AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ; ಆಕೆ ಓಡಾಡಿದ ಜಾಗವನ್ನ ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

2022, ಅಕ್ಟೋಬರ್ 4 ರಂದು ಹಿಂದೂ ಸಂಗಮ ಕಾರ್ಯಕ್ರಮ ನಡೆಸಲಾಗಿತ್ತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಗಾರ್ತಿಯಾಗಿ ಚೈತ್ರ ಕುಂದಾಪುರ ಆಗಮಿಸಿದ್ದರು. ಈ ವೇಳೆ ಎರಡು ಕೋಮುಗಳ ನಡುವೆ ಗಲಾಟೆಯಾಗುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅಂದೇ ಗ್ರಾಮಸ್ಥರು ಚೈತ್ರಾ ಭಾಷಣವನ್ನು ವಿರೋಧಿಸಿ ದೇವರಿಗೆ ಪ್ರಾರ್ಥನೆ ಮಾಡಿದ್ದರು.

ಚಿಕ್ಕಮಗಳೂರು: ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ; ಆಕೆ ಓಡಾಡಿದ ಜಾಗವನ್ನ ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 17, 2023 | 4:15 PM

Share

ಚಿಕ್ಕಮಗಳೂರು, ಸೆ.17: ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ ಬಿಳುತ್ತಿದ್ದಂತೆ ಚಿಕ್ಕಮಗಳೂರು (Chikkamagalur) ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಜನರ ಸಂಭ್ರಮ ಮುಗಿಲು ಮುಟ್ಟಿತ್ತು. ಚೈತ್ರಾ ಓಡಾಡಿದ ಜಾಗವನ್ನು ಗ್ರಾಮಸ್ಥರು ಸೇರಿ ತೀರ್ಥ ಹಾಕಿ ಶುದ್ಧ ಮಾಡಿದ ಘಟನೆ ಕೂಡ ನಡೆದಿದೆ. ಹೌದು, ಕಳೆದ ವರ್ಷ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚೈತ್ರಾ ಕುಂದಾಪುರ(Chaitra Kundapura) ಅವರು ಚಿಕ್ಕ ವಿಷಯವನ್ನ ದೊಡ್ಡದು ಮಾಡಿ ಭಾಷಣ ಮಾಡುವ ಮೂಲಕ ಗ್ರಾಮದಲ್ಲಿ ಎರಡು ಬಣಗಳ ನಡುವೆ ಗಲಾಟೆ ತಂದಿಟ್ಟಿದ್ದರಂತೆ. ಹೀಗಾಗಿ ಗ್ರಾಮ ದೇವರಿಗೆ ಚೈತ್ರಾ ವಿರುದ್ಧ ಪ್ರಾರ್ಥನೆ ಮಾಡಿ, ಒಂದು ವರ್ಷದೊಳಗೆ ಶಿಕ್ಷೆ ನೋಡುವಂತೆ ಗ್ರಾಮಸ್ಥರು ಪ್ರಾರ್ಥನೆ ಮಾಡಿದ್ದರು.

ಭಗವದ್ವಜ ವಿಚಾರವಾಗಿ ಗ್ರಾಮದಲ್ಲಿ ನಡೆದಿದ್ದ ಗಲಾಟೆ

ಹೌದು, 2022, ಅಕ್ಟೋಬರ್ 4 ರಂದು ಹಿಂದೂ ಸಂಗಮ ಕಾರ್ಯಕ್ರಮ ನಡೆಸಲಾಗಿತ್ತು. ಕಾರ್ಯಕ್ರಮದ ದಿಕ್ಸೂಚಿ ಭಾಷಣಗಾರ್ತಿಯಾಗಿ ಚೈತ್ರ ಕುಂದಾಪುರ ಆಗಮಿಸಿದ್ದರು. ಈ ವೇಳೆ ಎರಡು ಕೋಮುಗಳ ನಡುವೆ ಗಲಾಟೆಯಾಗುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದರು. ಅಂದೇ ಗ್ರಾಮಸ್ಥರು ಚೈತ್ರಾ ಭಾಷಣವನ್ನು ವಿರೋಧಿಸಿ ದೇವರಿಗೆ ಪ್ರಾರ್ಥನೆ ಮಾಡಿದ್ದರು. ಇದೀಗ ಚೈತ್ರಾ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಲೆಗೆ ಬಿಳುತ್ತಿದ್ದಂತೆ ದೇವರಿಗೆ ವಿಶೇಷ ಪೂಜೆ ನಡೆಸಿದ ಗ್ರಾಮಸ್ಥರು, ಹರಕೆ ತಿರಿಸಿದ್ದಾರೆ.

ಇದನ್ನೂ ಓದಿ:ಚೈತ್ರಾ ಕುಂದಾಪುರ ವಂಚನೆ ಕೇಸ್: ಉದ್ಯಮಿಗೆ ನಂಬಿಸಲು ಸಾಲುಮರದ ತಿಮ್ಮಕ್ಕನ ಸರ್ಕಾರಿ ಕಾರು ದುರ್ಬಳಕೆ

ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿದ ಚೈತ್ರಾ ಕುಂದಾಪುರ

ಇನ್ನು ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಂದ ಐದುವರೆ ಕೋಟಿ ಚೈತ್ರಾ ಕುಂದಾಪುರ ಪಡೆದಿದ್ದಳು. ಇನ್ನೊಂದುವರೆ ಕೋಟಿಗೆ ಹೊಂಚು ಹಾಕಿದ್ದ ಸ್ವಯಂ ಘೋಷಿತ ಹಿಂದೂ ಹೆಣ್ಣು ಹುಲಿ ಖ್ಯಾತಿಯ ಚೈತ್ರಾ ಕುಂದಾಪುರ ಅರೆಸ್ಟ್ ಆಗಿದ್ದಾಳೆ. ಇದಾದ ಮೇಲೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರಿಗೆ ಮತ್ತಷ್ಟು ಆರೋಪಿಗಳು ಬಂಧಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚೈತ್ರಾ ಮತ್ತು ಗ್ಯಾಂಗ್​ ಮಾಡಿದ್ದ ಖತರ್ನಾಕ್​ ಪ್ಲ್ಯಾನ್​ ಹೊರಬಿದ್ದಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು