AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ 10 ರೂಪಾಯಿ ಚಿಲ್ಲರೆಗಾಗಿ 28 ವರ್ಷದ ಬಾರ್ ಕ್ಯಾಶಿಯರ್ ಕೊಲೆ; 6 ಆರೋಪಿಗಳು ಅರೆಸ್ಟ್

ಆರು ಜನರೂ ಸೇರಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಮುಷ್ಠಿಯಲ್ಲಿ ಎದೆ, ಹೊಟ್ಟೆ ಹಾಗೂ ಮುಖಕ್ಕೆ ಬಲವಾಗಿ ಹೊಡೆದು ಹೋಗಿದ್ದಾರೆ. ಹಲ್ಲೆಗೊಳಗಾದ ಯಶ್ಪಾಲ್ ತೀವ್ರ ಎದೆ ನೋವು ಎಂದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ.

ಚಿಕ್ಕಮಗಳೂರಿನಲ್ಲಿ 10 ರೂಪಾಯಿ ಚಿಲ್ಲರೆಗಾಗಿ 28 ವರ್ಷದ ಬಾರ್ ಕ್ಯಾಶಿಯರ್ ಕೊಲೆ; 6 ಆರೋಪಿಗಳು ಅರೆಸ್ಟ್
ಸಖರಾಯಪಟ್ಟಣ ಪೊಲೀಸ್ ಠಾಣೆ
TV9 Web
| Edited By: |

Updated on: Apr 04, 2022 | 6:42 PM

Share

ಚಿಕ್ಕಮಗಳೂರು: ಚಿಲ್ಲರೆ ಹಣಕ್ಕಾಗಿ ಮದ್ಯ ವ್ಯಸನಿಗಳು ಬಾರ್ ಕ್ಯಾಶಿಯರ್(Bar Cashier Murder) ಜೊತೆ ಜಗಳವಾಡಿ ಆತನನ್ನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ 28 ವರ್ಷದ ಯಶ್‍ಪಾಲ್ ಮೃತ ದುರ್ದೈವಿ.

ಯುಗಾದಿ ಹಬ್ಬದ ದಿನವಾದ ಶನಿವಾರ ಸಂಜೆ ಆರು ಗಂಟೆಗೆ ಆರು ಜನ ಯುವಕರು ಸಖರಾಯಪಟ್ಟಣ ಸಮೀಪದ ಪ್ರವಾಸಿತಾಣ ಅಯ್ಯನಕೆರೆಗೆ ಹೋಗಿದ್ದರು. ಅಲ್ಲಿಂದ ಬಂದವರು ಮದ್ಯದ ಖರೀದಿಗೆ ಸಖರಾಯಪಟ್ಟಣದ ಬಾರ್ಗೆ ಬಂದಿದ್ದರು. ಬಿಯರ್ ಖರೀದಿಸಿದ ಬಳಿಕ ಚಿಲ್ಲರೆ ಹಣಕ್ಕಾಗಿ ಬಾರಿನ ಮತ್ತೊಬ್ಬ ಕ್ಯಾಶಿಯರ್ ಲಕ್ಷ್ಮಿಶ್ ಎಂಬುವನ ಜೊತೆ ಮಾತಿನ ಚಕಮಕಿ ನಡೆಸಿದ್ದರು. ಹತ್ತು ರೂಪಾಯಿ ಚಿಲ್ಲರೆ ಹಣಕ್ಕಾಗಿ ಕ್ಯಾಶಿಯರ್ ಜೊತೆ ಗಲಾಟೆ ಮಾಡಿದ್ದರು. ಈ ವೇಳೆ, ಬಾರ್ ಮುಂದೆ ಇದ್ದ ಬೈಕನ್ನ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿ ಗಲಾಟೆ ಮಾಡಿದ್ದಾರೆ. ಬೈಕ್‍ಗಳನ್ನ ರಸ್ತೆಗೆ ಅಡ್ಡಲಾಗಿ ನಿಲ್ಲಿಸಿರುವುದನ್ನ ಕಂಡು ಮತ್ತೊಬ್ಬ ಕ್ಯಾಶಿಯರ್ ಯಶ್‍ಪಾಲ್ ಆಕ್ಷೇಪಿಸಿದ್ದಾರೆ.

ಜನ ಓಡಾಡಲು ತೊಂದರೆಯಾಗುತ್ತೆ. ಪೊಲೀಸರು ಬಂದರೆ ಬೈಯುತ್ತಾರೆ, ಗಾಡಿಗಳನ್ನ ತೆಗೆಯಿರಿ ಎಂದಿದ್ದಾನೆ. ಆಗ ಆರು ಜನರೂ ಸೇರಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಮುಷ್ಠಿಯಲ್ಲಿ ಎದೆ, ಹೊಟ್ಟೆ ಹಾಗೂ ಮುಖಕ್ಕೆ ಬಲವಾಗಿ ಹೊಡೆದು ಹೋಗಿದ್ದಾರೆ. ಹಲ್ಲೆಗೊಳಗಾದ ಯಶ್ಪಾಲ್ ತೀವ್ರ ಎದೆ ನೋವು ಎಂದು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಗರೆ ಬಳಿ ಸಾವನ್ನಪ್ಪಿದ್ದಾರೆ. ಮೃತ ಯಶ್‍ಪಾಲ್ ಮನೆಯವರು ಸಖರಾಯಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಡ ಕುಟುಂಬದ ಯಶ್‍ಪಾಲ್ ಏಳೆಂಟು ವರ್ಷಗಳಿಂದ ಬಾರ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಾ ತನ್ನ ತಾಯಿಯನ್ನ ನೋಡಿಕೊಳ್ಳುತ್ತಿದ್ದ. ಮನೆಗೆ ಅವನೇ ಆಧಾರಸ್ತಂಭವಾಗಿದ್ದ. ತಾಯಿ-ಮಗ ಇಬ್ಬರೇ ವಾಸವಿದ್ದು, ಇದೀಗ ಮಗನನ್ನ ಕಳೆದುಕೊಂಡು ತಾಯಿಯ ಆಸರೆಗೆ ಯಾರೂ ಇಲ್ಲದಂತಾಗಿದೆ. ಪ್ರಕರಣ ದಾಖಲಿಸಿಕೊಂಡ ಸಖರಾಯಪಟ್ಟಣ ಪೊಲೀಸರು ಯಶ್‍ಪಾಲ್ ಮೇಲೆ ಹಲ್ಲೆ ಮಾಡಿದ ಚಿಕ್ಕಮಗಳೂರಿನ ನರಿಗುಡ್ಡನಹಳ್ಳಿ ರಘು, ಹೌಸಿಂಗ್ ಬೋರ್ಡ್ ಪ್ರಕಾಶ್, ಕಲ್ಯಾಣ ನಗರದ ಯಶೀಶ್, ತರೀಕೆರೆಯ ಶ್ರೀಧರ್, ಮಂಜುನಾಥ್, ಬೀರೂರು-ಅಜ್ಜಂಪುರ ರಸ್ತೆಯ ಸಂಜಯ್ ಎಂಬ ಆರು ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಬಿಯರ್ ಖರೀದಿಸಲು ಬಾರ್​ಗೆ ಬಂದವರ ನಡುವೆ ಜಗಳ; ಮಧ್ಯೆ ಬಂದ ಕ್ಯಾಶಿಯರ್​ನನ್ನೇ ಕೊಂದು ಎಸ್ಕೇಪ್ ಆದವರು ಅರೆಸ್ಟ್ ಆದ್ರು!

ಪ್ರಧಾನಿ ಮೋದಿ ಎದುರು‌ ಅಧಿಕಾರಿಗಳ ಕಳವಳ: ರಾಜ್ಯಗಳು ಕೊಡುವ ಉಚಿತ ಗಿಫ್ಟ್ ನಿಂದ ಶ್ರೀಲಂಕಾದ ಹಾದಿಯಲ್ಲಿ ಭಾರತ!

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ