AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯ ಮೇಲೆ ಅನಾಥಾಶ್ರಮದಲ್ಲಿ ಮನಸ್ಸೋ ಇಚ್ಛೆ ಥಳಿತ; ಆಸ್ಪತ್ರೆಗೆ ದಾಖಲು

ವೃದ್ಧೆಯ ಮೈತುಂಬ ಬಾಸುಂಡೆ ಗುರುತು, ತಲೆಗೆ ಗಂಭೀರ ಗಾಯ. ಚಿತ್ರ ಹಿಂಸೆ ನೀಡಿ ವೃದ್ಧೆಯ ಮೇಲೆ ಮನಸ್ಸೋ ಇಚ್ಛೆ ಥಳಿತ, ಇದರಿಂದ ಅಸ್ವಸ್ಥಗೊಂಡ ವೃದ್ಧೆಯನ್ನ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಘಟನೆ ಜಿಲ್ಲೆಯ ಅನಾಥಾಶ್ರಮದಲ್ಲಿ ನಡೆದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯ ಮೇಲೆ ಅನಾಥಾಶ್ರಮದಲ್ಲಿ ಮನಸ್ಸೋ ಇಚ್ಛೆ ಥಳಿತ; ಆಸ್ಪತ್ರೆಗೆ ದಾಖಲು
ಅನಾಥಶ್ರಾಮದಲ್ಲಿ ವೃದ್ಧೆಯ ಮೇಲೆ ಹಲ್ಲೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on:Jul 15, 2023 | 7:40 AM

Share

ಚಿಕ್ಕಮಗಳೂರು, ಜು.15: ವೃದ್ಧೆಯ ಮೈತುಂಬ ಬಾಸುಂಡೆ ಗುರುತು, ತಲೆಗೆ ಗಂಭೀರ ಗಾಯ. ಚಿತ್ರ ಹಿಂಸೆ ನೀಡಿ ವೃದ್ಧೆಯ ಮೇಲೆ ಮನಸ್ಸೋ ಇಚ್ಛೆ ಥಳಿತ, ಇದರಿಂದ ಅಸ್ವಸ್ಥಗೊಂಡ ವೃದ್ಧೆಯನ್ನ ಚಿಕ್ಕಮಗಳೂರು(chikkamagaluru) ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಘಟನೆ ಜಿಲ್ಲೆಯ ಅನಾಥಾಶ್ರಮವೊಂದರಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನಳ್ಳಿ ಗ್ರಾಮದ ರತ್ನಮ್ಮ (69) ಗಂಭೀರ ಗಾಯಗೊಂಡ ವೃದ್ಧೆ. ಇವರನ್ನ ಒಂದೂವರೆ ತಿಂಗಳ ಹಿಂದೆ, ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಹೊನ್ನೆಕೊಡಿಗೆ ಗ್ರಾಮದಲ್ಲಿರುವ ರಜಿನಾ ಸ್ನೇಹಾ ಆಶ್ರಮ ಟ್ರಸ್ಟ್ ಹೆಸರಿನ ಅನಾಥಾಶ್ರಮಕ್ಕೆ ಕುಟುಂಬಸ್ಥರು ಸೇರಿಸಿದ್ದರು. ಇದಾದ ಬಳಿಕ ವಾಪಸ್ ಮನೆಗೆ ಕರೆದುಕೊಂಡು ಹೋಗಲು ಬಂದಾಗ ಘಟನೆ ಬೆಳಕಿಗೆ ಬಂದಿದೆ.

ರಜಿತಾ ಸ್ನೇಹಾ ಆಶ್ರಮ ಟ್ರಸ್ಟ್ ಮುಖ್ಯಸ್ಥ ಲಿಜೇಶ್​ನಿಂದ ಕೃತ್ಯ ಆರೋಪ

ಇನ್ನು ಇತ್ತೀಚೆಗಷ್ಟೇ ಮಾನಸಿಕ ಕಾಯಿಲೆಗೆ ಚಿಕಿತ್ಸೆ ನೀಡುವುದಾಗಿ ಆಶ್ರಮಕ್ಕೆ ಸೇರಿಸಿಕೊಂಡಿದ್ದ ಲಿಜೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ ಎಂದು ರತ್ನಮ್ಮ ಕುಟುಂಬಸ್ಥರು ಎನ್.ಆರ್ ಪುರ ಪೊಲೀಸ್ ‌ಠಾಣೆಯಲ್ಲಿ ಲಿಜೇಶ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಇನ್ನು ಮೂಲಭೂತ ಸೌಕರ್ಯಗಳಿಲ್ಲದ ರಬ್ಬರ್ ತೋಟದಲ್ಲಿರುವ ಆಶ್ರಮದಲ್ಲಿ ಅನೇಕ ರೋಗದಿಂದ ಬಳಲುತ್ತಿರುವ 38 ವೃದ್ಧರು ಇದ್ದಾರೆ. ಇದೀಗ ಈ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಪುಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದು ಚಿನ್ನದ ಸರ ಮರೆತು ಹೋಗಿದ್ದ ಮಹಿಳೆ; ಪ್ರಾಮಾಣಿಕತೆ ಮೆರೆದು ಸರ ಪೊಲೀಸರಿಗೆ ತಲುಪಿಸಿದ ಚನ್ನಪಟ್ಟಣ ಯುವಕ!

ಇನ್ನು ಈ ಕುರಿತು ಮಾತನಾಡಿದ  ವೃದ್ದೆಯ ಮಗಳು ‘ ನಮ್ಮ ತಾಯಿ ಸರಿಯಾಗಿ ಔಷಧಿ, ಆಹಾರ ಸೇವಿಸುತ್ತಿರಲಿಲ್ಲ. ಹೀಗಾಗಿ ನಾವು ಸಾಮಾಜಿಕ ಜಾಲತಾಣದಲ್ಲಿ ಈ ಆಶ್ರಮದ ಬಗ್ಗೆ ನೋಡಿ, ಕೆಲ ದಿನಗಳ ಹಿಂದೆ ಇಲ್ಲಿ ಸೇರಿಸಿದ್ದೇವು. ಬಹುಶಃ ಈಗ ಸರಿ ಹೋಗಿರಬಹುದೆಂದು ಕರೆದುಕೊಂಡ ಹೋಗಲು ಬಂದಿದ್ದೆ. ಈ ವೇಳೆ ಅಮ್ಮನ ಮೈ ಮೇಲೆ ಬಾಸುಂಡೆಗಳು ಮೂಡಿದ್ದು, ಜೊತೆಗೆ ತಲೆಗೆ ಗಂಭೀರವಾಗಿ ಗಾಯಗೊಂಡಿರುವುದು ಕಾಣಿಸಿದ್ದು, ಕೂಡಲೇ ಆಸ್ಪತ್ರೆಗೆ ಸೇರಿದ್ದೇನೆ ಮತ್ತು ಈ ಕುರಿತು ಪೊಲೀಸ್​ ಠಾಣೆಗೂ ದೂರು ನೀಡಿರುವುದಾಗಿ ಹೇಳಿದರು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:38 am, Sat, 15 July 23

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ