AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು PWD ಎಇಇ ಮನೆ ಎಸಿಬಿ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆ; ರಾಯಚೂರು ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ

ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿರುವ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಈವರೆಗೆ ಸಿಕ್ಕ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು PWD ಎಇಇ ಮನೆ ಎಸಿಬಿ ದಾಳಿಯಲ್ಲಿ ಅಕ್ರಮ ಸಂಪತ್ತು ಪತ್ತೆ; ರಾಯಚೂರು ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ
ದಾಳಿ ವೇಳೆ ಪತ್ತೆಯಾದ ಚಿನ್ನ, ಬೆಳ್ಳಿ
TV9 Web
| Updated By: sandhya thejappa|

Updated on:Mar 16, 2022 | 2:04 PM

Share

ಚಿಕ್ಕಮಗಳೂರು: ಇಂದು (ಮಾರ್ಚ್ 16) ಬೆಳ್ಳಂಬೆಳಗ್ಗೆ ಎಸಿಬಿ (ACB) ಅಧಿಕಾರಿಗಳು ರಾಜ್ಯದಲ್ಲಿ ಸುಮಾರು 75 ಕಡೆ ದಾಳಿ ನಡೆಸಿದ್ದಾರೆ. ಜಿಲ್ಲೆಯ ಪಿಡಬ್ಲೂಡಿ (PWD) ಎಇಇ ಗವಿರಂಗಪ್ಪ ಮನೆ ಮೇಲೆ ದಾಳಿ ನಡೆದಿದ್ದು, ದಾಳಿ ವೇಳೆ ಅಕ್ರಮ ಸಂಪತ್ತು ಪತ್ತೆಯಾಗಿದೆ. ಚಿಕ್ಕಮಗಳೂರಿನ ಗಾಂಧಿನಗರ ಬಡಾವಣೆಯಲ್ಲಿರುವ ಗವಿರಂಗಪ್ಪ ಮನೆಯಲ್ಲಿ ಅಕ್ರಮ ಸಂಪತ್ತು ಹೊಂದಿರುವುದು ಪತ್ತೆಯಾಗಿದೆ. ಈವರೆಗೆ ಸಿಕ್ಕ 750 ಗ್ರಾಂ ಚಿನ್ನದ ಗಟ್ಟಿ, 900 ಗ್ರಾಂ ಬೆಳ್ಳಿ, 2.74 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನು ಕೂಡ ಅಧಿಕಾರಿಗಳು ದಾಳಿ ಮುಂದುವರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ನಡೆಯುತ್ತಿರುವ ದಾಳಿ, ನಾಳೆವರೆಗೂ ಮುಂದುವರೆಯುವ ಸಾಧ್ಯತೆಯಿದೆ.

ಖಾಲಿ ಸೈಟ್​ನಲ್ಲಿ ಬಿಸಾಡಿದ್ದ ಹಣ ಪತ್ತೆ: ರಾಯಚೂರಿನ ಬಸವೇಶ್ವರ ಕಾಲೋನಿಯಲ್ಲಿರುವ ಕೆಬಿಜೆಎನ್ಎಲ್ (KBJNL) ಎಇಇ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಅಶೋಕ್ ರೆಡ್ಡಿ ಪಾಟೀಲ್ ಮನೆ, ಕಚೇರಿಗಳ ಮೇಲೆ ರೇಡ್ ಮಾಡಲಾಗಿದೆ. ಈ ವೇಳೆ ಮನೆ ಪಕ್ಕದ ಖಾಲಿ ಸೈಟ್​ನಲ್ಲಿ ಬಿಸಾಡಿದ್ದ ಹಣ ಪತ್ತೆಯಾಗಿದೆ. ಖಾಲಿ ಸೈಟ್​ನಲ್ಲಿ ಒಂದು 100, 500 ರೂ. ನೋಟು ಸಿಕ್ಕಿದೆ. ಬೆಳಗ್ಗೆ ದಾಳಿ ಬಳಿಕ ಖಾಲಿ ಸೈಟ್​ನಲ್ಲಿ ಹಣ ಬಿಸಾಡಿದ್ದರು. ಸದ್ಯ ಖಾಲಿ ಸೈಟ್​ನಲ್ಲಿ ಪರಿಶೀಲನೆ ನಡೆಯುತ್ತಿದೆ.

ಕಸದ ಬುಟ್ಟಿಯಲ್ಲಿ ಚಿನ್ನ, ಬೆಳ್ಳಿ ಪತ್ತೆ: ನೋಟುಗಳ ಪತ್ತೆ ಬಳಿಕ, ಎಸಿಬಿ ಅಧಿಕಾರಿಗಳು ಇಡೀ ಮನೆ ಸುತ್ತ ಹುಡುಕಾಡಿದ್ದಾರೆ. ಬೆಳಿಗ್ಗೆ ಎಇಇ ಅಶೋಕ್ ರೆಡ್ಡಿ ಪತ್ನಿ ಶೌಚಾಲಯಕ್ಕೆ ಹೋಗೊದಾಗಿ ಎರಡು, ಮೂರು ಬಾರೀ ಹೋಗಿದ್ದರು. ಆಗ ಅದೇ ಅನುಮಾನದಿಂದ ಮನೆ ಹಿಂಭಾಗದಲ್ಲಿ ಪರಿಶೀಲನೆ ಮಾಡಲಾಗಿದೆ. ಡಸ್ಟ್ ಬಿನ್​ನಲ್ಲಿ ಪ್ಲಾಸ್ಟಿಕ್ ಕವರ್ ಬಂದ ಆಗಿತ್ತು. ಆಗ ಅನುಮಾನದಿಂದ ಕವರ್ ತೆಗೆದು ನೋಡಿದಾಗ ಚಿನ್ನ, ಬೆಳ್ಳಿ ಪತ್ತೆಯಾಗಿದೆ.

ಇದನ್ನೂ ಓದಿ

2 ವರ್ಷದ ಬಳಿಕ ಅದ್ಧೂರಿಯಾಗಿ ನಡೆದ ನಂಜನಗೂಡು ದೊಡ್ಡ ಜಾತ್ರೆ; ಪಂಚ ಮಹಾರಥೋತ್ಸವದಲ್ಲಿ ರಾರಾಜಿಸಿದ ಪುನೀತ್ ಭಾವಚಿತ್ರ

ಫ್ರೆಂಚ್ ವರ್ಣಚಿತ್ರಗಾರ್ತಿ ರೋಸಾ ಬೊನ್‌ಹೂರ್ 200 ನೇ ಜನ್ಮದಿನ: ವಿಶೇಷ ಡೂಡಲ್​ ರಚಿಸಿದ ಗೂಗಲ್​

Published On - 11:09 am, Wed, 16 March 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!