
ಚಿಕ್ಕಮಗಳೂರು, (ಸೆಪ್ಟೆಂಬರ್ 19): ಹಿಂದೂ (Hindu) ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ (Fake Aadhar Card) ಮಾಡಿಸಿಕೊಂಡು ಮುಸ್ಲಿಂ (Muslim) ವ್ಯಕ್ತಿಯೋರ್ವ ಹಿಂದೂ ಮಹಿಳೆಯನ್ನು ಲಾಡ್ಜ್ ಗೆ ಕರೆದೊಯ್ದು ಸಿಕ್ಕಿಬಿದ್ದಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಜೋಡಿ ಸಿಕ್ಕಿಬಿದ್ದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ಮಾಗುಂಡಿಯ ಅಬ್ದುಲ್ ಸಮದ್ ಎನ್ನುವಾತ ಆಧಾರ್ ಕಾರ್ಡ್ ನಲ್ಲಿ ರಮೇಶ್ ಎಂದು ಎಡಿಟ್ ಮಾಡಿ ಶೃಂಗೇರಿ ಮಠದಲ್ಲಿ ರೂಮ್ ಪಡೆದುಕೊಂಡಿದ್ದಾನೆ. ಅದು ಒಬ್ಬನ್ನೇ ಹೋಗಿಲ್ಲ ಶೃಂಗೇರಿ ಮೂಲದ 38 ವರ್ಷದ ಮಹಿಳೆಯನ್ನು ತನ್ನ ಹೆಂಡತಿ ಎಂದು ಸುಳ್ಳು ಹೇಳಿ ರೂಮ್ ಪಡೆದುಕೊಂಡಿದ್ದಾನೆ. ಸದ್ಯ ಇಬ್ಬರನ್ನು ಶೃಂಗೇರಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಗಂಡ ಇಲ್ಲದಿದ್ದರಿಂದ ಹಿಂದೂ ಮಹಿಳೆ ಜೊತೆ ಅಬ್ದುಲ್ ಸಮದ್ ಸ್ನೇಹ ಬೆಳೆದಿದೆ. ಕಳೆದ ನಾಲ್ಕೈದು ವರ್ಷಗಳಿಂದ ಇಬ್ಬರು ನಡುವೆ ಸಂಬಂಧ ಇದ್ದು, ಅನುಮಾನ ಬಾರದಂತೆ ಅಬ್ದಲ್ ಎನ್ನುವ ಬದಲಿಗೆ ರಮೇಶ್ ಎಂದು ಆಧಾರ್ ಕಾರ್ಡ್ ಮಾಡಿಕೊಂಡು ಮಹಿಳೆಯನ್ನು ಶೃಂಗೇರಿ ಮಠದ ಲಾಡ್ಜ್ ಕರೆದುಕೊಂಡು ಬಂದಿದ್ದಾನೆ. ಈ ವೇಳೆ ಈ ಜೋಡಿ ಸಿಕ್ಕಿಬಿದ್ದಿದೆ. ಈ ವಿಚಾರ ಗೊತ್ತಾಗುತ್ತಿದ್ದಂತೆಯೇ ಶೃಂಗೇರಿ ಮಠದ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.