Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ…ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ

ನಾಳೆ ಅಂದರೆ ಜನವರಿ 08 ಕರ್ನಾಟಕದ ಇತಿಹಾಸದಲ್ಲೇ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನವಾಗಲಿದೆ. 6 ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ಕರ್ನಾಟಕ, ಕೇರಳ, ತಮಿಳುನಾಡು ಮೂಲದ ನಕ್ಸಲರು ಶರಣಾಗತಿಯಾಗಲಿದ್ದಾರೆ. ಕರ್ನಾಟಕ ಸೇರಿ ಹೊರ ರಾಜ್ಯದ ಮೋಸ್ಟ್‌ ವಾಂಟೆಡ್‌ ನಕ್ಸಲರು ಶರಣಾಗುತ್ತಿದ್ದಾರೆ. ಇನ್ನು ಶರಣಾಗತಿ ನಕ್ಸಲರು ನಡೆಸಿದ್ದ ಸಭೆಯ ಫೋಟೋಗಳು ಲಭ್ಯವಾಗಿವೆ. ಹಾಗಾದ್ರೆ, ಯಾರೆಲ್ಲ ಶರಣಾಗಲಿದ್ದಾರೆ ಎನ್ನುವ ವಿವರ ಇಲ್ಲಿದೆ.

ನಾಳೆ ಮೋಸ್ಟ್‌ ವಾಂಟೆಡ್‌ 6 ನಕ್ಸಲ್‌ ಶರಣಾಗತಿ...ನಾವೆಲ್ಲರೂ ನಿಮ್ಮ ಮುಂದೆ ಬರುತ್ತೇವೆ ಎಂದ ನಾಯಕಿ
ನಕ್ಸಲರು
Follow us
ರಮೇಶ್ ಬಿ. ಜವಳಗೇರಾ
|

Updated on: Jan 07, 2025 | 8:41 PM

ಚಿಕ್ಕಮಗಳೂರು, (ಜನವರಿ 07): ನಾಳೆ 6 ಮಂದಿ ನಕ್ಸಲರು ಶರಣಾಗೋದು ಬಹುತೇಕ ಫಿಕ್ಸ್ ಆಗಿದೆ. ಈಗಾಗಲೇ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಸದಸ್ಯರು ಕಾಡಿಗೆ ತೆರಳಿ ಮನವೋಲಿಸಿದ್ದಾರೆ. ಶಿವಮೊಗ್ಗದ ಶ್ರೀಪಾಲ್ ಸೇರಿ ಹಲವರು ನಕ್ಸಲರನ್ನ ಕಾಡಿನಲ್ಲಿ ಮನವೊಲಿಸಿ ಮುಖ್ಯವಾಹಿನಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಆ್ಯಕ್ಟಿವ್ ಆಗಿದ್ದ ನಕ್ಸಲರನ್ನ ಶಾಂತಿಗಾಗಿ ನಾಗರೀಕ ವೇದಿಕೆ ಹಾಗೂ ಶರಣಾಗತಿ ಕಮಿಟಿ ಕಾಡಿನೊಳಗೆ ಭೇಟಿಯಾಗಿ ಸಭೆ ನಡೆಸಿದ್ದಾರೆ. ಶರಣಾಗತಿ ಕಮಿಟಿ ಸಭೆಯ ಎಕ್ಸ್‌ಕ್ಲೂಸಿವ್ ಫೋಟೋಗಳು ಟಿವಿ9ಗೆ ಲಭ್ಯವಾಗಿದೆ.

1. ಮುಂಡುಗಾರು ಲತಾ (ಮುಂಡಗಾರು ಶೃಂಗೇರಿ), 2. ವನಜಾಕ್ಷಿ (ಬಾಳೆಹೊಳೆ ಕಳಸ), 3. ಸುಂದರಿ (ಕುಂತಲೂರು ದಕ್ಷಿಣ ಕನ್ನಡ), 4. ಮಾರಪ್ಪ ಅರೋಳಿ (ರಾಯಚೂರು). 5. ವಸಂತ ಟಿ (ತಮಿಳುನಾಡು)., 6. ಎನ್. ಜೀಶಾ (ಕೇರಳ) ಈ 6 ಮಂದಿ ನಕ್ಸಲರು ಈಗಾಗಲೇ ಶಾಂತಿಗಾಗಿ ನಾಗರಿಕ ವೇದಿಕೆಗೆ ಶರಣಾಗತಿ ಪತ್ರ ನೀಡಿದ್ದು, ನಾಳೆ ಸಂಜೆ ವೇಳೆಗೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಶರಣಾಗಲಿದ್ದಾರೆ. ರಾಷ್ಟ್ರೀಯ ಗುಪ್ತಚರ ಇಲಾಖೆಯ ಅಧಿಕಾರಿಗಳು ಈ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿ ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ: ಶರಣಾಗತಿಗೂ ಮುನ್ನ ನಕ್ಸಲರ ಷರತ್ತು: ಸರ್ಕಾರಕ್ಕೆ ಬರೆದ ಪತ್ರದಲ್ಲಿ ಹಲವು ಬೇಡಿಕೆ

ಚಿಕ್ಕಮಗಳೂರಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಪ್ರತಿಕ್ರಿಯಿಸಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆ ಶರಣಾಗುತ್ತಿದ್ದೇವೆ. ನಾವು ಸಮಾಜದ ಮುಖ್ಯವಾಹಿನಿಗೆ ಬರುತ್ತೇವೆ. ನಮ್ಮ ಬೇಡಿಕೆಯನ್ನ ಎರಡು ಸಮಿತಿ ಸರ್ಕಾರಕ್ಕೆ ತಲುಪಿಸಿದೆ. ನಾವು ಪ್ರಜಾತಾಂತ್ರಿಕ ಸಾಂವಿಧಾನಿಕ ಹೋರಾಟ ಮಾಡುತ್ತೇವೆ. ಕೊನೆ ವರೆಗೂ ಜನರ ಪರ ನಿಂತು ಹೋರಾಟ ಮಾಡುತ್ತೇವೆ. ಯಾವ ಕಾರಣಕ್ಕೂ ಜನಪರ ಹೋರಾಟದಿಂದ ಹಿಂದೆ ಸರಿಯಲ್ಲ. ನಮ್ಮ ಉಸಿರು ಇರುವವರೆಗೂ ನಾವು ಹೋರಾಟ ಮಾಡುತ್ತೇವೆ.ನಾವೆಲ್ಲರೂ ನಾಳೆ ನಿಮ್ಮ ಮುಂದೆ ಬರುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್