AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ; ವಕೀಲರ ಕಾರಿಗೆ ಬೈಕ್​ ಗುದ್ದಿದ ಪೊಲೀಸ್ ಪೇದೆ

ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ ಮುಂದುವರೆದಿದ್ದು, ವಕೀಲರ(Lawyer) ಕಾರಿಗೆ ಆಕಸ್ಮಿಕವಾಗಿ ಬೈಕಿನಲ್ಲಿ ಬಂದ ಪೊಲೀಸ್( ಪೇದೆ(Police Constable) ಗುದ್ದಿದ ಘಟನೆ ಚಿಕ್ಕಮಗಳೂರು (Chikmagalur) ನಗರದ ಕೋರ್ಟ್ ಮುಂಭಾಗದಲ್ಲಿ ನಡೆದಿದೆ.

ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ; ವಕೀಲರ ಕಾರಿಗೆ ಬೈಕ್​ ಗುದ್ದಿದ ಪೊಲೀಸ್ ಪೇದೆ
ಚಿಕ್ಕಮಗಳೂರಿನಲ್ಲಿ ಲಾಯರ್ ಕಾರಿಗೆ ಪೊಲೀಸ್​ ಪೇದೆಯ ಕಾರು ಡಿಕ್ಕಿ​
Follow us
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 20, 2023 | 8:52 PM

ಚಿಕ್ಕಮಗಳೂರು, ಡಿ.20: ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ ಮುಂದುವರೆದಿದ್ದು, ವಕೀಲರ(Lawyer) ಕಾರಿಗೆ ಆಕಸ್ಮಿಕವಾಗಿ ಬೈಕಿನಲ್ಲಿ ಬಂದ ಪೊಲೀಸ್( ಪೇದೆ(Police Constable) ಗುದ್ದಿದ ಘಟನೆ ಚಿಕ್ಕಮಗಳೂರು (Chikmagalur) ನಗರದ ಕೋರ್ಟ್ ಮುಂಭಾಗದಲ್ಲಿ ನಡೆದಿದೆ. ವಕೀಲರು ಹಾಗೂ ಪೊಲೀಸರ ನಡುವೆ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪೊಲೀಸ್ ಪೇದೆ ಮಹೇಶ್ ಎಂಬುವವರಿಂದ ಡಿಕ್ಕಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಕೀಲರ ಸಂಘದ ಅಧ್ಯಕ್ಷ‌ ಸುಧಾಕರ್ ಅವರ ನೇತೃತ್ವದಲ್ಲಿ ಕೋರ್ಟ್ ಮುಂಭಾಗದಲ್ಲಿ ಸಂಘರ್ಷ ರಾಜಿಯಾಗಿದ್ದು, ಅಪಘಾತ ಪ್ರಕರಣದ ಕುರಿತು ಕಾನೂನು ಹೋರಾಟ ಮುಂದುವರಿಸಲು ವಕೀಲರು ತೀರ್ಮಾನ ಮಾಡಿದ್ದಾರೆ.

ಏನಿದು ಪೊಲೀಸ್-ವಕೀಲರ ಮಧ್ಯೆ ಸಂಘರ್ಷ?

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್​ ಹಾಕದ ವಿಚಾರವಾಗಿ ವಕೀಲ ಪ್ರೀತಮ್​ ಎಂಬುವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲರು ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವಕೀಲರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್​ಐಆರ್​ ದಾಖಲಾಗಿತ್ತು. ಇದಾದ ಮೇಲೆ ವಕೀಲರು ಹಾಗೂ ಪೊಲೀಸರ ನಡುವಿನ ಜಟಾಪಟಿ ತಾರಕಕ್ಕೆ ಏರಿತ್ತು.  ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ ಖಂಡಿಸಿ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಸಿಐಡಿ ತನಿಖೆ

ನಂತರ ಡಿ.06 ಯಿಂದ ಸಿಐಡಿ ಎಸ್​ಪಿ ವೆಂಕಟೇಶ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಶುರುವಾಗಿತ್ತು. ಘಟನೆ ಕುರಿತು ಹೈಕೋರ್ಟ್ ಡಿ.12 ರಂದು ಸಂಪೂರ್ಣ ವರದಿ ಸಲ್ಲಿಸುವಂತೆ ಸಿಐಡಿ ಡಿಜಿಗೆ ಸೂಚಿಸಿತ್ತು. ಈ ಹಿನ್ನಲೆ ಚಿಕ್ಕಮಗಳೂರಿಗೆ ಸಿಐಡಿ ಅಧಿಕಾರಿಗಳ ತನಿಖಾ ತಂಡ ಆಗಮಿಸಿತ್ತು. ವಕೀಲ ಪ್ರೀತಮ್ ಮೇಲೆ ಚಿಕ್ಕಮಗಳೂರು ಠಾಣೆ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಇಲಾಖೆ ಹಾಗೂ ವಕೀಲರ ವಿರುದ್ಧ ಧರಣಿ ಕುರಿತು ತನಿಖೆ ನಡೆಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕುಟುಂಬದಿಂದ ಎಷ್ಟು ನಷ್ಟವಾಗಿದೆ? ವಿಶ್ವನಾಥ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ಸಂಗೀತ ಕ್ಷೇತ್ರದಲ್ಲಿ ಅರ್ಜುನ್ ಜನ್ಯ ಮಗಳ ಸಾಧನೆ; ತಂದೆಯಾಗಿ ಹೆಮ್ಮೆಯ ಕ್ಷಣ
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ನಗರದ ಲ್ಯಾಂಡ್ ಮಾರ್ಕ್​ ಎನಿಸಿಕೊಂಡಿರುವ ಸ್ಟೇಡಿಯಂ ಸ್ಥಿತಿ ಹೇಗಿದೆ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ಬದುಕಿರುವವರು ಸತ್ತಂತೆ ಕನಸಿನಲ್ಲಿ ಬಂದರೆ ಏನರ್ಥ? ವಿಡಿಯೋ ನೋಡಿ
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!
ನೆಲಮಂಗಲ: ಹೆದ್ದಾರಿ ಜಲಾವೃತ, ನೀರಿನಲ್ಲಿ ಬಂದ ಬೈಕ್ ಸವಾರನ ಸ್ಥಿತಿ ನೋಡಿ!