AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ಬಲೆಗೆ ಶೃಂಗೇರಿ ತಹಶೀಲ್ದಾರ್, ಗಾಂಜಾ ಮಾರುತ್ತಿದ್ದವರ ಬಂಧನ, ಶಾಸಕ ಬೋಪಯ್ಯಗೆ ಬ್ಲಾಕ್​ಮೇಲ್

ಈ ಹಿಂದೆಯೂ ಅಂಬುಜಾ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಮನೆ ಹಕ್ಕು ಪತ್ರ, ಅಕ್ರಮ ಖಾತೆ ಮಾಡಿಕೊಡಲು ಲಂಚಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದರು.

ಎಸಿಬಿ ಬಲೆಗೆ ಶೃಂಗೇರಿ ತಹಶೀಲ್ದಾರ್, ಗಾಂಜಾ ಮಾರುತ್ತಿದ್ದವರ ಬಂಧನ, ಶಾಸಕ ಬೋಪಯ್ಯಗೆ ಬ್ಲಾಕ್​ಮೇಲ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 06, 2022 | 6:33 PM

Share

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಹಶೀಲ್ದಾರ್ ಅಂಬುಜಾ ಗುರುವಾರ ಎಸಿಬಿ (Anti Corruption Bureau – ACB) ಬಲೆಗೆ ಬಿದ್ದರು. ಈ ಹಿಂದೆಯೂ ಅಂಬುಜಾ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬಂದಿದ್ದವು. ಮನೆ ಹಕ್ಕು ಪತ್ರ, ಅಕ್ರಮ ಖಾತೆ ಮಾಡಿಕೊಡಲು ಲಂಚಸ್ವೀಕರಿಸುತ್ತಿದ್ದಾಗ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದರು. ಲಂಚ ಪಡೆದು ಅಕ್ರಮವಾಗಿ ನೂರಾರು ಜನರಿಗೆ ಖಾತೆ ಮತ್ತು ಹಕ್ಕುಪತ್ರ ಮಾಡಿಕೊಟ್ಟಿರುವ ಆರೋಪ ಅಂಬುಜಾ ಅವರ ವಿರುದ್ಧ ಮೊದಲಿನಿಂದಲೂ ಕೇಳಿಬಂದಿತ್ತು.

ಗಾಂಜಾ ಮಾರುತ್ತಿದ್ದವರ ಬಂಧನ ನೆಲಮಂಗಲ: ದ್ವಿಚಕ್ರ ವಾಹನದಲ್ಲಿ ಗಾಂಜಾ ಮಾರುತ್ತಿದ್ದ ಮಹೇಶ್ವರನ್, ರಾಜನ್‌ ಅವರನ್ನು ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹ 50 ಸಾವಿರ ಮೌಲ್ಯದ 1.2 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇವರು ಸ್ಕೂಟಿ ಡಿಕ್ಕಿಯಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು ಎಂದು ದೂರಲಾಗಿದೆ.

ಅಪರಿಚಿತನಿಂದ ಬೋಪಯ್ಯಗೆ ಬ್ಲ್ಯಾಕ್​ಮೇಲ್ ಮಡಿಕೇರಿ: ಅಪರಿಚಿತನಿಂದ ಬ್ಲ್ಯಾಕ್​ಮೇಲ್ ಫೋನ್ ಕರೆ ಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಮಡಿಕೇರಿ ಠಾಣೆಗೆ ದೂರು ನೀಡಿದ್ದಾರೆ. ಚೆನ್ನೈ ಎಸಿಬಿ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದ ವ್ಯಕ್ತಿಯು, ನಿಮ್ಮ ವಿರುದ್ಧ ಹಲವು ದೂರುಗಳಿವೆ. ದಾಳಿ ತಡೆಯಲು ₹ 1 ಕೋಟಿ ಲಂಚ ಕೊಡಬೇಕು ಎಂದು ಬ್ಲ್ಯಾಕ್​ಮೇಲ್ ಮಾಡಿದ್ದ ಎಂದು ದೂರಲಾಗಿದೆ.

ಕಬ್ಬಿನ ಹೊಲಕ್ಕೆ ಬೆಂಕಿ ಧಾರವಾಡ: ಕಲಘಟಗಿ ಬಳಿ ಕಬ್ಬಿನ ಗದ್ದೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಳೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಭಸ್ಮವಾಗಿದೆ. ಅಕ್ಕಪಕ್ಕದ ಹೊಲಗಳಿಗೂ ಬೆಂಕಿ ವ್ಯಾಪಿಸಿದೆ. ಪೊಲೀಸರು ಸಕಾಲದಲ್ಲಿ ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿ, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ.

ಇದನ್ನೂ ಓದಿ: Crime News: ಬಾಡಿಗೆ ಮನೆ ನೋಡುವ ನೆಪದಲ್ಲಿ ಮಚ್ಚು ತೋರಿಸಿ ಮಹಿಳೆಯ ಕತ್ತಿನಲ್ಲಿದ್ದ ಸರಗಳವು ಇದನ್ನೂ ಓದಿ: Crime News: ಬೆಂಗಳೂರಿನಲ್ಲಿ ಕಳವಾದ ಕಾರು ಫಾಸ್ಟ್​ಟ್ಯಾಗ್ ಸಹಾಯದಿಂದ ಹುಬ್ಬಳ್ಳಿಯಲ್ಲಿ ಪತ್ತೆ!

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?