AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ ರೈಟ್​ ರೈಟ್​

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ […]

ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ  ರೈಟ್​ ರೈಟ್​
ಸಾಧು ಶ್ರೀನಾಥ್​
|

Updated on: Nov 29, 2019 | 12:36 PM

Share

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು.

ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಮಾತ್ರ ಲಘು ವಾಹನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಬರೋಬ್ಬರಿ ಮೂರುವರೆ ತಿಂಗಳುಗಳ ಬಳಿಕ ಲಘು ವಾಹನಗಳಿಗೆ ರಸ್ತೆ ಸಂಚಾರವನ್ನ ಸಂಪೂರ್ಣ ಮುಕ್ತಗೊಳಿಸಲಾಗಿದೆ.

ರಸ್ತೆ ಸಂಚಾರ ಬಂದ್ ಆಗಿದ್ದರಿಂದ ಜನಸಾಮಾನ್ಯರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಸದ್ಯ ಲಘುವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್​ ಸಿಕ್ಕಿರೋದ್ರಿಂದ ಪ್ರಯಾಣಿಕರು, ವಾಹನ ಸವಾರರು ಸೇರಿದಂತೆ ಈ ಭಾಗದ ವ್ಯಾಪಾರಸ್ಥರು ಫುಲ್ ಖುಷ್ ಆಗಿದ್ದಾರೆ. ಆದ್ರೆ ತಕ್ಕಮಟ್ಟಿನ ದುರಸ್ತಿ ಕೆಲಸ ಮುಗಿದಿದ್ರೂ ಕೂಡ ರಸ್ತೆ ಕೊಚ್ಚಿ ಹೋಗಿರೋ ಬಹುತೇಕ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆದಿಲ್ಲ, ಇದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ