AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್

ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಮಹಿಳೆ ಜೊತೆ ಶೃಂಗೇರಿ ಮಠದಲ್ಲಿ ರೂಮ್ ಪಡೆಯಲು ಹೋದಾಗ ಸಿಕ್ಕಿಬಿದ್ದಿದ್ದಾನೆ. ನಕಲಿ ಆಧಾರ್ ಕಾರ್ಡ್ ಬಳಸಿದ್ದಲ್ಲೇ ಹಿಂದೂ ಮಹಿಳೆಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡು ರೂಮ್ ಪಡೆದಿದ್ದಾನೆ. ಈ ಬಗ್ಗೆ ಅನುಮಾನ ಬಂದಿದ್ದು ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್:  ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್
ಅಬ್ದುಲ್ ಸಮದ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ|

Updated on: Sep 19, 2025 | 9:35 PM

Share

ಚಿಕ್ಕಮಗಳೂರು, (ಸೆಪ್ಟೆಂಬರ್ 19): ಹಿಂದೂ (Hindu) ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake Aadhar Card) ಮಾಡಿಸಿಕೊಂಡು ಮುಸ್ಲಿಂ (Muslim) ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್​ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡಿದ್ದಾನೆ. ಸದ್ಯ ಇಬ್ಬರನ್ನು ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಂಡ ಇಲ್ಲದಿದ್ದರಿಂದ ಹಿಂದೂ ಮಹಿಳೆ ಜೊತೆ ಅಬ್ದುಲ್ ಸಮದ್ ಸ್ನೇಹ ಬೆಳೆದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರು ನಡುವೆ ಸಂಬಂಧ ಇದ್ದು, ಅನುಮಾನ ಬಾರದಂತೆ ಅಬ್ದಲ್ ಎನ್ನುವ ಬದಲಿಗೆ ರಮೇಶ್ ಎಂದು ಆಧಾರ್ ಕಾರ್ಡ್ ಮಾಡಿಕೊಂಡು ಮಹಿಳೆಯನ್ನು ಶೃಂಗೇರಿ ಮಠದ ಲಾಡ್ಜ್​ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಈ ಜೋಡಿ ಸಿಕ್ಕಿಬಿದ್ದಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಶೃಂಗೇರಿ ಮಠದ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ