ಚಿಕ್ಕಮಗಳೂರು: ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದು,ಪೊಲೀಸರು ರಕ್ಷಣೆ ಮಾಡಿದ್ದಾರೆ.

ಚಿಕ್ಕಮಗಳೂರು: ಪೊಲೀಸ್ ‌ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಆತ್ಮಹತ್ಯೆಗೆ ಯತ್ನಿಸುತ್ತಿರುವ ಮಹಿಳೆ
Follow us
|

Updated on: Apr 14, 2023 | 8:20 AM

ಚಿಕ್ಕಮಗಳೂರು: ಮಹಿಳೆಯೊಬ್ಬರು ಮೂಡಿಗೆರೆ ಪೊಲೀಸ್ ಠಾಣೆಯ ಮೇಲೇರಿ ಆತ್ಮಹತ್ಯೆಗೆ(suicide) ಯತ್ನಿಸಿದ ಘಟನೆ ನಡೆದಿದೆ. ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಹೌದು ಮಹಿಳೆಯೊಬ್ಬರು ಠಾಣೆಯ ಮಹಡಿ ಮೇಲಿಂದ ಜಿಗಿಯಲು ಯತ್ನಿಸಿದ್ದು ಆಕೆಯನ್ನ ಪೊಲೀಸರು ರಕ್ಷಣೆ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಲು ಕಾರಣವೇನು?

ಹಳೆ ಮೂಡಿಗೆರೆ ಗ್ರಾಮದ ಶಿಲ್ಪ ಮತ್ತು ಆಕೆಯ ಅಕ್ಕನ ನಡುವೆ 2022ರಲ್ಲಿ ಗಲಾಟೆಯಾಗಿತ್ತು, ಈ ವಿಷಯಕ್ಕೆ ಇಬ್ಬರು ಅಕ್ಕ ತಂಗಿಯರು ದೂರು ನೀಡಲು ಮೂಡಿಗೆರೆ ಠಾಣೆಗೆ ಹೋಗಿದ್ದರು. ಈ ವೇಳೆ ಅಲ್ಲಿನ ಸುಜಾತಾ ಎಂಬ ಮಹಿಳಾ ಪೊಲೀಸ್ ‌ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರಂತೆ. ಈ ಕಾರಣಕ್ಕೆ ಶಿಲ್ಪ ವಿರುದ್ದ ಮೂಡಿಗೆರೆ ‌ಠಾಣೆಯಲ್ಲಿ‌ ದೂರು ದಾಖಲಾಗಿತ್ತು. ಆದರೆ ಕಳೆದ ಒಂದು ವರ್ಷದಿಂದ ಶಿಲ್ಪ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆ ಕೋರ್ಟ್​ ಆಕೆಯ ವಿರುದ್ಧ ಸಮನ್ಸ್ ಜಾರಿ‌ ಮಾಡಿತ್ತು. ಇದರಿಂದ ಇದೀಗ ಮಹಿಳೆ ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

ಪ್ರತಿಷ್ಠಿತ ಬ್ರ್ಯಾಂಡ್​​ನ್ನೇ ನಕಲು ಮಾಡಿದ್ದ ಉದ್ಯಮಿಯ ಬಂಧನ

ಬೆಂಗಳೂರು: ಪ್ರತಿಷ್ಠಿತ ಬ್ರ್ಯಾಂಡ್​​ನ್ನೇ ನಕಲು ಮಾಡಿದ್ದ ಉದ್ಯಮಿ ರಾಜಸ್ಥಾನ ಮೂಲದ ಕಿನ್ನಿಲಾಲ್​ನನ್ನು ವಿವಿ ಪುರಂ ಪೊಲೀಸರು ಬಂಧಿಸಿದ್ದಾರೆ. 10 ವರ್ಷಗಳಿಂದ ಏಷ್ಯನ್ ಪೇಂಟ್ ನಕಲು ಮಾಡಿ ಮಾರಾಟ ಮಾಡುತ್ತಿದ್ದನಂತೆ. ಮೊದಲಿಗೆ ತನ್ನದೇ ಲೋಕಲ್ ಬ್ರ್ಯಾಂಡ್​ನಲ್ಲಿ ವ್ಯವಹಾರ ಆರಂಭ ಮಾಡಿದ್ದ ಇತ, ಬಳಿಕ ಬ್ಯುಸಿನೆಸ್ ಯಶಸ್ಸು ಕಾಣದ ಹಿನ್ನೆಲೆ ಪ್ರತಿಷ್ಠಿತ ಬ್ರ್ಯಾಂಡ್ ಏಷ್ಯನ್ ಕಂಪನಿ ಹೆಸರಿನಲ್ಲಿ ನಕಲಿ ಪೇಂಟಿಂಗ್​ ಮಾರಾಟ ಮಾಡಲು ಶುರು ಮಾಡಿದ್ದಾನೆ. ಇನ್ನು ಇತನ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದಾಗ, ಈ ವೇಳೆ ನಕಲಿ ಪೇಂಟಿಂಗ್ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಬಳಿಕ ವಿದ್ಯಾರಣ್ಯಪುರದ ಕಚೇರಿ ಮೇಲೆ ದಾಳಿ ನಡೆಸಿದ್ದ ಪೊಲೀಸರು, ದಾಳಿ ವೇಳೆ 10 ಲಕ್ಷ ರೂ. ಮೌಲ್ಯದ ನಕಲಿ ಪೇಂಟಿಂಗ್ ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು