AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಬಂಡಾಯ; ಜೆಡಿಎಸ್ ಮುಖಂಡೆಗಾಗಿ ಎಲ್ಲವನ್ನೂ ಮೈ ಮೇಲೆ ಎಳೆದುಕೊಂಡ್ರಾ ಶಾಸಕ?

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡೆ ಭಾರತಿ ಕಂಟಕ‌ವಾಗಿದ್ದಾರಂತೆ. ತನ್ನ ಆಪ್ತೆಯ ಮೇಲಿನ ವ್ಯಾಮೋಹದಿಂದಲೇ ಶಾಸಕರು ತಮ್ಮ ಕಾರ್ಯಕರ್ತರನ್ನು ದೂರ ಮಾಡಿದ್ದು ಈ ವಿಚಾರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರ ಬಂಡಾಯ; ಜೆಡಿಎಸ್ ಮುಖಂಡೆಗಾಗಿ ಎಲ್ಲವನ್ನೂ ಮೈ ಮೇಲೆ ಎಳೆದುಕೊಂಡ್ರಾ ಶಾಸಕ?
ಶಾಸಕ ಎಂಪಿ ಕುಮಾರಸ್ವಾಮಿ
ಆಯೇಷಾ ಬಾನು
|

Updated on:Mar 23, 2023 | 11:26 AM

Share

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಬಂಡಾಯ ಮುಂದುವರೆದಿದೆ. ನಿನ್ನೆ(ಮಾರ್ಚ್ 22) ನೂರಾರು ಕಾರ್ಯಕರ್ತರು ಸಿ.ಟಿ. ರವಿ ಮನೆಗೆ ಮುತ್ತಿಗೆ ಹಾಕಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಈ ಬಾರಿ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದರು. ಸದ್ಯ ಈ ಬಂಡಾಯದ ಕಿಚ್ಚಿನ ಹಿಂದಿನ ನಿಜವಾದ ಸತ್ಯ ಬಯಲಾಗಿದೆ. ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡೆ ಭಾರತಿ ಕಂಟಕ‌ವಾಗಿದ್ದಾರಂತೆ. ತನ್ನ ಆಪ್ತೆಯ ಮೇಲಿನ ವ್ಯಾಮೋಹದಿಂದಲೇ ಶಾಸಕರು ತಮ್ಮ ಕಾರ್ಯಕರ್ತರನ್ನು ದೂರ ಮಾಡಿದ್ದು ಈ ವಿಚಾರ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಒಂಟಿ‌ ಹೋಂ ಸ್ಟೇ, ಕೋಟಿ ಅನುದಾನ, ಕಾರ್ಯಕರ್ತರು‌ ಕೆಂಡ

ಎಂ.ಪಿ. ಕುಮಾರಸ್ವಾಮಿ ವಿರುದ್ಧ ಕಾರ್ಯಕರ್ತರು ಅಸಮಾಧಾನಗೊಳ್ಳಲು ಅಸಲಿ ಕಾರಣ ಬಹಿರಂಗವಾಗಿದೆ. ಮೂಡಿಗೆರೆ ಜೆಡಿಎಸ್ ಮುಖಂಡೆ ಭಾರತಿಗಾಗಿ ಎಂ.ಪಿ. ಕುಮಾರಸ್ವಾಮಿಯವರು ಜನರ ಕೋಟ್ಯಾಂತರ ರೂಪಾಯಿ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಕಾರ್ಯಕರ್ತರ ವಿರೋಧದ ನಡುವೆಯೂ ಸರ್ಕಾರಿ ದುಡ್ಡನ್ನ ತನ್ನ ಆಪ್ತೆಗಾಗಿ ಖರ್ಚು ಮಾಡಿದ್ದಾರೆ. ತನ್ನ ಆಪ್ತೆಯ ಹೋಂ ಸ್ಟೇ ರಸ್ತೆಗೆ ಲಕ್ಷಾಂತರ ರೂಪಾಯಿ ಅನುದಾನ ನೀಡಿದ್ದಾರೆ. ನೆರೆ ಪರಿಹಾರದ ಹಣವನ್ನು ಹೋಂ ಸ್ಟೇ ರಸ್ತೆಗಾಗಿ ಖರ್ಚು ಮಾಡಿದ್ದಾರೆ. ಹೋಂ ಸ್ಟೇಗೆ ಸಿಮೆಂಟ್ ರಸ್ತೆ, ಚರಡಿ, ವಿದ್ಯುತ್ ಪೂರೈಕೆಗಾಗಿ 80 ಲಕ್ಷ ಅನುದಾನ ನೀಡಿದ್ದಾರೆ ಎಂದು ಕಾರ್ಯಕರ್ತರು ಶಾಸಕನ ಮೇಲೆ ಅಸಮಾಧಾನಗೊಂಡಿದ್ದಾರೆ.

ಇದನ್ನೂ ಓದಿ: ಮೂಡಿಗೆರೆ ವಿಜಯಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತರ ಗಲಾಟೆ: ನಾನು ಗೆಲ್ಲಬಾರದು ಅಂತ ಹೀಗೆ ಮಾಡಿದ್ದಾರೆ- ಎಂ.ಪಿ. ಕುಮಾರಸ್ವಾಮಿ

ಉರುಬಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಚಿನ್ನಟ್ಟಿ ಗ್ರಾಮದಲ್ಲಿ ಕೇವಲ ಒಂಟಿ ಹೋಂ ಸ್ಟೇ ಮಾತ್ರ ಇದೆ. ಅಲ್ಲಿ ಯಾವುದೇ ಮನೆಗಳಿಲ್ಲ. ಆದ್ರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಆ ಹೋಂ ಸ್ಟೇಗಾಗಿ ಸರ್ಕಾರದ ಹಣವನ್ನು ಬಳಸಿಕೊಂಡಿದ್ದಾರೆ. ಮನೆಗಳೇ ಇಲ್ಲದ ಗ್ರಾಮಕ್ಕೆ ಕೋಟ್ಯಾಂತರ ರೂಪಾಯಿ ಅನುದಾನ ನೀಡಿದ್ದಾರೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದು ತಮ್ಮನ್ನೇ ನಂಬಿದ್ದ ಕಾರ್ಯಕರ್ತರನ್ನೇ ಕಡೆಗಣನೆ ಮಾಡಿದ್ದಾರೆ. ಹೀಗಾಗಿ ನಿಮ್ಮ ಆಪ್ತೆಗಾಗಿ ಯಾಕಿಷ್ಟು ಅನುದಾನ ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ನೆರೆ ಬಂದ ಗ್ರಾಮಗಳನ್ನ ಬಿಟ್ಟು ಹೋಂ ಸ್ಟೇ ರಸ್ತೆಗೆ ಅನುದಾನ ಬಿಡುಗಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಮುಖಂಡನ ಈ ಪ್ರಶ್ನೆಗೆ ಶಾಸಕ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಧ್ಯ ಮೂಡಿಗೆರೆಯಲ್ಲಿ ಅಸಮಾಧಾನದ ಜ್ವಾಲೆ ಎದ್ದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:26 am, Thu, 23 March 23

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು