AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ 20 ಸೆಂಟ್​ ಜಾಗದಲ್ಲಿ ಅಂಬೇಡ್ಕರ್​ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಆತ್ಮಹತ್ಯೆ

ಆ ಕುಟುಂಬ ಇದ್ದ ತುಂಡು ಭೂಮಿಯನ್ನ ನಂಬಿ ಜೀವನ ನಡೆಸುತ್ತಿತ್ತು. ಆದರೆ, ಅದೇ ಜಮೀನಿನಲ್ಲಿ ಈಗ ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನ ನಿರ್ಮಿಸಲು ಮುಂದಾಗಿದೆ. ತನ್ನ ಜಮೀನಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಶನಿವಾರ ನೇಣಿಗೆ ಶರಣಾಗಿದ್ದಾರೆ. ಈ ಕುರಿತಾದ ಒಂದು ವರದಿ ಇಲ್ಲಿದೆ.

ತನ್ನ 20 ಸೆಂಟ್​ ಜಾಗದಲ್ಲಿ ಅಂಬೇಡ್ಕರ್​ ಭವನ ನಿರ್ಮಾಣಕ್ಕೆ ವಿರೋಧಿಸಿ ಮಹಿಳೆ ಆತ್ಮಹತ್ಯೆ
ಮೃತ ರಾಜಮ್ಮ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 16, 2025 | 10:52 PM

Share

ಚಾಮರಾಜನಗರ, ಆಗಸ್ಟ್​ 16: ಚಾಮರಾಜನಗರ (Chamrajanagar) ಜಿಲ್ಲೆಯ ಹನೂರು (Hanuru) ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದಲ್ಲಿ ರಾಜಮ್ಮ ಎಂಬುವವರ ಜಮೀನಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾಗಿದೆ. ಇದರಿಂದ ಬೇಸತ್ತ ರಾಜಮ್ಮ ಅವರು ನುಗ್ಗೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೊಡ್ಡ ಆಲತ್ತೂರು ಗ್ರಾಮದಲ್ಲಿ ರಾಜಮ್ಮ ಅವರದ್ದು 90 ಸೆಂಟ್ ಜಾಗವಿದೆ. ಈ ಜಾಗದಲ್ಲಿ ರಾಜಮ್ಮ ಅವರು ಉಳಿಮೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ, ಇದರಲ್ಲಿ 20 ಸೆಂಟ್ ಜಾಗ ಸರ್ಕಾರದ್ದು ಎಂದು ಹೇಳಿದ ಅಧಿಕಾರಿಗಳು ಏಕಾಏಕಿ ಬಂದು ಜಾಗ ಅಳತೆ ಮಾಡಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾದರು.

ರಾಜಮ್ಮನ ಕುಟುಂಬಸ್ಥರು ಎಷ್ಟೇ ಪರಿ ಪರಿಯಾಗಿ ಬೇಡಿಕೊಂಡರು ಕರುಣೆ ತೋರದೆ ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮುಂದಾದ ಪರಿಣಾಮ ಈಗ ರಾಜಮ್ಮ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಮೃತರ ಕುಟುಂಬಸ್ಥರ ಆರೋಪ ಮಾಡಿದ್ದಾರೆ. ಅಧಿಕಾರಿಗಳೇ ಈ ಸಾವಿಗೆ ನೇರವಾದ ಹೊಣೆಯೆಂದು ಆರೋಪಿಸಿದರು.

ಇದನ್ನೂ ಓದಿ: ಉದ್ಯಮಿಯಿಂದ 3.70 ಲಕ್ಷ ರೂ. ಕಿತ್ತುಕೊಂಡು ಪರಾರಿಯಾದ ಪೊಲೀಸ್​ ಆ್ಯಂಡ್​ ಟೀಂ

ಶಾಸಕ ಎಂ ಆರ್ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಮೃತನ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ ಬಳಿಕ ಕುಟುಂಬಸ್ಥರು ಮೃತ ರಾಜಮ್ಮ ಅವರ ಅಂತ್ಯಕ್ರಿಯೆ ನೆರವೇರಿಸಿದರು. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನಾದಾರಕ್ಕೆ ಇದ್ದ ತುಂಡು ಭೂಮಿಯನ್ನ ಕಿತ್ತು ಕೊಳ್ಳಲು ಯತ್ನಿಸಿದ ಅಧಿಕಾರಿಗಳ ಈ ವರ್ತನೆಯಿಂದು ಒಂದು ಜೀವ ಬಲಿಯಾಗಿದ್ದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 pm, Sat, 16 August 25

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್