AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಧ್ವಜ ಹಾರಾಟ ಬೆನ್ನಲ್ಲೇ ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಯುವಕ ಪೋಸ್ಟ್​

ಚಿಕ್ಕಮಗಳೂರಿನಲ್ಲಿ ಯುವಕನೋರ್ವ ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಹಾಕಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ​ಸಾಮಾಜಿಕ ಜಾಲತಣಾದಲ್ಲಿ ಸಾಕಷ್ಟು ವೈರಲ್​ ಆಗಿದೆ. ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.

ಚಿಕ್ಕಮಗಳೂರು: ಧ್ವಜ ಹಾರಾಟ ಬೆನ್ನಲ್ಲೇ ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಯುವಕ ಪೋಸ್ಟ್​
ಫ್ರೀ ಪ್ಯಾಲೆಸ್ತೀನ್ ಟೀ ಶರ್ಟ್​ ಧರಿಸಿ ಪೋಸ್ಟ್​
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ವಿವೇಕ ಬಿರಾದಾರ|

Updated on:Sep 20, 2024 | 9:07 AM

Share

ಚಿಕ್ಕಮಗಳೂರು, ಸೆಪ್ಟೆಂಬರ್​ 20: ಕರ್ನಾಟಕದಲ್ಲಿ ಇತ್ತೀಚಿಗೆ ಪ್ಯಾಲೆಸ್ತೀನ್ ಬಾವುಟ (Palestine Flag) ಹಾರಿಸುವುದು, ಘೋಷಣೆ ಕೂಗುವುದು ಪ್ರಕರಣ ಮೇಲಿಂದ ಮೇಲೆ ವರದಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಚಿಕ್ಕಮಗಳೂರಿನಲ್ಲಿ (Chikkamgaluru) ನಾಲ್ವರು ಅಪ್ರಾಪ್ತರು ಪ್ಯಾಲೆಸ್ತೀನ್ ಧ್ವಜ ಹಿಡಿದುಕೊಂಡು ಬೈಕ್​ನಲ್ಲಿ ಸುತ್ತಾಡಿದ್ದರು. ಇದಾದ ಬಳಿಕ ಚಿತ್ರದುರ್ಗದಲ್ಲಿ ಈದ್​ ಮಿಲಾದ್ (Eid Milad)​ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿತ್ತು. ಇದೀಗ ಮತ್ತೆ ಚಿಕ್ಕಮಗಳೂರಿನಲ್ಲಿ ಯುವಕನೋರ್ವ ಫ್ರೀ ಪ್ಯಾಲೆಸ್ತೀನ್ ಬರಹ ಮತ್ತು ಧ್ವಜವಿರುವ ಟೀ ಶರ್ಟ್ ಹಾಕಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾನೆ.

ಸದ್ಯ ಈ ಪೋಸ್ಟ್​ ಸಾಮಾಜಿಕ ಜಾಲತಣಾದಲ್ಲಿ ಸಾಕಷ್ಟು ವೈರಲ್​ ಆಗಿದೆ. ಯುವಕನ ಪೋಸ್ಟ್​ ಕಂಡ ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ಯಾಲೆಸ್ತೀನ್ ​ವಿಚಾರವಾಗಿ ಮುಸ್ಲಿಂ ಯುವಕರಿಗೆ ಯಾರೋ ಪ್ರಚೋದನೆ ನೀಡುತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಸಬೇಕೆಂದು ಹಿಂದೂ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ದೇಶಕ್ಕೆ ಬೆಂಕಿ ಹಚ್ಚುವ ಷಡ್ಯಂತ್ರ: ಸಿಟಿ ರವಿ

ಪ್ಯಾಲೆಸ್ತೀನ್​ಗೂ ಇವರಿಗೂ ಏನು ಸಂಬಂಧ? ಪ್ಯಾಲೆಸ್ತೀನ್​ ಬಗ್ಗೆ ಆಸಕ್ತಿ ತೋರಿಸುತ್ತಾರೆ ಅಂದರೆ ಇವರು ಎಲ್ಲಿದ್ದಾರೆ? ಅಪ್ರಾಪ್ತ ಹುಡುಗರ ತಲೆಕೆಡಿಸಿದ್ದು ಯಾರು? ಇದನ್ನು ಲಘುವಾಗಿ ತೆಗೆದುಕೊಳ್ಳಬಾರದು, ಇದು ದೇಶದ ಪ್ರಶ್ನೆ. ಈ ಯುವಕರ ತಲೆಕೆಡಿಸಿದ್ದು ಯಾರೆಂದು ತನಿಖೆಯಾಗಬೇಕು. ಇದು ದೇಶಕ್ಕೆ ಬೆಂಕಿ ಹಚ್ಚುವ ಷಡ್ಯಂತ್ರದ ಭಾಗವಾಗಬಾರದು ಎಂದು ಪರಿಷತ್​ನ​ ಬಿಜೆಪಿ ಸದಸ್ಯ ಸಿ.ಟಿ.ರವಿ ಹೇಳಿದರು.

ಇವರಿಗೆ ಪ್ಯಾಲೆಸ್ತೀನ್ ಧ್ವಜ, ಟೀ ಶರ್ಟ್ ಸಿಕ್ಕಿದ್ದೆಲ್ಲಿ, ತಯಾರಿಸಿದ್ದೆಲ್ಲಿ? ಇದರ ಬಗ್ಗೆ ಪೊಲೀಸರು ತನಿಖೆ ಮಾಡಬೇಕು. ರಾಜ್ಯದಾದ್ಯಂತ ವರದಿಯಾಗಿರುವ ಪ್ಯಾಲೆಸ್ತೀನ್ ಧ್ವಜ ಹಾರಾಟ ಮತ್ತು ಘೋಷಣೆ ಪ್ರಕರಣಗಳನ್ನು ಗಂಭೀರವಾಗಿ ತೆಗೆದುಕೊಂಡು, ತನಿಖೆ ನಡೆಸಬೇಕು ಎಂದು ಸಿಟಿ ರವಿ ಆಗ್ರಹಿಸಿದರು.

ಇದನ್ನೂ ಓದಿ: ಪ್ಯಾಲೆಸ್ಟೈನ್ ಧ್ವಜ ಹಿಡಿದು ಬೈಕ್​ನಲ್ಲಿ ಓಡಾಡಿದ ನಾಲ್ವರು ಅಪ್ರಾಪ್ತರು ವಶ

ಪ್ಯಾಲೆಸ್ತೀನ್ ಧ್ವಜ ಹಾರಾಟ, ಘೋಷಣೆ

ಈದ್ ಮಿಲಾದ್​ ಮೆರವಣಿಗೆ ವೇಳೆ ಕೋಲಾರದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಲಾಗಿತ್ತು. ಕೂಡಲೆ ಎಚ್ಚೆತ್ತ ಪೊಲೀಸರು ಪ್ಯಾಲೆಸ್ತೀನ್ ಧ್ವಜ ಹಾರಿಸದಂತೆ, ರಾಷ್ಟ್ರ ಧ್ವಜ ಹಾರಿಸುವಂತೆ ಮುಸ್ಲಿಂ ಮುಖಂಡರಿಗೆ ಸೂಚಿಸಿದರು. ಇನ್ನು, ಚಿತ್ರದುರ್ಗದಲ್ಲಿ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಲಾಗಿತ್ತು. ಇದಕ್ಕೂ ಮುನ್ನ ಚಿಕ್ಕಮಗಳೂರಿನಲ್ಲಿ ನಾಲ್ವರು ಅಪ್ರಾಪ್ತರು ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್​ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ ಸುತ್ತಾಡಿದ್ದರು. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ಯಾಲೆಸ್ತೀನ್ ಧ್ವಜ ಹಾರಾಟಕ್ಕೆ ಸಚಿವ ಜಮೀರ್​ ಸಮರ್ಥನೆ

ಪ್ಯಾಲೆಸ್ತೀನ್‌ ದೇಶಕ್ಕೆ ಕೇಂದ್ರ ಸರ್ಕಾರವೇ ಬೆಂಬಲ ನೀಡಿದೆ. ಹೀಗಾಗಿ ಆ ದೇಶದ ಧ್ವಜ ಹಿಡಿದರೆ ತಪ್ಪೇನೂ ಇಲ್ಲ. ನಮ್ಮ ದೇಶದಲ್ಲಿ ಬೇರೆ ದೇಶದ ಪರ ಘೋಷಣೆ ಕೂಗಬಾರದು. ಹಾಗೆ ಮಾಡಿದರೆ ದೇಶದ್ರೋಹವಾಗುತ್ತದೆ ಎಂದ ಸಚಿವ ಜಮೀರ್ ಅಹಮದ್‌ ಖಾನ್ ಸಮರ್ಥನೆ ಮಾಡಿಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:43 am, Fri, 20 September 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ