ಚಿಕ್ಕಮಗಳೂರು: ಹಣ ಡಬಲ್​​ ಮಾಡುವ ಆಸೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ

ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ವಂಚಕರು ನಂಬಿಸಿ ಹಂತ ಹಂತವಾಗಿ 91 ಲಕ್ಷಕ್ಕೂ ಹೆಚ್ಚಿನ ಹಣ ಪಡೆದು ವಂಚನೆ ಮಾಡಿದ್ದಾರೆ.

ಚಿಕ್ಕಮಗಳೂರು: ಹಣ ಡಬಲ್​​ ಮಾಡುವ ಆಸೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ
ಸಾಂದರ್ಭಿಕ ಚಿತ್ರ
Follow us
| Updated By: ವಿವೇಕ ಬಿರಾದಾರ

Updated on:Oct 15, 2024 | 10:37 AM

ಚಿಕ್ಕಮಗಳೂರು, ಅ.15: ರಾಜ್ಯದಲ್ಲಿ ಸೈಬರ್ ಖದೀಮರ (Cyber Crime) ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್​ಲೈನ್​ನಲ್ಲಿ ವಂಚನೆಗೆ (Online Fraud) ಒಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ. ಇದೀಗ ಚಿಕ್ಕಮಗಳೂರಿನಲ್ಲಿ (Chikkamagaluru) ಹಣ ಡಬಲ್ ಮಾಡುವ ಆಸೆಗೆ ಬಿದ್ದು ಮಹಿಳೆ 91 ಲಕ್ಷ ಹಣ ಕಳೆದುಕೊಂಡಿದ್ದಾರೆ. ಆನ್ ಲೈನ್ ವಂಚಕರ ಮಾತು ನಂಬಿ ಹಣ ಮಾಡುವ ಆಸೆಗೆ ಬಿದ್ದ ಮಹಿಳೆ ಹಣ ಕಳೆದುಕೊಂಡು ಕಂಗಾಲಾಗಿದ್ದಾರೆ.

ಫೇಸ್ಬುಕ್​ನಲ್ಲಿ ಬಂದ ಜಾಹಿರಾತು ನೋಡಿ ಹಣ ಡಬಲ್ ಮಾಡುವ ಆಸೆಗೆ ಬಿದ್ದ ಮಹಿಳೆ ಸ್ಟಾಕ್ ಮಾರ್ಕೆಟ್ ಟ್ರೇಡಿಂಗ್​ಗೆ ಹಣ ಹಾಕಿ ಕಂಗಾಲಾಗಿದ್ದಾರೆ. ಚಿಕ್ಕಮಗಳೂರು ನಗರದ ಮಹಿಳೆಯೊಬ್ಬರು ಫೇಸ್ಬುಕ್ ನಲ್ಲಿ ಬಂದ ಜಾಹಿರಾತು ನೋಡಿ ಲಿಂಕ್ ಕ್ಲಿಕ್ ಮಾಡಿದ್ದಾರೆ. ಲಿಂಕ್ ಕ್ಲಿಕ್ ಮಾಡಿದ ಕ್ಷಣ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಿದ್ದಾರೆ. ಹಣ ಇನ್ವೆಸ್ಟ್ ಮಾಡಿ ಡಬಲ್ ಪಡೆಯಿರಿ ಎಂದು ಕರೆ ಬಂದಿದೆ. ಮಹಿಳೆಗೆ ವಂಚಕರು ತಮ್ಮ ಕಂಪನಿಯ ಮೂಲಕ ಹಣ ಹಾಕಿ ಡಬಲ್ ಪಡೆಯಿರಿ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಹಂತ ಹಂತವಾಗಿ ಹಣ ಕಳಿಸಿದ್ದಾರೆ. ಈ ಮೂಲಕ ಬರೋಬ್ಬರಿ 91 ಲಕ್ಷದ 4315 ಹಣವನ್ನು ವಂಚಕರಿಗೆ ಹಾಕಿ ಮಹಿಳೆ ಕಂಗಾಲಾಗಿದ್ದಾರೆ.

ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ರಾಜ್ಯದ 8 ರೈಲುಗಳ ಸಂಚಾರ 1 ವಾರ ರದ್ದು

ಡಬಲ್ ಹಣ ಮಾಡುವ ಆಸೆಗೆ ಬಿದ್ದು 91 ಲಕ್ಷ ಹಣ ಕಳೆದುಕೊಂಡ ಮಹಿಳೆ ಇದೀಗ ಹಣ ವಾಪಸ್ ಕೊಡಿಸುವಂತೆ ದೂರು ಸಲ್ಲಿಸಿದ್ದಾರೆ. ವಂಚನೆಯ ಕುರಿತು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚಿಕ್ಕಮಗಳೂರು ಪೊಲೀಸ್ ಇಲಾಖೆಯು ಆನ್ ಲೈನ್ ವಂಚಕರಿಂದ ದೂರ ಇರುವಂತೆ ಮನವಿ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಬರುವ ಲಿಂಕ್ ಕ್ಲಿಕ್ ಮಾಡದಂತೆ ಚಿಕ್ಕಮಗಳೂರು ಎಸ್ಪಿ ವಿಕ್ರಂ ಆಮಟೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹಾಗೂ ಆನ್ಲೈನ್ ವಂಚನೆಯಾಗಿದ್ರೆ ದೂರು ನೀಡುವಂತೆ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:11 am, Tue, 15 October 24

ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
ಬೆಂಗಳೂರಲ್ಲಿ ಬೆಳ್ಳಂ ಬೆಳಗ್ಗೆ ಧಾರಾಕಾರ ಮಳೆ; ಕೆಲಸಕ್ಕೆ ಹೋಗುವ ಜನರಿಗೆ ರಗಳ
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
‘ನಾನು ಅನ್​ಫಿಟ್ ಅನಿಸುತ್ತಿದೆ’; ಕಣ್ಣೀರು ಹಾಕಿದ ಧನರಾಜ್ ಆಚಾರ್
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ ಕಾರ್ಯ, ಕಾಣಿಕೆಹಣ ಎಷ್ಟಿದೆ?
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Daily Devotional: ಕನಸಿನಲ್ಲಿ ಹಾವುಗಳು ಕಂಡರೆ ಏನು ಅರ್ಥ? ಈ ವಿಡಿಯೋ ನೋಡಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಶುಭ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ರಾಮಲೀಲಾ ವೇಳೆ ವೇದಿಕೆಯಲ್ಲೇ ಕಿತ್ತಾಡಿಕೊಂಡ ರಾಮ -ರಾವಣ; ವಿಡಿಯೋ ವೈರಲ್
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ಐಶ್ವರ್ಯಾ, ಅನುಷಾ ರೈ ನಡುವೆ ಜೋರು ಜಗಳ; ಬಿಗ್​ ಬಾಸ್​ ಮನೆಯಲ್ಲಿ ರಂಪಾಟ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ರಸ್ತೆಯಲ್ಲೇ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ತಾಯಿ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ದರ್ಶನ್ ಬೇಲ್ ಅರ್ಜಿ ತಿರಸ್ಕೃತ, ಕಾಯುತ್ತಿದ್ದ ಫ್ಯಾನ್ಸ್​ಗೆ ಭಾರೀ ನಿರಾಶೆ
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್
ರೋಹಿತ್​ ಪಡೆಗೆ ಗಂಭೀರ ಎಚ್ಚರಿಕೆ ನೀಡಿದ ಕೋಚ್ ಗೌತಮ್