AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಸಹೋದರಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕಿದಕ್ಕೆ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ, ಎಫ್​ಐಆರ್​ ದಾಖಲು

ತನ್ನ ಸಹೋದರಿಯ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದಕ್ಕೆ ಲವ್ ಜಿಹಾದ್ ಪಿತೂರಿ ಎಂದು ಯುವತಿಯ ಅಣ್ಣ ದೂರು ದಾಖಲಿಸಿದ್ದಾರೆ.

ಚಿಕ್ಕಮಗಳೂರು: ಸಹೋದರಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕಿದಕ್ಕೆ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ, ಎಫ್​ಐಆರ್​ ದಾಖಲು
ಲವ್ ಜಿಹಾದ್ ಆರೋಪ
TV9 Web
| Edited By: ಆಯೇಷಾ ಬಾನು|

Updated on:Nov 19, 2022 | 1:33 PM

Share

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಲವ್ ಜಿಹಾದ್ ಪಿತೂರಿ ಆರೋಪ ಕೇಳಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಸಹೋದರಿಯ ಫೋಟೋ ಹಾಕಿದ ಆರೋಪಕ್ಕೆ ಸಂಬಂಧಿಸಿ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣೆಯಲ್ಲಿ ಮೊಹಮ್ಮದ್​ ರೋಫ್​ ಎಂಬುವನ ವಿರುದ್ಧ FIR ದಾಖಲಾಗಿದೆ. ಯುವತಿಯ ಅಣ್ಣನ ದೂರಿನ ಮೇರೆಗೆ ಮೊಹಮ್ಮದ್​ ರೋಫ್, ಇನ್ಸ್​ಪೆಕ್ಟರ್​ ಜಾಕೀರ್​ ಹುಸೇನ್​​ ವಿರುದ್ಧವೂ ದೂರು ದಾಖಲಾಗಿದೆ.

ತನ್ನ ಸಹೋದರಿಯ ಫೋಟೋವನ್ನು ಸೋಶಿಯಲ್ ಮೀಡಿಯಾಗೆ ಹಾಕಿದಕ್ಕೆ ಲವ್ ಜಿಹಾದ್ ಪಿತೂರಿ ಎಂದು ಯುವತಿಯ ಅಣ್ಣ ದೂರು ದಾಖಲಿಸಿದ್ದಾರೆ. ಹಾಗೂ ದೂರು ನೀಡಿದರು ಕ್ರಮ ಕೈಗೊಂಡಿಲ್ಲವೆಂದು ಸೆನ್​ ಠಾಣೆ ಇನ್ಸ್​ಪೆಕ್ಟರ್​ ಜಾಕೀರ್ ಹುಸೇನ್ ಮೇಲೆಯೂ ದೂರು ದಾಖಲಿಸಿದ್ದಾರೆ. ಹಾಗೂ ಯುವತಿಯ ಸಹೋದರ ಎಸ್ಪಿಗೂ ಲಿಖಿತ ದೂರು ನೀಡಿದ್ದಾರೆ.

ಎಐಎಂಐಎಂ ರಾಜ್ಯಾಧ್ಯಕ್ಷರ ವಿರುದ್ಧ ಹಲ್ಲೆ ಆರೋಪ

ಹಜರತ್ ಸೈಯದ್ ಮುರ್ತುಜಾ ಖಾದ್ರಿ ದರ್ಗಾ ಕಮಿಟಿ ಹಣದ ಅವ್ಯವಹಾರದ ಬಗ್ಗೆ ಪ್ರಶ್ನಿಸಿದಕ್ಕೆ ಎಐಎಂಐಎಂ ರಾಜ್ಯಾಧ್ಯಕ್ಷರ ಉಸ್ಮಾನ್​​​ ಗಣಿ ಹಾಗೂ ಮಕ್ಕಳು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಾಗಲಕೋಟೆ ಜಿಲ್ಲೆ ಇಳಗಲ್​ ನಗರದಲ್ಲಿ ಘಟನೆ ನಡೆದಿದೆ. ರಫಿಕ್​​ ನದಾಫ್​, ಶಾಮಿದ್​​​​ ರಷ್ಮಿ, ಜಬೇರ್​​ ಮೇಲೆ ಹಲ್ಲೆ ನಡೆದಿದೆ.

ದರ್ಗಾ ಕಮಿಟಿ ಹಣದ ಅವ್ಯವಹಾರದ ಬಗ್ಗೆ ಪ್ರಶ್ನಿಸಿದ್ದಕ್ಕೆ ಇಳಗಲ್​ ನಗರದ ಅಂಜುಮನ್​ ಕಾಂಪ್ಲೆಕ್ಸ್ ಬಳಿ ಉಸ್ಮಾನ್​​​ ಗಣಿ ಮತ್ತು ಆತನ ಮಕ್ಕಳಾದ ಆದಿಲ್​, ಫೈಸಲ್​​​​​​, ಸೋಹಿಲ್​​​, ಶೋಹಿಬ್​, ಶಬಾಜ್​​​​​, ಸ್ನೇಹಿತ ಶೊಯಿಬ್​​ ಸೇರಿ ರಫಿಕ್​​ ನದಾಫ್​, ಶಾಮಿದ್​​​​ ರಷ್ಮಿ, ಜಬೇರ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಿಂದೆ ದರ್ಗಾ ಕಮಿಟಿ ಅಧ್ಯಕ್ಷರಾಗಿದ್ದ ಉಸ್ಮಾನ್​​​ ಗಣಿ ಅಧ್ಯಕ್ಷರಾಗಿದ್ದಾಗ ಕಮಿಟಿ ಹಣ ದುರ್ಬಳಕೆ ಮಾಡಿದ್ದರಂತೆ. ಈ ಸಂಬಂಧ ಪ್ರಶ್ನಿಸಿದಕ್ಕೆ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮೂವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 1:17 pm, Sat, 19 November 22

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ