AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್‌ ಜತೆ ಆಟವಾಡುವಾಗ ಮಿಸ್ ಫೈರ್, 7 ವರ್ಷದ ಮಗುವಿನ ಹೃದಯಕ್ಕೆ ಹೊಕ್ಕಿದ ಗುಂಡು

ಏರ್ ಗನ್​ ಜೊತೆ ಆಟವಾಡುವಾಗ ಮಿಸ್​ ಫೈರ್ ಆಗಿ ಏಳು ವರ್ಷದ ಮಗು ಸಾವನ್ನಪ್ಪಿರುವ ದುರ್ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮಕ್ಕಳಿಗೆ ಆಟ ಆಡಲು ಯಾವ ವಸ್ತುಗಳು ಕೊಡಬೇಕು, ಯಾವುದನ್ನು ಕೊಡಬಾರದು ಎನ್ನುವ ಪ್ರಜ್ಞೆ ಇರಬೇಕು. ಅದು ಇಲ್ಲ ಅಂದ್ರೆ ಇಂತಹ ಅನಾಹುತಗಳು ಸಂಭವಿಸುತ್ತವೆ.

ಗನ್‌ ಜತೆ ಆಟವಾಡುವಾಗ ಮಿಸ್ ಫೈರ್, 7 ವರ್ಷದ ಮಗುವಿನ ಹೃದಯಕ್ಕೆ ಹೊಕ್ಕಿದ ಗುಂಡು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 11, 2024 | 11:03 PM

Share

ಚಿಕ್ಕಮಗಳೂರು, (ಏಪ್ರಿಲ್ 11): ಪೋಷಕರ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಹೌದು.. ಆಟವಾಡುವಾಗ ಏರ್​ ಗನ್ (Air Gun) ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಏರ್‌ ಗನ್‌ (Air Gun) ಇಟ್ಟುಕೊಂಡು ಆಟ ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದಾನೆ. ಗನ್ ಮಿಸ್‌ ಫೈರ್‌ (misfire) ಆಗಿ ಗುಂಡು ಬಾಲಕನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.

ಕಾಫಿ ತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್​ ಒತ್ತಿದ್ದಾನೆ. ಪರಿಣಾಮ ಏರ್​ ಗನ್ ಫೈರ್ ಆಗಿದ್ದು, ನೇರವಾಗಿ ​ಗನ್​ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ. ಇನ್ನು ಈ ಬಗ್ಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದು ಸಣ್ಣ ನಿರ್ಲಕ್ಷ್ಯ ಮುದ್ದಾದ ಮಗುವಿನ ಪ್ರಾಣಪಕ್ಷಿ ಹಾರಿಹೋಗಿದೆ. ನೋಡಿ ಒಂದು ಸಣ್ಣ ನಿರ್ಲಕ್ಷ್ಯದಿಂದ ಏನೆಲ್ಲಾ ದುರಂತ ಸಂಭವಿಸುತ್ತವೆ ಎನ್ನುವುದಕ್ಕೆ ಈ ಪ್ರಕರಣ ಉದಾಹರಣೆ. ಈ ಪ್ರಕರಣದಿಂದ ಪೋಷಕರು ಎಚ್ಚೆತ್ತುಕೊಳ್ಳಬೇಕು. ಮಕ್ಕಳ ಕೈಯಲ್ಲಿ ಯಾವ ವಸ್ತು ಕೊಡಬೇಕು. ಯಾವುದನ್ನು ಕೊಡಬಾರದು ಎನ್ನುವುದನ್ನು ಕಲಿಯಬೇಕು.

Published On - 10:46 pm, Thu, 11 April 24

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್