AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​

ಚಿಕ್ಕಮಗಳೂರು ಎಪಿಎಂಸಿಯಲ್ಲಿ ಬೀನ್ಸ್ ಖರೀದಿಯಲ್ಲಿ ವ್ಯಾಪಾರಿಗಳು ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ತಡರಾತ್ರಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆದಿದೆ. ಎಪಿಎಂಸಿ ಗೇಟ್​​ ಬಂದ್​​ ಮಾಡಿ ಅನ್ನದಾತರು ಆಕ್ರೋಶ ಹೊರಹಾಕಿದ್ದು, ಉಳಿದ ಮಾರುಕಟ್ಟೆಗಳಲ್ಲಿನ ಅರ್ಧ ದರಕ್ಕೂ ಇಲ್ಲಿನ ವ್ಯಾಪಾರಿಗಳು ಬೀನ್ಸ್​​ ಖರೀದಿದುತ್ತಿಲ್ಲ ಎಂದು ದೂರಿದ್ದಾರೆ. ಅಂತಿಮವಾಗಿ ಅಧಿಕಾರಿಗಳ ಭರವಸೆಯ ಬಳಿಕ ರೈತರು ಪ್ರತಿಭಟನೆ ಹಿಂಪಡೆದಿದ್ದಾರೆ.

ಬೀನ್ಸ್​​ ಖರೀದಿಯಲ್ಲಿ ಮೋಸ ಆರೋಪ: ಚಿಕ್ಕಮಗಳೂರು APMC ಗೇಟ್​​ ಲಾಕ್​​ ಮಾಡಿ ತಡರಾತ್ರಿ ರೈತರ ಪ್ರೊಟೆಸ್ಟ್​​
ರೈತರ ಪ್ರತಿಭಟನೆImage Credit source: Tv9 Kannada
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: May 24, 2026 | 7:08 AM

Share

ಚಿಕ್ಕಮಗಳೂರು, ಮೇ 24: ಎಪಿಎಂಸಿಯಲ್ಲಿ ಬೀನ್ಸ್ ವ್ಯಾಪಾರಿಗಳಿಂದ ಬೆಲೆಯಲ್ಲಿ ಮೋಸವಾಗಿದೆ ಎಂದು ಆರೋಪಿಸಿ ನೂರಾರು ರೈತರು ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಲ್ಲಿ (Chikkamagaluru) ನಡೆದಿದೆ. ಮೈಸೂರು ಮಾರುಕಟ್ಟೆಯಲ್ಲಿ ಬೀನ್ಸ್ ಬೆಲೆ ಕೆಜಿಗೆ 85 ರಿಂದ 90 ರೂಪಾಯಿ ಇದ್ದು, ಚಿಕ್ಕಮಗಳೂರಿನಲ್ಲಿ ಕೇವಲ 40 ರೂಪಾಯಿಗೆ ಖರೀದಿಸಲಾಗುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಎಪಿಎಂಸಿ ಗೇಟ್‌ ಬಂದ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

ಮುಖ್ಯಾಂಶಗಳು

  • ಬೀನ್ಸ್​​ ದರದಲ್ಲಿ ವ್ಯಾಪಾರಿಗಳಿಂದ ಮೋಸ ಆರೋಪ
  • ಚಿಕ್ಕಮಗಳೂರಲ್ಲಿ ತಡರಾತ್ರಿ ಬೀದಿಗಿಳಿದ ರೈತರು
  • APMC ಗೇಟ್​​ ಲಾಕ್​​ ಮಾಡಿ ರೈತರಿಂದ ಭಾರಿ ಆಕ್ರೋಶ

ರೈತರು ಹೇಳೋದೇನು?

ಬೀನ್ಸ್​​ಗೆ ಈ ಬಾರಿ ಉತ್ತಮ ಬೆಲೆ ಬಂದಿದೆ. ಮೈಸೂರು, ಬೆಂಗಳೂರು APMC ಮಾರುಕಟ್ಟೆಯಲ್ಲಿ 80 ರಿಂದ 90 ರೂಪಾಯಿ ಪ್ರತಿ ಕೆಜಿಗೆ ಮಾರಾಟವಾಗುತ್ತಿದೆ. ಆದರೆ ಚಿಕ್ಕಮಗಳೂರು APMC ಮಾರುಕಟ್ಟೆಯಲ್ಲಿ ಮಾತ್ರ ಇದರ ಅರ್ಧದಷ್ಟು ಬೆಲೆ ಎಂಬುದು ರೈತರ ಆರೋಪ. ಇಲ್ಲಿನ ವ್ಯಾಪಾರಿಗಳು ಕೆಜಿ ಬೀನ್ಸ್​​ನ ಕೇವಲ 40-60 ರೂಪಾಯಿಗೆ ಖರೀದಿಸುತ್ತಿದ್ದಾರೆ ಎಂಬುದು ರೈತರ ಆಕ್ರೋಶದ ಕಟ್ಟೆ ಒಡೆಯಲು ಕಾರಣವಾಗಿದೆ. ಈ ಸಂಬಂಧ ಪೊಲೀಸರ ಜೊತೆಗೆ APMC ಆವರಣದಲ್ಲಿ ಸಭೆ ನಡೆಸಲಾಗಿದೆಯಾದರೂ, ರೈತರು ಮಾತ್ರ ವರ್ತಕರು, APMC ಅಧಿಕಾರಿಗಳು ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಕಾಮಗಾರಿ ವಿಚಾರವಾಗಿ ಹೈಡ್ರಾಮ; ಆಣೆ ಪ್ರಮಾಣ ಹಂತಕ್ಕೆ ತಲುಪಿದ ಸಿ.ಟಿ ರವಿ, ತಮ್ಮಯ್ಯ ಫೈಟ್!

ರೈತರ ಆಕ್ರೋಶ ಹೆಚ್ಚುತ್ತಿದ್ದಂತೆ ಸ್ಥಳಕ್ಕೆ ಬಂದ ಚಿಕ್ಕಮಗಳೂರು ತಹಶಿಲ್ದಾರ್ ರೇಷ್ಮಾ, ಎಸಿ ನಟೇಶ್ ರೈತರ ಸಭೆ ನಡೆಸಿದ್ದಾರೆ. ಹೀಗಿದ್ದರೂ APMC ಅಧಿಕಾರಿಗಳು ಮಾತ್ರ ನಾಪತ್ತೆಯಾಗಿದ್ದು, ಸ್ವತಃ ಎಸಿಯೇ ಅವರನ್ನು ಸಂಪರ್ಕಿಸಲು ಯತ್ನಿಸಿದರೂ ಅಧಿಕಾರಿಗಳು ಮಾತಿಗೆ ಸಿಕ್ಕಿಲ್ಲ ಎನ್ನಲಾಗಿದೆ. ಮಧ್ಯರಾತ್ರಿ 12ರ ವರೆಗೆ ರೈತರು ಪ್ರತಿಭಟನೆ ನಡೆಸಿದ್ದು, ಬೀನ್ಸ್​​ ದರ ನಿಗದಿ ಸೇರಿ ಜಿಲ್ಲಾಧಿಕಾರಿಗಳ ಜೊತೆ ರೈತರ ಸಭೆ ನಡೆಸುವ ಭರವಸೆಯನ್ನು ತಹಶೀಲ್ದಾರ್​​ ಮತ್ತು ಎಸಿ ನೀಡಿದ ಬಳಿಕ ರೈತರು ಪ್ರತಿಭಟನೆ ಕೈಬಿಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್