AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ayyana Kere: ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು

Tourist Spot: ಮಿನಿನಂತೆ ಜಿಗಿಯೋಕು ಓಕೆ.. ಫ್ಯಾಮಿಲಿ ಜೊತೆ ನಲಿಯೋಕೆ ಓಕೆ.. ನೀರಿನಲ್ಲಿ ಈಜಾಡೋಕು ಅಡ್ಡಿ ಇಲ್ಲ.. ಮುಖ್ಯವಾಗಿ ನೀರಿನ ಸುತ್ತಲೂ ಹಸಿರ ಗುಡ್ಡಗಳ ಸಾಲಿದೆ. ಇಂತಹ ಪ್ಲೇಸ್ನಲ್ಲಿ ಜೊತೆಗೆ ಫ್ರೆಂಡ್ಸ್ ಇದ್ರೆ ಅಂತೂ ಮುಗೀತ್. ಫುಲ್ ಎಂಜಾಯ್ ಮಾಡೋದೇ.. ದಿನವಿಡೀ ನೀರಿನಲ್ಲಿ ಆಟವಾಡೋದೇ..

Ayyana Kere: ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು
ತುಂಬಿದ ಐತಿಹಾಸಿಕ ಅಯ್ಯನಕೆರೆ, ಸೌಂದರ್ಯ ಸವಿಯಲು ಹರಿದು ಬಂದ ಪ್ರವಾಸಿಗರ ದಂಡು
TV9 Web
| Edited By: |

Updated on: Aug 06, 2021 | 3:03 PM

Share

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ಅಯ್ಯನಕೆರೆ(Ayyana Kere). 100 ಎಕರೆಗೂ ಹೆಚ್ಚಿನ ವಿಸ್ತಿರ್ಣವುಳ್ಳ ಕೆರೆ. ಅಂದಾಜು 5 ರಿಂದ 6 ಸಾವಿರ ಹೆಕ್ಟೇರ್ ನೀರಾವರಿ ಕಲ್ಪಿಸೋ ಜೀವನಾಡಿ. ಮಲೆನಾಡಿನ ಮಳೆ ಅಬ್ಬರಕ್ಕೆ ಕಳೆದ ಮೂರ್ನಾಲ್ಕು ದಿನಗಳಿಂದ ಆಕರ್ಷಣೆಯ ಕೇಂದ್ರ ಬಿಂದುವಾಗಿ ಪ್ರವಾಸಿ ತಾಣವಾಗಿದೆ(Tourist Spot). ಅಲ್ದೆ, ಏಳು ಗುಡ್ಡಗಳ ಮಧ್ಯೆ ಇರೋ ಈ ಕೆರೆ ಕೋಡಿ ಬಿದ್ದಿರೋದ್ರಿಂದ, ನೀರಿನ ಸೌಂದರ್ಯ ಸವಿಯಲು ಪ್ರವಾಸಿಗರ ದಂಡೇ ಹರಿದು ಬರ್ತಿದೆ. ಅಲ್ದೆ, ಕೆರೆ ತುಂಬಿ ಹರಿಯುತ್ತಿರುವುದರಿಂದ ಈ ಭಾಗದ ರೈತರು, ಜನಸಾಮಾನ್ಯರಿಗಂತೂ ಸಂಭ್ರಮವೋ ಸಂಭ್ರಮ.

Ayyana Kere

ಅಯ್ಯನಕೆರೆಯಲ್ಲಿ ಎಂಜಾಯ್ ಮಾಡುತ್ತಿರುವ ಪ್ರವಾಸಿಗರು

ಇನ್ನು, ಚಂದ್ರದ್ರೋಣ ಪರ್ವತ ಶ್ರೇಣಿಗೆ ಭೇಟಿ ನೀಡೋ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡಿ ಕಾಲ ಕಳೀತಾರೆ. ಅದ್ರಲ್ಲೂ ಇಲ್ಲಿ ಯುವಕ-ಯುವತಿಯರು, ಪ್ರೇಮಿಗಳ ಸಂಖ್ಯೆಯೇ ಹೆಚ್ಚು. ವೀಕೆಂಡ್‍ನಲ್ಲಿ ಇಲ್ಲಿಗೆ ಆಗಮಿಸೋ ಪ್ರವಾಸಿಗರು ದಿನವಿಡೀ ಕೆರೆ ಬಳಿ ಕುಣಿದು ಕುಪ್ಪಳಿಸ್ತಾರೆ. ಮತ್ತೊಂದೆಡೆ ಸಾಹಸಿ ಈಜುಪಟುಗಳು ಹತ್ತಾರು ಅಡಿ ಆಳವಿರೋ ಕೆರೆಯಲ್ಲಿ ತಮ್ಮ ಸಾಹಸವನ್ನ ತೋರಿಸ್ತಾರೆ. ಇಷ್ಟೇ ಅಲ್ಲ, ಇಲ್ಲಿ ಹರಿಯೋ ನೀರು ಕಡೂರು ತಾಲೂಕಿನ ಬಹುತೇಕ ಭಾಗಕ್ಕೆ ಕುಡಿಯೋ ನೀರಿನ ಸೌಲಭ್ಯ ಕಲ್ಪಿಸಿದೆ. ಇಲ್ಲಿನ ಊರುಕಾಲುವೆ, ಬಸವನಕಾಲುವೆ, ಕಡೇ ಕಾಲುವೆ, ಗೌರಿ ಹಳ್ಳಿ ನಾಲ್ಕು ಕಾಲುವೆಗಳಾಗಿ ಹರಿಯೋ ನೀರು ಸಾವಿರಾರು ಜನರಿಗೆ ಬದುಕುವ ಚೈತನ್ಯ ತಂದಿದೆ.

Ayyana Kere

ಸಾಹಸಿ ಈಜುಪಟುಗಳು ಹತ್ತಾರು ಅಡಿ ಆಳವಿರೋ ಕೆರೆಯಲ್ಲಿ ತಮ್ಮ ಸಾಹಸವನ್ನ ಪ್ರದರ್ಶನ

ಸದ್ಯ, ಪ್ರವಾಸಿ ತಾಣವಾಗಿರೋ ಈ ಸ್ಥಳ, ಪ್ರವಾಸಿಗರನ್ನ ಕೈ ಬಿಸಿ ಕರೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಈ ಕೆರೆಯ ಸೌಂದರ್ಯದ ರಾಶಿ ಕೂಡ ಕಣ್ಣಲ್ಲಿ ಕಟ್ಟುವಂತಿದೆ. ಈಗಾಗಲೇ ಅಯ್ಯನಕೆರೆಯಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗ್ತಿದ್ದು, ಪ್ರವಾಸಿಗರಿಗೆ ಮತ್ತಷ್ಟು ಕಿಕ್ ಕೊಡ್ತಿದೆ.

Ayyana Kere

ಅಯ್ಯನಕೆರೆಯ ನೀರಿನೊಂದಿಗೆ ಮಗುವಿನ ಆಟ

ಇದನ್ನೂ ಓದಿ: ದಶಕದ ಬಳಿಕ ಜೋಗ ಜಲಪಾತದಂತೆ ತುಂಬಿ ಹರಿದ ಉಚ್ಚಂಗಿದುರ್ಗದ ಹೊನ್ನಮ್ಮನ ಝರಿ -ಮನ ಸೋತ ಪ್ರವಾಸಿಗರು

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ