50 ವರ್ಷಗಳ ಬಳಿಕ ಕಾಫಿನಾಡಿನಲ್ಲಿ ಬರಗಾಲದ ಕಾರ್ಮೋಡ; ಕಾಫಿ ಉಳಿಸಿಕೊಳ್ಳಲು ಸ್ಪಿಂಕ್ಲರ್ ಮೊರೆ ಹೋದ ಬೆಳೆಗಾರರು

ಮಳೆಯನಾಡು ಎಂದೇ ಖ್ಯಾತಿ ಪಡೆದಿರುವ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೇಲೆ ವರುಣದೇವ ಮುನಿಸಿಕೊಂಡಿದ್ದಾನೆ. ಜಿಲ್ಲೆಯಲ್ಲಿ ಪ್ರತಿ ವರ್ಷದ ವಾಡಿಕೆ ಮಳೆಯೂ ಸುರಿಯದೆ ಬರ ಎದುರಾಗಿದ್ದು ಫಸಲಿಗೆ ಬಂದಿರುವ ಕಾಫಿಯನ್ನ ಉಳಿಸಿಕೊಳ್ಳಲು ಬೆಳೆಗಾರರು ಸ್ಪಿಂಕ್ಲರ್ ಮೊರೆ ಹೋಗಿದ್ದಾರೆ..

50 ವರ್ಷಗಳ ಬಳಿಕ ಕಾಫಿನಾಡಿನಲ್ಲಿ ಬರಗಾಲದ ಕಾರ್ಮೋಡ; ಕಾಫಿ ಉಳಿಸಿಕೊಳ್ಳಲು ಸ್ಪಿಂಕ್ಲರ್ ಮೊರೆ ಹೋದ ಬೆಳೆಗಾರರು
ಚಿಕ್ಕಮಗಳೂರು
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 12, 2023 | 5:28 PM

ಚಿಕ್ಕಮಗಳೂರು, ಸೆ.12: ಈ ಬಾರಿ ರಾಜ್ಯಾದ್ಯಂತ ಬರದ ಛಾಯೆ ಮೂಡಿದೆ. ಹೌದು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಮುಂತಾದ ಜಿಲ್ಲೆಗಳಲ್ಲಿ ಈ ಪರಿಸ್ಥಿತಿ ಎದುರಾಗಿದೆ. ಅದರಂತೆ ಪ್ರತಿ ವರ್ಷ ಮಳೆಗಾಲದಲ್ಲಿ ಧಾರಾಕಾರವಾಗಿ ಮಳೆ‌ ಸುರಿದು ಚಿಕ್ಕಮಗಳೂರು (Chikkamagalur) ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಸುತ್ತಿದ್ದ ವರುಣದೇವ ಈ‌ ವರ್ಷ ಮುನಿಸಿಕೊಂಡಿದ್ದಾನೆ. ಪ್ರತಿ ವರ್ಷ ಸುರಿಯುತ್ತಿದ್ದ ವಾಡಿಕೆ ಮಳೆಯೂ ಜಿಲ್ಲೆಯಲ್ಲಿ ಸುರಿದಿಲ್ಲ. ಇದರಿಂದ ಕಾಫಿ ಬೆಳೆಗಾರರು ಕಂಗಾಲಾಗಿ ಹೋಗಿದ್ದಾರೆ. ಈಗಾಗಲೇ ಕಾಫಿ ಫಸಲು ಬಂದಿದ್ದು, ಕಾಫಿ ಬೆಳೆ ಜೊತೆ ಕಾಫಿ ತೋಟವನ್ನು ಉಳಿಸಿಕೊಳ್ಳಲು ಬೆಳೆಗಾರರು ಜೆಟ್​ಗಳ ಮೂಲಕ ಸ್ಪಿಂಕ್ಲರ್ ಮಾಡುತ್ತಿದ್ದಾರೆ.

50 ವರ್ಷಗಳ ಬಳಿಕ ಕಾಫಿನಾಡಿಗೆ ಬರಗಾಲ

ಕಾಫಿನಾಡಿನಲ್ಲಿ ಇಂತಹ ಬರಗಾಲದ ಸ್ಥಿತಿ 50 ವರ್ಷಗಳ ಬಳಿಕ‌ ನಿರ್ಮಾಣವಾಗಿದ್ದು. ಮಳೆಯ ಕಣ್ಣಾಮುಚ್ಚಾಲೆ ಆಟಕ್ಕೆ ಕಾಫಿಯನ್ನು ಉಳಿಸಿಕೊಳ್ಳುವುದೆ ಸವಾಲಾಗಿದೆ. ಕಡಿಮೆ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಸುಡು ಬಿಸಿಲಿಗೆ ಕಾಫಿ ಗಿಡಗಳಲ್ಲಿ ಬಂದಿರುವ ಫಸಲು ಹಾಳಾಗುವ ಆತಂಕದಲ್ಲಿದ್ದು, ಅದಕ್ಕೋಸ್ಕರ ಕಾಫಿ ಬೆಳೆಗಾರರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸ್ಪಿಂಕ್ಲರ್ ಮಾಡುತ್ತಿದ್ದಾರೆ. ಮಳೆ ಸುರಿಯಬೇಕಿದ್ದ ಸಮಯದಲ್ಲಿ ಮಳೆಯಾಗದೆ ಬೆಳೆಗಾರರು ಇದೇ ಮೊದಲ ಬಾರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ತೋಟಗಳಿಗೆ ಸ್ಪಿಂಕ್ಲರ್ ಮಾಡುತ್ತಿದ್ದೇವೆ ಎಂದು ಕಾಫಿ ತೋಟದ ಮ್ಯಾನೇಜರ್ ಯೋಗೇಶ್ ಎಂಬುವವರು ಹೇಳಿದ್ದಾರೆ.

ಇದನ್ನೂ ಓದಿ:ಉತ್ತರ ಕರ್ನಾಟಕದಲ್ಲಿ ಬರದ ಛಾಯೆ ಮಾಯ, ಮಲೆನಾಡಿನ ಸೊಬಗು! ದನಗಳ ಸಂತೆಯಲ್ಲಿ ಜೋಡೆತ್ತು ಬೆಲೆ ನ್ಯಾನೋ ಕಾರ್​​ ಬೆಲೆಯನ್ನೂ ಮೀರಿಸುತ್ತಿದೆ

ಒಟ್ಟಾರೆ, ಪ್ರತಿ ವರ್ಷ ಧಾರಾಕಾರವಾಗಿ ಮಳೆ‌ಸುರಿದು ಅವಾಂತರ ಸೃಷ್ಟಿಸಿ ಕಾಫಿ ಬೆಳೆಯನ್ನು ನಾಶ ಮಾಡುತ್ತಿದ್ದ ಮಳೆರಾಯ ಈ‌ ವರ್ಷ ಮಳೆ‌ ಸುರಿಸದೆ ಕಾಫಿ ಬೆಳೆಗಾರರನ್ನು ಕಂಗಾಲಾಗಿ ಮಾಡಿದ್ದಾನೆ. ಅದರಂತೆ ರೈತರು ಕೂಡ ಸ್ಪಿಂಕ್ಲರ್ ಮೊರೆ ಹೋಗಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ