AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayyana Kere: ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು

Tourist Spot: ಮಿನಿನಂತೆ ಜಿಗಿಯೋಕು ಓಕೆ.. ಫ್ಯಾಮಿಲಿ ಜೊತೆ ನಲಿಯೋಕೆ ಓಕೆ.. ನೀರಿನಲ್ಲಿ ಈಜಾಡೋಕು ಅಡ್ಡಿ ಇಲ್ಲ.. ಮುಖ್ಯವಾಗಿ ನೀರಿನ ಸುತ್ತಲೂ ಹಸಿರ ಗುಡ್ಡಗಳ ಸಾಲಿದೆ. ಇಂತಹ ಪ್ಲೇಸ್ನಲ್ಲಿ ಜೊತೆಗೆ ಫ್ರೆಂಡ್ಸ್ ಇದ್ರೆ ಅಂತೂ ಮುಗೀತ್. ಫುಲ್ ಎಂಜಾಯ್ ಮಾಡೋದೇ.. ದಿನವಿಡೀ ನೀರಿನಲ್ಲಿ ಆಟವಾಡೋದೇ..

Ayyana Kere: ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು
ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು
TV9 Web
| Edited By: ಆಯೇಷಾ ಬಾನು|

Updated on: Aug 06, 2021 | 3:03 PM

Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ(Ayyana Kere). 100 ಎಕರೆಗೂ ಹೆಚ್ಚಿನ ವಿಸ್ತಿರ್ಣವುಳ್ಳ ಕೆರೆ. ಅಂದಾಜು 5 ರಿಂದ 6 ಸಾವಿರ ಹೆಕ್ಟೇರ್ ನೀರಾವರಿ ಕಲ್ಪಿಸೋ ಜೀವನಾಡಿ. ಮಲೆನಾಡಿನ ಮಳೆ ಅಬ್ಬರಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಆಕರ್ಷಣೆಯ ಕೇಂದ್ರ ಬಿಂದುವಾಗಿ ಪ್ರವಾಸಿ ತಾಣವಾಗಿದೆ(Tourist Spot). ಅಲ್ದೆ, ಏಳು ಗುಡ್ಡಗಳ ಮಧ್ಯೆ ಇರೋ ಈ ಕೆರೆ ಕೋಡಿ ಬಿದ್ದಿರೋದ್ರಿಂದ, ನೀರಿನ ಸೌಂದರ್ಯ ಸವಿಯಲು ಪ್ರವಾಸಿಗರ ದಂಡೇ ಹರಿದು ಬರ್ತಿದೆ. ಅಲ್ದೆ, ಕೆರೆ ತುಂಬಿ ಹರಿಯುತ್ತಿರುವುದರಿಂದ ಈ ಭಾಗದ ರೈತರು, ಜನಸಾಮಾನ್ಯರಿಗಂತೂ ಸಂಭ್ರಮವೋ ಸಂಭ್ರಮ.

Ayyana Kere

ಅಯ್ಯನಕೆರೆಯಲ್ಲಿ ಎಂಜಾಯ್ ಮಾಡುತ್ತಿರುವ ಪ್ರವಾಸಿಗರು

ಇನ್ನು, ಚಂದ್ರದ್ರೋಣ ಪರ್ವತ ಶ್ರೇಣಿಗೆ ಭೇಟಿ ನೀಡೋ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡಿ ಕಾಲ ಕಳೀತಾರೆ. ಅದ್ರಲ್ಲೂ ಇಲ್ಲಿ ಯುವಕ-ಯುವತಿಯರು, ಪ್ರೇಮಿಗಳ ಸಂಖ್ಯೆಯೇ ಹೆಚ್ಚು. ವೀಕೆಂಡ್‍ನಲ್ಲಿ ಇಲ್ಲಿಗೆ ಆಗಮಿಸೋ ಪ್ರವಾಸಿಗರು ದಿನವಿಡೀ ಕೆರೆ ಬಳಿ ಕುಣಿದು ಕುಪ್ಪಳಿಸ್ತಾರೆ. ಮತ್ತೊಂದೆಡೆ ಸಾಹಸಿ ಈಜುಪಟುಗಳು ಹತ್ತಾರು ಅಡಿ ಆಳವಿರೋ ಕೆರೆಯಲ್ಲಿ ತಮ್ಮ ಸಾಹಸವನ್ನ ತೋರಿಸ್ತಾರೆ. ಇಷ್ಟೇ ಅಲ್ಲ, ಇಲ್ಲಿ ಹರಿಯೋ ನೀರು ಕಡೂರು ತಾಲೂಕಿನ ಬಹುತೇಕ ಭಾಗಕ್ಕೆ ಕುಡಿಯೋ ನೀರಿನ ಸೌಲಭ್ಯ ಕಲ್ಪಿಸಿದೆ. ಇಲ್ಲಿನ ಊರುಕಾಲುವೆ, ಬಸವನಕಾಲುವೆ, ಕಡೇ ಕಾಲುವೆ, ಗೌರಿ ಹಳ್ಳಿ ನಾಲ್ಕು ಕಾಲುವೆಗಳಾಗಿ ಹರಿಯೋ ನೀರು ಸಾವಿರಾರು ಜನರಿಗೆ ಬದುಕುವ ಚೈತನ್ಯ ತಂದಿದೆ.

Ayyana Kere

ಸಾಹಸಿ ಈಜುಪಟುಗಳು ಹತ್ತಾರು ಅಡಿ ಆಳವಿರೋ ಕೆರೆಯಲ್ಲಿ ತಮ್ಮ ಸಾಹಸವನ್ನ ಪ್ರದರ್ಶನ

ಸದ್ಯ, ಪ್ರವಾಸಿ ತಾಣವಾಗಿರೋ ಈ ಸ್ಥಳ, ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಕೆರೆಯ ಸೌಂದರ್ಯದ ರಾಶಿ ಕೂಡ ಕಣ್ಣಲ್ಲಿ ಕಟ್ಟುವಂತಿದೆ. ಈಗಾಗಲೇ ಅಯ್ಯನಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗ್ತಿದ್ದು, ಪ್ರವಾಸಿಗರಿಗೆ ಮತ್ತಷ್ಟು ಕಿಕ್ ಕೊಡ್ತಿದೆ.

Ayyana Kere

ಅಯ್ಯನಕೆರೆಯ ನೀರಿನೊಂದಿಗೆ ಮಗುವಿನ ಆಟ

ಇದನ್ನೂ ಓದಿ: ದಶಕದ ಬಳಿಕ ಜೋಗ ಜಲಪಾತದಂತೆ ತುಂಬಿ ಹರಿದ ಉಚ್ಚಂಗಿದುರ್ಗದ ಹೊನ್ನಮ್ಮನ ಝರಿ -ಮನ ಸೋತ ಪ್ರವಾಸಿಗರು

Follow Us
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬೆಳಗ್ಗೆ 6 ಗಂಟೆಯಿಂದಲೇ ‘ಟಾಕ್ಸಿಕ್’ ಪ್ರದರ್ಶನ ಆರಂಭ; ಜೋರಾಗಿದೆ ಕ್ರೇಜ್
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್