AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ.8ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ; ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ.

ಅ.8ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಭೇಟಿ; ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ
ರಾಷ್ಟ್ರಪತಿ ರಾಮನಾಥ್ ಕೋವಿಂದ್​
Follow us
TV9 Web
| Updated By: sandhya thejappa

Updated on: Oct 07, 2021 | 8:54 AM

ಚಿಕ್ಕಮಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ನಾಳೆ (ಅಕ್ಟೋಬರ್ 8) ಶೃಂಗೇರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಇಂದು (ಅ.7) ಮತ್ತು ನಾಳೆ (ಅ.8) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣ ಬಂದ್ ಮಾಡಲಾಗಿದೆ. ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತದ ಆದೇಶ ಹೊರಡಿಸಿದೆ. ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ಸೂಚಿಸಿದೆ. ಚಿಕ್ಕಮಗಳೂರು ಜಿಲ್ಲಾಡಳಿತದ ನಡೆಗೆ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಎರಡು ದಿನದ ನಷ್ಟವನ್ನು ಭರಿಸುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸುತ್ತಿದ್ದಾರೆ. ಜೊತೆಗೆ ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಅಂತ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶೃಂಗೇರಿಗೆ ಆಗಮಿಸುತ್ತಿರುವ ಹಿನ್ನೆಲೆ ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಿದೆ. ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲು ಜಿಲ್ಲಾಡಳಿತ ಸೂಚಿಸಿದೆ. ಹೀಗಾಗಿ ಜಿಲ್ಲಾಡಳಿತ ವಿರುದ್ಧ ವ್ಯಾಪಾರಸ್ಥರು ಗರಂ ಆಗಿದ್ದಾರೆ. ಕೊರೊನಾ ಹಿನ್ನೆಲೆ ಈಗಾಗಲೇ ವ್ಯಾಪಾರಸ್ಥರು ನಷ್ಟ ಅನುಭವಿಸುತ್ತಿದ್ದಾರೆ. ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾಡಳಿತದ ಈ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಎರಡು ದಿನದ ನಷ್ಟವನ್ನು ಭರಿಸುವಂತೆ ಆಗ್ರಹಿಸಿದ್ದಾರೆ.

ಚಾಮರಾಜನಗರಕ್ಕೆ ರಾಷ್ಟ್ರಪತಿ ಭೇಟಿ ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾರೆ. ರಾಷ್ಟ್ರಪತಿ ಭೇಟಿ ಹಿನ್ನೆಲೆ ಸಿಎಂ ಬೊಮ್ಮಾಯಿ ಕೂಡ ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ. ರಾಷ್ಟ್ರಪತಿಗಳು ಬೆಳಗ್ಗೆ 10 ಗಂಟೆಗೆ ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ

Dasara 2021 Inauguration: ಮೈಸೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ

Karnataka Dams Water Level: ಮಳೆಯಿಂದ ತುಂಗಭದ್ರಾ, ಆಲಮಟ್ಟಿ, ಘಟಪ್ರಭಾ ಡ್ಯಾಂ ಭರ್ತಿ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್