AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್: ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್

ಮುಸ್ಲಿಂ ವ್ಯಕ್ತಿಯೋರ್ವ ಹಿಂದೂ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಮಹಿಳೆ ಜೊತೆ ಶೃಂಗೇರಿ ಮಠದಲ್ಲಿ ರೂಮ್ ಪಡೆಯಲು ಹೋದಾಗ ಸಿಕ್ಕಿಬಿದ್ದಿದ್ದಾನೆ. ನಕಲಿ ಆಧಾರ್ ಕಾರ್ಡ್ ಬಳಸಿದ್ದಲ್ಲೇ ಹಿಂದೂ ಮಹಿಳೆಯನ್ನು ತನ್ನ ಹೆಂಡತಿ ಎಂದು ಹೇಳಿಕೊಂಡು ರೂಮ್ ಪಡೆದಿದ್ದಾನೆ. ಈ ಬಗ್ಗೆ ಅನುಮಾನ ಬಂದಿದ್ದು ಕೂಡಲೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಲಾಡ್ಜ್​​ನಲ್ಲಿ ಹಿಂದೂ ಮಹಿಳೆ ಜತೆ ಮುಸ್ಲಿಂ ವ್ಯಕ್ತಿ ಲಾಕ್:  ಅಬ್ದುಲ್ ಬದಲಿಗೆ ರಮೇಶ್ ಎಂದು ಹೆಸರು ಚೇಂಜ್
ಅಬ್ದುಲ್ ಸಮದ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 19, 2025 | 9:35 PM

Share

ಚಿಕ್ಕಮಗಳೂರು, (ಸೆಪ್ಟೆಂಬರ್ 19): ಹಿಂದೂ (Hindu) ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake Aadhar Card) ಮಾಡಿಸಿಕೊಂಡು ಮುಸ್ಲಿಂ (Muslim) ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್​ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡಿದ್ದಾನೆ. ಸದ್ಯ ಇಬ್ಬರನ್ನು ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಂಡ ಇಲ್ಲದಿದ್ದರಿಂದ ಹಿಂದೂ ಮಹಿಳೆ ಜೊತೆ ಅಬ್ದುಲ್ ಸಮದ್ ಸ್ನೇಹ ಬೆಳೆದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರು ನಡುವೆ ಸಂಬಂಧ ಇದ್ದು, ಅನುಮಾನ ಬಾರದಂತೆ ಅಬ್ದಲ್ ಎನ್ನುವ ಬದಲಿಗೆ ರಮೇಶ್ ಎಂದು ಆಧಾರ್ ಕಾರ್ಡ್ ಮಾಡಿಕೊಂಡು ಮಹಿಳೆಯನ್ನು ಶೃಂಗೇರಿ ಮಠದ ಲಾಡ್ಜ್​ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಈ ಜೋಡಿ ಸಿಕ್ಕಿಬಿದ್ದಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಶೃಂಗೇರಿ ಮಠದ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ