AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು-ಹಾಸನ ಗಡಿ ಗ್ರಾಮಕ್ಕೆ ಬೀಟಮ್ಮ‌-2 ಗ್ಯಾಂಗ್ ಎಂಟ್ರಿ: ಜನರಲ್ಲಿ ಆತಂಕ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ 8 ಕಾಡಾನೆಗಳ ಬೀಟಮ್ಮ-2 ಗ್ಯಾಂಗ್ ಪ್ರವೇಶಿಸಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಶೃಂಗೇರಿ ಘಟನೆ ಬಳಿಕ ಮತ್ತೆ ಕಾಡಾನೆ ಉಪಟಳ ಹೆಚ್ಚಿದ್ದು, ಒಂಟಿ ಕಾಡಾನೆ ಭೀಮಾ ಕೂಡ ಈ ಗ್ಯಾಂಗ್ ಸೇರುವ ಆತಂಕ ಕಾಫಿ ಬೆಳೆಗಾರರನ್ನು ಚಿಂತೆಗೀಡು ಮಾಡಿದೆ. ಅರಣ್ಯ ಇಲಾಖೆ ಬೀಟಮ್ಮ ಗ್ಯಾಂಗ್ ಚಲನವಲನಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ.

ಚಿಕ್ಕಮಗಳೂರು-ಹಾಸನ ಗಡಿ ಗ್ರಾಮಕ್ಕೆ ಬೀಟಮ್ಮ‌-2 ಗ್ಯಾಂಗ್ ಎಂಟ್ರಿ: ಜನರಲ್ಲಿ ಆತಂಕ
ಬೀಟಮ್ಮ‌-2 ಗ್ಯಾಂಗ್
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Nov 10, 2025 | 7:02 PM

Share

ಚಿಕ್ಕಮಗಳೂರು, ನವೆಂಬರ್​ 10: ಜಿಲ್ಲೆಯ ಶೃಂಗೇರಿಯಲ್ಲಿ ಕಾಡಾನೆ (Wild Elephants) ದಾಳಿಗೆ ಇಬ್ಬರು ಬಲಿಯಾಗಿದ್ದರು. ಬಲಿ ಪಡೆದ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರ ಬೆನ್ನಲ್ಲೇ ಚಿಕ್ಕಮಗಳೂರು-ಹಾಸನ ಗಡಿ ಗ್ರಾಮದಲ್ಲಿ ಬೀಟಮ್ಮ‌-2 ಗ್ಯಾಂಗ್ (Beetamma-2 gang) ಎಂಟ್ರಿಯಾಗಿದೆ. 8 ಕಾಡಾನೆಗಳಿರುವ ಬೀಟಮ್ಮ ಗ್ಯಾಂಗ್ ಎಲ್ಲೆಡೆ ಆತಂಕ ಸೃಷ್ಟಿ ಮಾಡಿದೆ. ದಾಂಧಲೆ ಮಾಡುತ್ತಿರುವ ಭೀಮಾ ಕಾಡಾನೆ ಕೂಡ ಈ ಗ್ಯಾಂಗ್​​ನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಒಂಟಿಯಾಗಿರುವ ಭೀಮಾ, ಬೀಟಮ್ಮ ಗ್ಯಾಂಗ್ ಹುಡುಕಿಕೊಂಡು ಕಾಫಿನಾಡಿಗೆ ಬರುವ ಆತಂಕ ಎದುರಾಗಿದೆ.

8 ಕಾಡಾನೆಗಳ ಹಿಂಡು 

ಚಿಕ್ಕಮಗಳೂರು-ಹಾಸನ ಜಿಲ್ಲೆಯ ಗಡಿ ಗ್ರಾಮದಲ್ಲಿ ಸಂಚಾರ ಮಾಡುತ್ತಿದ್ದ 8 ಕಾಡಾನೆಗಳ ಹಿಂಡಿನ ಬೀಟಮ್ಮ-2 ಗ್ಯಾಂಗ್ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿಗೆ ಎಂಟ್ರಿ ನೀಡಿದೆ. ಮೂಡಿಗೆರೆ ತಾಲೂಕಿನ ಗೋಣಿಬೀಡು, ಜಿ.ಹೊಸಹಳ್ಳಿ, ಮಾಕೋನಹಳ್ಳಿ, ಬಾರದಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಕಳೆದ‌ ನಾಲ್ಕು ದಿನಗಳಿಂದ ಬೀಟಮ್ಮ ‌ಗ್ಯಾಂಗ್ ಬೀಡುಬಿಟ್ಟಿದೆ.

ಇದನ್ನೂ ಓದಿ: ಶೃಂಗೇರಿ ಕಿಲ್ಲರ್ ಕಾಡಾನೆ ಸೆರೆ: ಏಕಲವ್ಯ ತಂಡದಿಂದ ಕಾರ್ಯಾಚರಣೆ ಯಶಸ್ವಿ

ಹಾಸನ ಜಿಲ್ಲೆಯ ಬೇಲೂರು ಭಾಗವಾಗಿ ಬೀಟಮ್ಮ ಗ್ಯಾಂಗ್ ಬಂದಿದ್ದು, ಭೀಮಾ ಬರುವ ಆತಂಕ ಸೃಷ್ಟಿಯಾಗಿದೆ. ಹೆಚ್ಚಾಗಿ ಬೀಟಮ್ಮ-2 ಗ್ಯಾಂಗ್​ನಲ್ಲಿ ಇರುತ್ತಿದ್ದ ಭೀಮಾ ಒಂಟಿಯಾಗಿ ದಾಂಧಲೆ ನಡೆಸುತ್ತಿದ್ದು, ಬೀಟಮ್ಮ ಗ್ಯಾಂಗ್ 2 ಹುಡುಕಿಕೊಂಡು ಕಾಫಿನಾಡಿಗೆ ಬರುವ ಆತಂಕ ಸೃಷ್ಟಿಯಾಗಿದೆ.

ಕಳೆದ ವರ್ಷ ಕೂಡ ಇದೇ ತಿಂಗಳಲ್ಲಿ ಹಾಸನದಿಂದ ಬೇಲೂರು ಮಾರ್ಗವಾಗಿ ಬಂದಿದ್ದ ಬೀಟಮ್ಮ ಗ್ಯಾಂಗ್ 2 ಮತ್ತೆ ಬಂದಿದೆ. ಕಾಫಿತೋಟದಲ್ಲಿ‌ ಕಾಫಿ ಕೊಯ್ಲು ಕೂಡ ಆರಂಭವಾಗಿದೆ. ಕಾರ್ಮಿಕರು, ಬೆಳೆಗಾರರು ‌ಕಾಫಿತೋಟಕ್ಕೆ ತೆರಳಲು ಆತಂಕ ಪಡುವ ಸ್ಥಿತಿ ಎದರಾಗಿದೆ.

ಹದ್ದಿನ ಕಣ್ಣಿಟ್ಟ ಅರಣ್ಯ ಇಲಾಖೆ

ಕಳೆದ ನಾಲ್ಕು ದಿನಗಳಿಂದ ಗೋಣಿಬೀಡು ಗ್ರಾಮದ ಕಾಫಿ ತೋಟದಲ್ಲಿ ಬೀಡುಬಿಟ್ಟಿರುವ 8 ಕಾಡಾನೆಗಳ ಬೀಟಮ್ಮ ಗ್ಯಾಂಗ್, ರಾತ್ರಿ ಒಂದು ಕಡೆಯಿಂದ ಮತ್ತೊಂದು ಕಡೆ ಸಂಚಾರ ಮಾಡುತ್ತಿದೆ. ಮೂಡಿಗೆರೆ ಅರಣ್ಯ ಇಲಾಖೆಯ ಸಿಬ್ಬಂದಿ, ETF ಸಿಬ್ಬಂದಿಗಳು ಬೀಟಮ್ಮ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಕಾಡಾನೆಗಳ ದಾಂಧಲೆ: ಕಾಳಗದಲ್ಲಿ ದಂತ ಮುರಿದುಕೊಂಡ ಭೀಮಾ

ಪ್ರತಿ ವರ್ಷ ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಎಂಟ್ರಿ ನೀಡುತ್ತಿರುವ ಬೀಟಮ್ಮ ಗ್ಯಾಂಗ್ ಈ ವರ್ಷವೂ 8 ಸದಸ್ಯರ ಜೊತೆ ಎಂಟ್ರಿ ನೀಡಿದೆ. ಇನ್ನು ಭೀಮಾ ಕೂಡ ಬರುವ ಆತಂಕದಲ್ಲಿ ಕಾಫಿನಾಡಿನ ಜನರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ