AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ; ವಕೀಲರ ಕಾರಿಗೆ ಬೈಕ್​ ಗುದ್ದಿದ ಪೊಲೀಸ್ ಪೇದೆ

ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ ಮುಂದುವರೆದಿದ್ದು, ವಕೀಲರ(Lawyer) ಕಾರಿಗೆ ಆಕಸ್ಮಿಕವಾಗಿ ಬೈಕಿನಲ್ಲಿ ಬಂದ ಪೊಲೀಸ್( ಪೇದೆ(Police Constable) ಗುದ್ದಿದ ಘಟನೆ ಚಿಕ್ಕಮಗಳೂರು (Chikmagalur) ನಗರದ ಕೋರ್ಟ್ ಮುಂಭಾಗದಲ್ಲಿ ನಡೆದಿದೆ.

ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ; ವಕೀಲರ ಕಾರಿಗೆ ಬೈಕ್​ ಗುದ್ದಿದ ಪೊಲೀಸ್ ಪೇದೆ
ಚಿಕ್ಕಮಗಳೂರಿನಲ್ಲಿ ಲಾಯರ್ ಕಾರಿಗೆ ಪೊಲೀಸ್​ ಪೇದೆಯ ಕಾರು ಡಿಕ್ಕಿ​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 20, 2023 | 8:52 PM

Share

ಚಿಕ್ಕಮಗಳೂರು, ಡಿ.20: ಕಾಫಿನಾಡಲ್ಲಿ ಮತ್ತೆ ಪೊಲೀಸ್-ವಕೀಲರ ಮಧ್ಯೆ ಸಂಘರ್ಷ ಮುಂದುವರೆದಿದ್ದು, ವಕೀಲರ(Lawyer) ಕಾರಿಗೆ ಆಕಸ್ಮಿಕವಾಗಿ ಬೈಕಿನಲ್ಲಿ ಬಂದ ಪೊಲೀಸ್( ಪೇದೆ(Police Constable) ಗುದ್ದಿದ ಘಟನೆ ಚಿಕ್ಕಮಗಳೂರು (Chikmagalur) ನಗರದ ಕೋರ್ಟ್ ಮುಂಭಾಗದಲ್ಲಿ ನಡೆದಿದೆ. ವಕೀಲರು ಹಾಗೂ ಪೊಲೀಸರ ನಡುವೆ ನಡೆದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪೊಲೀಸ್ ಪೇದೆ ಮಹೇಶ್ ಎಂಬುವವರಿಂದ ಡಿಕ್ಕಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಕೀಲರ ಸಂಘದ ಅಧ್ಯಕ್ಷ‌ ಸುಧಾಕರ್ ಅವರ ನೇತೃತ್ವದಲ್ಲಿ ಕೋರ್ಟ್ ಮುಂಭಾಗದಲ್ಲಿ ಸಂಘರ್ಷ ರಾಜಿಯಾಗಿದ್ದು, ಅಪಘಾತ ಪ್ರಕರಣದ ಕುರಿತು ಕಾನೂನು ಹೋರಾಟ ಮುಂದುವರಿಸಲು ವಕೀಲರು ತೀರ್ಮಾನ ಮಾಡಿದ್ದಾರೆ.

ಏನಿದು ಪೊಲೀಸ್-ವಕೀಲರ ಮಧ್ಯೆ ಸಂಘರ್ಷ?

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಲ್ಮೆಟ್​ ಹಾಕದ ವಿಚಾರವಾಗಿ ವಕೀಲ ಪ್ರೀತಮ್​ ಎಂಬುವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವಕೀಲರು ಪೊಲೀಸ್​ ಠಾಣೆಯಲ್ಲಿ ಪ್ರತಿಭಟನೆ ಮಾಡಿದ್ದರು. ಹೀಗಾಗಿ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದ ವಕೀಲರ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್​ಐಆರ್​ ದಾಖಲಾಗಿತ್ತು. ಇದಾದ ಮೇಲೆ ವಕೀಲರು ಹಾಗೂ ಪೊಲೀಸರ ನಡುವಿನ ಜಟಾಪಟಿ ತಾರಕಕ್ಕೆ ಏರಿತ್ತು.  ವಕೀಲರು ಠಾಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಹಲ್ಲೆ ಖಂಡಿಸಿ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದರು.

ಇದನ್ನೂ ಓದಿ:ಚಿಕ್ಕಮಗಳೂರು ವಕೀಲ-ಪೊಲೀಸರ ಜಟಾಪಟಿ: ವಕೀಲರ ವಿರುದ್ಧ 4 ಪ್ರತ್ಯೇಕ ಪ್ರಕರಣ ದಾಖಲು

ಸಿಐಡಿ ತನಿಖೆ

ನಂತರ ಡಿ.06 ಯಿಂದ ಸಿಐಡಿ ಎಸ್​ಪಿ ವೆಂಕಟೇಶ್ ನೇತೃತ್ವದಲ್ಲಿ ಪ್ರಕರಣದ ತನಿಖೆ ಶುರುವಾಗಿತ್ತು. ಘಟನೆ ಕುರಿತು ಹೈಕೋರ್ಟ್ ಡಿ.12 ರಂದು ಸಂಪೂರ್ಣ ವರದಿ ಸಲ್ಲಿಸುವಂತೆ ಸಿಐಡಿ ಡಿಜಿಗೆ ಸೂಚಿಸಿತ್ತು. ಈ ಹಿನ್ನಲೆ ಚಿಕ್ಕಮಗಳೂರಿಗೆ ಸಿಐಡಿ ಅಧಿಕಾರಿಗಳ ತನಿಖಾ ತಂಡ ಆಗಮಿಸಿತ್ತು. ವಕೀಲ ಪ್ರೀತಮ್ ಮೇಲೆ ಚಿಕ್ಕಮಗಳೂರು ಠಾಣೆ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಇಲಾಖೆ ಹಾಗೂ ವಕೀಲರ ವಿರುದ್ಧ ಧರಣಿ ಕುರಿತು ತನಿಖೆ ನಡೆಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ