AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್‌ ಜತೆ ಆಟವಾಡುವಾಗ ಮಿಸ್ ಫೈರ್, 7 ವರ್ಷದ ಮಗುವಿನ ಹೃದಯಕ್ಕೆ ಹೊಕ್ಕಿದ ಗುಂಡು

ಏರ್ ಗನ್​ ಜೊತೆ ಆಟವಾಡುವಾಗ ಮಿಸ್​ ಫೈರ್ ಆಗಿ ಏಳು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳಿಗೆ ಆಟ ಆಡಲು ಯಾವ ವಸ್ತುಗಳು ಕೊಡಬೇಕು, ಯಾವುದನ್ನು ಕೊಡಬಾರದು ಎನ್ನುವ ಪ್ರಜ್ಞೆ ಇರಬೇಕು. ಅದು ಇಲ್ಲ ಅಂದ್ರೆ ಇಂತಹ ಅನಾಹುತಗಳು ಸಂಭವಿಸುತ್ತವೆ.

ಗನ್‌ ಜತೆ ಆಟವಾಡುವಾಗ ಮಿಸ್ ಫೈರ್, 7 ವರ್ಷದ ಮಗುವಿನ ಹೃದಯಕ್ಕೆ ಹೊಕ್ಕಿದ ಗುಂಡು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 11, 2024 | 11:03 PM

Share

ಚಿಕ್ಕಮಗಳೂರು, (ಏಪ್ರಿಲ್ 11): ಪೋಷಕರ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಹೌದು.. ಆಟವಾಡುವಾಗ ಏರ್​ ಗನ್ (Air Gun) ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಏರ್‌ ಗನ್‌ (Air Gun) ಇಟ್ಟುಕೊಂಡು ಆಟ ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದಾನೆ. ಗನ್ ಮಿಸ್‌ ಫೈರ್‌ (misfire) ಆಗಿ ಗುಂಡು ಬಾಲಕನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.

ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್​ ಒತ್ತಿದ್ದಾನೆ. ಪರಿಣಾಮ ಏರ್​ ಗನ್ ಫೈರ್ ಆಗಿದ್ದು, ನೇರವಾಗಿ ​ಗನ್​ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ. ಇನ್ನು ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ಸಣ್ಣ ನಿರ್ಲಕ್ಷ್ಯ ಮುದ್ದಾದ ಮಗುವಿನ ಪ್ರಾಣಪಕ್ಷಿ ಹಾರಿಹೋಗಿದೆ. ನೋಡಿ ಒಂದು ಸಣ್ಣ ನಿರ್ಲಕ್ಷ್ಯದಿಂದ ಏನೆಲ್ಲಾ ದುರಂತ ಸಂಭವಿಸುತ್ತವೆ ಎನ್ನುವುದಕ್ಕೆ ಈ ಪ್ರಕರಣ ಉದಾಹರಣೆ. ಈ ಪ್ರಕರಣದಿಂದ ಪೋಷಕರು ಎಚ್ಚೆತ್ತುಕೊಳ್ಳಬೇಕು. ಮಕ್ಕಳ ಕೈಯಲ್ಲಿ ಯಾವ ವಸ್ತು ಕೊಡಬೇಕು. ಯಾವುದನ್ನು ಕೊಡಬಾರದು ಎನ್ನುವುದನ್ನು ಕಲಿಯಬೇಕು.

Published On - 10:46 pm, Thu, 11 April 24

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ