್ಮಾಡಿ ಘಾಟಿ ಕೂಡ ಬಹಳ ಅಪಾಯಕಾರಿ ಪ್ರದೇಶಗಳಾಗಿ ಪರಿಣಮಿಸಿವೆ ಎಂದು ಜಿಯೋಲಾಜಿಕಲ್ ಸರ್ವೇ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ಬಿಗ್ ಬಾಸ್ ಮನೆಯೊಳಗೆ ಗಿಲ್ಲಿಗೆ ಬಂತ ಕೊರೊನಾ? ಮೂಡಿದೆ ಅನುಮಾನ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ