AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಂಸದೂಟ, ಗೋರಿ ಪೂಜೆ ಬಳಿಕ ದತ್ತಾತ್ರೇಯ ಪೀಠದಲ್ಲಿ ಮತ್ತೊಂದು ವಿವಾದ: ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ

ಕೋರ್ಟ್ ಆದೇಶದ ಅನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ. ದತ್ತಭಕ್ತರು ಸೇರಿದಂತೆ ಮುಸ್ಲಿಂರಿಗೂ ಯಾವುದೇ ಪೂಜೆ ಪುನಸ್ಕಾರಕ್ಕೆ ಅವಕಾಶವಿಲ್ಲ. 

ಮಾಂಸದೂಟ, ಗೋರಿ ಪೂಜೆ ಬಳಿಕ ದತ್ತಾತ್ರೇಯ ಪೀಠದಲ್ಲಿ ಮತ್ತೊಂದು ವಿವಾದ: ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ
ದತ್ತಪೀಠದ ಆವರಣದಲ್ಲೇ ನಮಾಜ್ ಮಾಡಿದ ಮುಸ್ಲಿಮರು.
TV9 Web
| Edited By: |

Updated on:May 21, 2022 | 12:52 PM

Share

ಚಿಕ್ಕಮಗಳೂರು: ತಾಲೂಕಿನ ಇನಾಂ ದತ್ತಾತ್ರೇಯ ಪೀಠದಲ್ಲಿ ವಿವಾದದ ಮೇಲೆ ವಿವಾದಗಳು ಹುಟ್ಟಿಕೊಳ್ಳುತ್ತಿವೆ. ಮಾಂಸದೂಟ, ಗೋರಿ ಪೂಜೆ ಬಳಿಕ ಮತ್ತೊಂದು ವಿವಾದ ಹುಟ್ಟಿಕೊಂಡಿದ್ದು, ಮುಜರಾಯಿ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎನ್ನಲಾಗುತ್ತಿದೆ. ದತ್ತಪೀಠದ ಆವರಣದಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಆವರಣ ಮಾತ್ರವಲ್ಲ ಗುಹೆಯ ಒಳಗೂ ಮುಸ್ಲಿಮರಿಂದ ನಮಾಜ್ ಮಾಡಲಾಗಿದೆ ಎನ್ನಲಾಗುತ್ತಿದೆ. ಜಿಲ್ಲಾಡಳಿತದಿಂದ ನೇಮಿಸಲ್ಪಟ್ಟ ಮುಜಾವರ್​ರಿಂದ ಮಾತ್ರ ದತ್ತ ಪಾದುಕೆ, ಗೋರಿಗಳಿಗೆ ಪೂಜೆಗೆ ಅವಕಾಶ ನೀಡಲಾಗಿದೆ. ಕೋರ್ಟ್ ಆದೇಶವನ್ನ ಗಾಳಿಗೆ ತೂರಿದ ಮುಸ್ಲಿಮರು. ಕೋರ್ಟ್ ಆದೇಶದ ಅನ್ವಯ ಆವರಣ ಸೇರಿ ಗುಹೆ ಒಳಗೆ ಪ್ರಾರ್ಥನೆ, ನಮಾಜ್, ಪೂಜೆ ಸಲ್ಲಿಸಲು ಅವಕಾಶವಿಲ್ಲ. ದತ್ತಭಕ್ತರು ಸೇರಿದಂತೆ ಮುಸ್ಲಿಂರಿಗೂ ಯಾವುದೇ ಪೂಜೆ ಪುನಸ್ಕಾರಕ್ಕೆ ಅವಕಾಶವಿಲ್ಲ.

ದಿಢೀರ್ ಸಭೆ ದತ್ತಪೀಠದಲ್ಲಿ ಕಾನೂನು ಉಲ್ಲಂಘಿಸುವ ವಿಡಿಯೋಗಳು ವೈರಲ್​ ಆಗಿದ್ದು, ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಮುಜಾರಾಯಿ ಇಲಾಖೆ ಅಧಿಕಾರಿಗಳ ದಿಢೀರ್ ಸಭೆ ನಡೆಸಿದರು. ಎಲ್ಲಾ ಕಡತಗಳನ್ನ ಕಚೇರಿಗೆ ತರೆಸಿಕೊಳ್ಳುತ್ತಿರೋ ಡಿಸಿ, ಸಂಪೂರ್ಣ ಮಾಹಿತಿ ಕಲೆಹಾಕುತ್ತಿದ್ದಾರೆ.

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ

ಇದನ್ನೂ ಓದಿ
Image
Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ವಾರಣಾಸಿ ಜಿಲ್ಲಾ ನ್ಯಾಯಾಧೀಶರಿಗೆ ಪ್ರಕರಣವನ್ನು ವರ್ಗಾಯಿಸಲು ಸುಪ್ರೀಂಕೋರ್ಟ್ ಆದೇಶ
Image
ವಿವಾದಿತ ಸ್ಥಳ ದತ್ತಪೀಠದಲ್ಲಿ ಕಾನೂನು ಉಲ್ಲಂಘನೆ: ಹಿಂದೂ ಸಂಘಟನೆಗಳಿಂದ ಪ್ರತಿಭಟನೆ, ಪ್ರಮೋದ್ ಮುತಾಲಿಕ್ ಆಕ್ರೋಶ
Image
Gyanvapi masjid controversy: ಕೋರ್ಟ್ ನೇಮಿಸಿದ ಕಮೀಷನರುಗಳಿಂದ ವಿಡಿಯೋ ಸರ್ವೇ ನಾಳೆ ಆರಂಭ, ಪ್ರಕ್ರಿಯೆ ಹೇಗೆ ನಡೆಯಲಿದೆ ಗೊತ್ತಾ?
Image
Dattapeeta Fighter: ಅಂದು-ಇಂದು ಎಂದೆಂದಿಗೂ ನಾನು ದತ್ತಪೀಠ ಹೋರಾಟಗಾರನೇ, ಹಿಂದೆ ಸರಿಯುವ ಮಾತೇ ಇಲ್ಲ-ಸಚಿವ ಸುನಿಲ್ ಕುಮಾರ್

ಚಿಕ್ಕಮಗಳೂರು ದತ್ತಪೀಠದ ಪವಿತ್ರ ಕ್ಷೇತ್ರದಲ್ಲಿ ಮಾಂಸಾಹಾರ ಮಾಡಿದ ವಿಚಾರ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಇನ್ನು ಮುಂದೆ ದತ್ತಪೀಠದ ಒಳಗೆ ಮುಸ್ಲಿಮರನ್ನು ಬಿಡುವುದಿಲ್ಲ ಎಂದು ಈ ಹಿಂದೆ ಹೇಳಿದ್ದರು. ಜಿಲ್ಲೆಯ ಜಮಖಂಡಿಯಲ್ಲಿ ಹೇಳಿಕೆ ನೀಡಿದ ಅವರು, ಪವಿತ್ರ ಕ್ಷೇತ್ರ ದತ್ತಪೀಠವನ್ನು ಅಪವಿತ್ರ ಮಾಡಿದ್ದಾರೆ. ನಾನು ಇದನ್ನು ಖಂಡಿಸುತ್ತೇನೆ, ವಿರೋಧಿಸುತ್ತೇನೆ. ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ ಏನು ಕತ್ತೆ ಕಾಯ್ತಾ ಇದೆಯಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ದೀಪಿಕಾ, ಪ್ರಿಯಾಂಕಾ ರೀತಿ ಹಾಲಿವುಡ್​ಗೆ ಹೋಗ್ತಾರಾ ಕಂಗನಾ? ಖಡಕ್​ ಉತ್ತರ ನೀಡಿದ ‘ಧಾಕಡ್​’ ನಟಿ

ಮಾಂಸದ ಊಟ ನಿಷಿದ್ಧ ಇದ್ದರೂ ಅಲ್ಲಿ ಮಾಂಸದ ಊಟ ಮಾಡ್ತಾರೆ, ಗೊಮಾಂಸದೂಟ ಮಾಡ್ತಾರೆ. ಹೋಮಹವನ ಮಾಡುವಂತ ಪವಿತ್ರ ಕ್ಷೇತ್ರದಲ್ಲಿ ಗಲೀಜು ಮಾಡಲಾಗಿದೆ. ಇದು ಅಕ್ಷಮ್ಯ ಅಪರಾಧ. ಮುಜರಾಯಿ ಇಲಾಖೆ ಮತ್ತು ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಯವರು ಕೂಡಲೆ ತನಿಖೆ ನಡೆಸಬೇಕು. ಯಾರು ತಪ್ಪಿತಸ್ಥರು ಇದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಮುಸ್ಲಿಮರನ್ನು ಮೇಲೆ ಹೋಗಲು ಬಿಡುವುದಿಲ್ಲ. ದತ್ತಪೀಠ ಪ್ರವೇಶ ಮಾಡಲು ಬಿಡುವುದಿಲ್ಲ ಎಂದಿದ್ದಾರೆ.

ದತ್ತಪೀಠದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಹೋಮ ಮತ್ತು ಹವನ ನಡೆಸುವ ಹಿಂದೂಗಳಿಗೆ ಇದು ಬಹಳ ಪವಿತ್ರವಾದ ಸ್ಥಳವಾಗಿದೆ. ಪರಿಸ್ಥಿತಿ ಹೀಗಿರುವಾಗ ದತ್ತಪೀಠದ ಆವರಣದಲ್ಲಿ ಮಾಂಸ ತೆಗೆದುಕೊಂಡು ಬಂದು ಬೇಯಿಸಿಕೊಂಡು ತಿಂದರೆ ಸ್ಥಳದ ಪಾವಿತ್ರ್ಯತೆ ಹಾಳಾಗುತ್ತದೆ. ಸರ್ಕಾರ ಅದರಲ್ಲೂ ವಿಶೇಷವಾಗಿ ಮುಜರಾಯಿ ಹಾಗೂ ಪೊಲೀಸ್ ಕೂಡಲೇ ಕಾರ್ಯಪ್ರವೃತ್ತರಾಗಿ ತಪ್ಪಿತಸ್ಥರನ್ನು ಪತ್ತೆ ಮಾಡಿ ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ವಿ ಎಚ್ ಪಿ ಮತ್ತು ಭಜರಂಗ ದಳದ ಸದಸ್ಯರು ಅಗ್ರಹಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 am, Sat, 21 May 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್