Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದು,ಪೊಲೀಸರು ರಕ್ಷಣೆ ಮಾಡಿದ್ದಾರೆ.

ಚಿಕ್ಕಮಗಳೂರು: ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಆತ್ಮಹತ್ಯೆಗೆ ಯತ್ನಿಸುತ್ತಿರುವ ಮಹಿಳೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 14, 2023 | 8:20 AM

ಚಿಕ್ಕಮಗಳೂರು: ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ(suicide) ಯತ್ನಿಸಿದ ಘಟನೆ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಹೌದು ಮಹಿಳೆಯೊಬ್ಬರು ಠಾಣೆಯ ಮಹಡಿ ಮೇಲಿಂದ ಜಿಗಿಯಲು ಯತ್ನಿಸಿದ್ದು ಆಕೆಯನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು?

ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು, ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು. ಈ ವೇಳೆ ಅಲ್ಲಿನ ಸುಜಾತಾ ಎಂಬ ಮಹಿಳಾ ಪೊಲೀಸ್ ‌ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಕಾರಣಕ್ಕೆ ಶಿಲ್ಪ ವಿರುದ್ದ ಮೂಡಿಗೆರೆ ‌ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಶಿಲ್ಪ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆ ಕೋರ್ಟ್​ ಆಕೆಯ ವಿರುದ್ಧ ಸಮನ್ಸ್ ಜಾರಿ‌ ಮಾಡಿತ್ತು. ಇದರಿಂದ ಇದೀಗ ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಪ್ರತಿಷ್ಠಿತ ಬ್ರ್ಯಾಂಡ್​​ನ್ನೇ ನಕಲು ಮಾಡಿದ್ದ ಉದ್ಯಮಿಯ ಬಂಧನ

ಬೆಂಗಳೂರು: ಪ್ರತಿಷ್ಠಿತ ಬ್ರ್ಯಾಂಡ್​​ನ್ನೇ ನಕಲು ಮಾಡಿದ್ದ ಉದ್ಯಮಿ ರಾಜಸ್ಥಾನ ಮೂಲದ ಕಿನ್ನಿಲಾಲ್​ನನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. 10 ವರ್ಷಗಳಿಂದ ಏಷ್ಯನ್ ಪೇಂಟ್ ನಕಲು ಮಾಡಿ ಮಾರಾಟ ಮಾಡುತ್ತಿದ್ದನಂತೆ. ಮೊದಲಿಗೆ ತನ್ನದೇ ಲೋಕಲ್ ಬ್ರ್ಯಾಂಡ್​ನಲ್ಲಿ ವ್ಯವಹಾರ ಆರಂಭ ಮಾಡಿದ್ದ ಇತ, ಬಳಿಕ ಬ್ಯುಸಿನೆಸ್ ಯಶಸ್ಸು ಕಾಣದ ಹಿನ್ನೆಲೆ ಪ್ರತಿಷ್ಠಿತ ಬ್ರ್ಯಾಂಡ್ ಏಷ್ಯನ್ ಕಂಪನಿ ಹೆಸರಿನಲ್ಲಿ ನಕಲಿ ಪೇಂಟಿಂಗ್​ ಮಾರಾಟ ಮಾಡಲು ಶುರು ಮಾಡಿದ್ದಾನೆ. ಇನ್ನು ಇತನ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ, ಈ ವೇಳೆ ನಕಲಿ ಪೇಂಟಿಂಗ್ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಬಳಿಕ ವಿದ್ಯಾರಣ್ಯಪುರದ ಕಚೇರಿ ಮೇಲೆ ದಾಳಿ ನಡೆಸಿದ್ದ ಪೊಲೀಸರು, ದಾಳಿ ವೇಳೆ 10 ಲಕ್ಷ ರೂ. ಮೌಲ್ಯದ ನಕಲಿ ಪೇಂಟಿಂಗ್ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಸಪ್ತಗಿರಿ ವಿಶ್ವವಿದ್ಯಾಲಯ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುತ್ತಿದೆ: ಉಮೇಶ್
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಛತ್ತೀಸ್‌ಗಢದ ದಾಂತೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅಮಿತ್ ಶಾ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಹಾಲ್​ ಟಿಕೆಟ್​​ನೊಂದಿಗೆ ಮಾದರಿ ಒಎಂಆರ್ ಶೀಟ್ ಕೂಡ ಡೌನ್ಲೋಡ್: ಪ್ರಸನ್ನ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
ಪುಟ್ಟ ಬಾಲಕನ ದೈವ ನರ್ತನ: ಮೈ ಜುಮ್ಮೆನಿಸುವ ವಿಡಿಯೋ ನೋಡಿ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
CET ಪರೀಕ್ಷೆ ಬಗ್ಗೆ ಭಯ ಬೇಡ; ತಜ್ಞರು ನೀಡಿರುವ ಟಿಪ್ಸ್​​ ಇಲ್ಲಿದೆ
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
ಒಂದು ಕಾಲದ ಜೋಡೆತ್ತುಗಳು, ಈಗ ಬದ್ಧ ವೈರಿಗಳು!
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ