ಚೈತ್ರಾ ಕುಂದಾಪುರ ಡೀಲ್ ವಿಷಯ ಸಿಟಿ ರವಿಗೆ ಮೊದಲೇ ಗೊತ್ತಿತ್ತಾ? ಸೂಲಿಬೆಲೆ ಜೊತೆ ನಡೆದಿತ್ತಾ ಮಾತುಕತೆ?

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೆಸರಿನ ಬೆನ್ನಲ್ಲೇ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೆಸರು ಕೇಳಿಬಂದಿದೆ. ಆದರೆ, ವಂಚನೆ ವಿಚಾರ ತಿಳಿದ ಸುಲಿಬೆಲೆ ಅವರು ಚುನಾವಣೆ ನಂತರ ಅದನ್ನು ಸಿಟಿ ರವಿ ಗಮನಕ್ಕೆ ತಂದಿದ್ದರು. ಈ ವೇಳೆ ಸಿಟಿ ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಇದ್ದರು.

ಚೈತ್ರಾ ಕುಂದಾಪುರ ಡೀಲ್ ವಿಷಯ ಸಿಟಿ ರವಿಗೆ ಮೊದಲೇ ಗೊತ್ತಿತ್ತಾ? ಸೂಲಿಬೆಲೆ ಜೊತೆ ನಡೆದಿತ್ತಾ ಮಾತುಕತೆ?
ಸಿಟಿ ರವಿ ಮತ್ತು ಚಕ್ರವರ್ತಿ ಸೂಲಿಬೆಲೆ
Follow us
| Updated By: Rakesh Nayak Manchi

Updated on:Sep 18, 2023 | 2:58 PM

ಚಿಕ್ಕಮಗಳೂರು, ಸೆ.18: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ (Chaitra Kundapur) ಮತ್ತು ಗ್ಯಾಂಗ್ ವಂಚನೆ ಎಸಗಿದ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೆಸರಿನ ಬೆನ್ನಲ್ಲೇ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಹೆಸರು ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೆಸರು ಕೇಳಿಬಂದಿದೆ. ಆದರೆ, ವಂಚನೆ ವಿಚಾರ ತಿಳಿದ ಸುಲಿಬೆಲೆ ಅವರು ಚುನಾವಣೆ ನಂತರ ಅದನ್ನು ಸಿಟಿ ರವಿ ಗಮನಕ್ಕೆ ತಂದಿದ್ದರು. ಇದನ್ನು ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಹೇಳುವಂತೆ ಸಿಟಿ ರವಿ ಚಕ್ರವರ್ತಿ ಅವರಿಗೆ ತಿಳಿಸಿದ್ದಾಗಿ ತಿಳಿದುಬಂದಿದೆ. ಸಿಟಿ ರವಿ (CT Ravi) ಅವರು ಆಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಇದ್ದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ ರವಿ, ಚುನಾವಣೆ ಮುಗಿದ ಮೇಲೆ ಪೋನ್​ನಲ್ಲಿ ಮಾತನಾಡಿದ್ದರು. ಹಣ ಕೊಡುವುದು ನಿಮಗೆ ಗೊತ್ತಿತ್ತಾ ಎಂದು ಚರ್ಕವರ್ತಿ ಅವರನ್ನು ಕೇಳಿದಾಗ ಗೊತ್ತಿಲ್ಲ ಅಂತ ಹೇಳಿದ್ದರು. ಹೀಗಾಗಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಚಕ್ರವರ್ತಿ ಸೂಲಿಬೆಲೆಯವರಿಗೆ ಹೇಳಿದ್ದಾಗಿ ತಿಳಿಸಿದರು.

ಇದನ್ನೂ ಓದಿ: ಗೋವಿಂದ ಬಾಬು ಪೂಜಾರಿ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆದಿದ್ದ ಚೈತ್ರಾ ಕುಂದಾಪುರ

ಹಣಕ್ಕಾಗಿ ಟಿಕೆಟ್ ಕೊಡುತ್ತಾರೆ ಅಂತಾ ಭಾವಿಸಿದ್ದು ತಪ್ಪು. ಒಂದನ್ನ ಮುಚ್ಚಿಟ್ಟರೆ ನಾಳೆ ಸ್ವಭಾವವಾಗಿ ಬೆಳೆಯಬಹುದು. ಮೋಸ ಹೋಗುವವರಿಗೂ ಪಾಠ ಅಗಬೇಕು. ಮೋಸ ಮಾಡುವವರಿಗೂ ಪಾಠ ಅಗಬೇಕು ಎಂದರು.

ಗಗನ್ ಕಡೂರು ಯಾವುದೇ ದೂರು ನೀಡಿಲ್ಲ

ಉದ್ಯಮಿ ಗೋವಿಂದಬಾಬು ವಿರುದ್ಧ ಗಗನ್​ ಕಡೂರು ದೂರು ವಿಚಾರವಾಗಿ ಸ್ಪಷ್ಟನೆ ನೀಡಿದ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ, ಪೊಲೀಸರಿಗೆ ಗಗನ್ ಕಡೂರು ಯಾವುದೇ ದೂರು ನೀಡಿಲ್ಲ ಎಂದರು. ಟಿವಿ9 ಜೊತೆ ಮಾತನಾಡಿದ ಅವರು, ಇಲ್ಲಿಯವರೆಗೆ ಯಾವುದೇ ದೂರು ಬಂದಿಲ್ಲ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:51 pm, Mon, 18 September 23

20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್