AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಹೊಸ ಮೊಬೈಲ್ ಕೊಡಿಸುವಂತೆ ಹಠ, ಆತ್ಮಹತ್ಯಗೆ ಯತ್ನಿಸಿದ ಯುವಕ ದುರಂತ ಅಂತ್ಯ

ಮೊದಲಿದ್ದ ಫೋನ್ ಕಳೆದುಕೊಂಡು ಪರದಾಡುತ್ತಿದ್ದ ಯುವಕನೋರ್ವ ಹೊಸ ಮೊಬೈಲ್​ ಕೊಡಿಸುವಂತೆ ಅಜ್ಜನ ಬಳಿ ಬೇಡಿಕೆ ಇಟ್ಟಿದ್ದ. ಆದ್ರೆ, ಅಜ್ಜ ಈರುಳ್ಳಿ ಬೆಳೆ ಬಂದ ಮೇಲೆ ಕೊಡಿಸುತ್ತೇನೆಂದು ಹೇಳಿದ್ದ. ಆದರೂ ಸುಮ್ನೆ ಇರದ ಮೊಮ್ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ದುರದೃಷ್ಟವಶಾತ್ ಯುವಕನ ಪ್ರಾಣ ಪಕ್ಷಿ ಹಾರಿಹೋಗಿದೆ.

ಚಿತ್ರದುರ್ಗ: ಹೊಸ ಮೊಬೈಲ್ ಕೊಡಿಸುವಂತೆ ಹಠ, ಆತ್ಮಹತ್ಯಗೆ ಯತ್ನಿಸಿದ ಯುವಕ ದುರಂತ ಅಂತ್ಯ
ಮೃತ ಯುವಕ
ಬಸವರಾಜ ಮುದನೂರ್, ಚಿತ್ರದುರ್ಗ
| Edited By: |

Updated on:Oct 20, 2023 | 10:48 AM

Share

ಚಿತ್ರದುರ್ಗ, (ಅಕ್ಟೋಬರ್ 20): ಮೊಬೈಲ್ (mobile phone) ಕೊಡಿಸುವಂತೆ ಅಜ್ಜನಿಗೆ ಬ್ಲ್ಯಾಕ್​ ಮಾಡಲು ವಿಷ ಸೇವಿಸಿ ಆತ್ಮಹತ್ಯೆಗೆ  (Suicide) ಯತ್ನಿಸಿದ್ದ ಮೊಮ್ಮಗ ಮೃತಪಟ್ಟಿದ್ದಾನೆ. ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕೊಳಾಳ್​ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಯಶವಂತ್​(20) ಮೃತ ಯುವಕ. ಹೊಸ ಮೊಬೈಲ್ ಕೊಡಿಸುವಂತೆ ಹಠ ಹಿಡಿದಿದ್ದ ಯಶವಂತ್, ಬೆದರಿಸಲೆಂದೇ ಆತ್ಮಹತ್ಯೆಗೆ ಯತ್ನಿಸಿದ್ದ. ಆದ್ರೆ, ದುರದೃಷ್ಟವಶಾತ್ ಯಶವಂತ್ ದುರಂತ ಅಂತ್ಯಕಂಡಿದ್ದಾನೆ.

ಅಕ್ಟೋಬರ್ 8ರಂದು ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್​ ಮೊಬೈಲ್ ಕಳೆದುಕೊಂಡಿದ್ದ. ಈ ಹಿನ್ನೆಲೆಯಲ್ಲಿ ಕೈಯಲ್ಲಿ ಮೊಬೈಲ್​ ಇಲ್ಲದೇ ಕಂಗಾಲಾಗಿದ್ದ. ಕೊನೆಗೆ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನ. ಆದ್ರೆ, ಅಜ್ಜ ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದ. ಆದರೂ ಸಹ ಈಗಲೇ ಬೇಕೆಂದು ಬ್ಕ್ಯಾಕ್​ ಮೇಲೆ ಮಾಡಲು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಯಶವಂತ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಟ್ಟಿನಲ್ಲಿ ಮೊಬೈಲ್​ ಫೋನ್​ ಗೀಳಿಗೆ ಯುವಕ ಯಶವಂತ್ ಜೀವ ಕಳೆದುಕೊಂಡಿರುವುದು ದುರಂತ.

ಹೆಜ್ಜೇನು ದಾಳಿಗೆ ಅಸುನೀಗಿದ ರೈತ

ಹೆಜ್ಜೇನು ದಾಳಿಯಿಂದ ಗಾಯಗೊಂಡು ಆಸ್ಪತ್ರೆ ಸೇರಿದ್ದ ರೈತ ಚಿಕಿಕ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ್(58) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ರೈತ. ಇತ ಮೇಕೆಯ ಮೇವಿಗಾಗಿ ಮರದಲ್ಲಿ ಸೊಪ್ಪು ಕೀಳುತ್ತಿದ್ದಾಗ ಜೇನು ಹುಳುಗಳು ದಾಳಿ ಮಾಡಿದ್ದವು. ಇದರಿಂದ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ರೈತ, ಇದೀಗ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Published On - 10:47 am, Fri, 20 October 23

Follow Us
Basavaraj Mudnur
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More