ಬೈಕ್-ಟಿಪ್ಪರ್ ಡಿಕ್ಕಿ: ತಾತ-ಮೊಮ್ಮಗ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಬೈಕ್​ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್-ಟಿಪ್ಪರ್ ಡಿಕ್ಕಿ: ತಾತ-ಮೊಮ್ಮಗ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​

Updated on: May 25, 2020 | 5:04 PM

ಚಿಕ್ಕಮಗಳೂರು: ಬೈಕ್-ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾತ ಮತ್ತು ಮೊಮ್ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬೀರೂರು ಪಟ್ಟಣದಲ್ಲಿ ಘಟನೆ ನಡೆದಿದೆ.

ಬೈಕ್​ನಲ್ಲಿದ್ದ ಮಲ್ಲಪ್ಪ(57) ಮತ್ತು ಉತ್ಸವ್(12) ಮೃತ ದುರ್ದೈವಿಗಳು. ಮೃತರು ಬೀರೂರಿನ ಬಳಿಗನೂರು ಗ್ರಾಮದವರು. ಬೈಕ್ ಡಿಕ್ಕಿ ಹೊಡೆದ ಬಳಿಕ ಟಿಪ್ಪರ್ ಲಾರಿ ರಸ್ತೆ ಬದಿ ಮರಕ್ಕೆ ಅಪ್ಪಳಿಸಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:02 pm, Mon, 25 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us