AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ…ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ

ನಾಳೆ ಅಂದರೆ ಜನವರಿ 08 ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. 6 ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಕರ್ನಾಟಕ, ಕೇರಳ, ತಮಿಳುನಾಡು ಮೂಲದ ನಕ್ಸಲರು ಶರಣಾಗತಿಯಾಗಲಿದ್ದಾರೆ. ಕರ್ನಾಟಕ ಸೇರಿ ಹೊರ ರಾಜ್ಯದ ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗುತ್ತಿದ್ದಾರೆ. ಇನ್ನು ಶರಣಾಗತಿ ನಕ್ಸಲರು ನಡೆಸಿದ್ದ ಸಭೆಯ ಫೋಟೋಗಳು ಲಭ್ಯವಾಗಿವೆ. ಹಾಗಾದ್ರೆ, ಯಾರೆಲ್ಲ ಶರಣಾಗಲಿದ್ದಾರೆ ಎನ್ನುವ ವಿವರ ಇಲ್ಲಿದೆ.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ...ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ
ನಕ್ಸಲರು
ರಮೇಶ್ ಬಿ. ಜವಳಗೇರಾ
|

Updated on: Jan 07, 2025 | 8:41 PM

Share

ಚಿಕ್ಕಮಗಳೂರು, (ಜನವರಿ 07): ನಾಳೆ 6 ಮಂದಿ ನಕ್ಸಲರು ಶರಣಾಗೋದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆ್ಯಕ್ಟಿವ್ ಆಗಿದ್ದ ನಕ್ಸಲರನ್ನ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ ಸಭೆ ನಡೆಸಿದ್ದಾರೆ. ಶರಣಾಗತಿ ಕಮಿಟಿ ಸಭೆಯ ಎಕ್ಸ್‌ಕ್ಲೂಸಿವ್ ಫೋಟೋಗಳು ಟಿವಿ9ಗೆ ಲಭ್ಯವಾಗಿದೆ.

1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ), 2. ವನಜಾಕ್ಷಿ (ಬಾಳೆಹೊಳೆ ಕಳಸ), 3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ), 4. ಮಾರಪ್ಪ ಅರೋಳಿ (ರಾಯಚೂರು). 5. ವಸಂತ ಟಿ (ತಮಿಳುನಾಡು)., 6. ಎನ್. ಜೀಶಾ (ಕೇರಳ) ಈ 6 ಮಂದಿ ನಕ್ಸಲರು ಈಗಾಗಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ಶರಣಾಗತಿ ಪತ್ರ ನೀಡಿದ್ದು, ನಾಳೆ ಸಂಜೆ ವೇಳೆಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ರಾಷ್ಟ್ರೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಶರಣಾಗತಿಗೂ ಮುನ್ನ ನಕ್ಸಲರ ಷರತ್ತು: ಸರ್ಕಾರಕ್ಕೆ ಬರೆದ ಪತ್ರದಲ್ಲಿ ಹಲವು ಬೇಡಿಕೆ

ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ ಬರುತ್ತೇವೆ. ನಮ್ಮ ಬೇಡಿಕೆಯನ್ನ ಎರಡು ಸಮಿತಿ ಸರ್ಕಾರಕ್ಕೆ ತಲುಪಿಸಿದೆ. ನಾವು ಪ್ರಜಾತಾಂತ್ರಿಕ ಸಾಂವಿಧಾನಿಕ ಹೋರಾಟ ಮಾಡುತ್ತೇವೆ. ಕೊನೆ ವರೆಗೂ ಜನರ ಪರ ನಿಂತು ಹೋರಾಟ ಮಾಡುತ್ತೇವೆ. ಯಾವ ಕಾರಣಕ್ಕೂ ಜನಪರ ಹೋರಾಟದಿಂದ ಹಿಂದೆ ಸರಿಯಲ್ಲ. ನಮ್ಮ ಉಸಿರು ಇರುವವರೆಗೂ ನಾವು ಹೋರಾಟ ಮಾಡುತ್ತೇವೆ.ನಾವೆಲ್ಲರೂ ನಾಳೆ ನಿಮ್ಮ ಮುಂದೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​