ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ ರೈಟ್​ ರೈಟ್​

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ […]

ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಶುರು, ಲಘುವಾಹನಗಳಿಗೆ  ರೈಟ್​ ರೈಟ್​
ಸಾಧು ಶ್ರೀನಾಥ್​

Updated on: Nov 29, 2019 | 12:36 PM

ಚಿಕ್ಕಮಗಳೂರು: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರುಗಳನ್ನ ಸಂಪರ್ಕಿಸುವ ಪ್ರಮುಖ ಕೊಂಡಿ ಅಂದ್ರೆ ಚಾರ್ಮಡಿ ಘಾಟ್‌. ಆದ್ರೆ ಈ ಬಾರಿ ಸುರಿದ ರಣಭೀಕರ ಮಳೆಗೆ ಶತ ಶತಮಾನಗಳಿಂದಲೂ ಗಟ್ಟಿಮುಟ್ಟಾಗಿದ್ದ ಇಲ್ಲಿನ ರಸ್ತೆ ಅಲ್ಲೋಲ ಕಲ್ಲೋಲ ಆಗಿತ್ತು. ಚಾರ್ಮಾಡಿ ಘಾಟ್ ರಸ್ತೆಯ ಹಲವೆಡೆ ಗುಡ್ಡಗಳು ಕುಸಿದಿತ್ತು. ಅನೇಕ ಕಡೆ ರಸ್ತೆಯ ಅರ್ಧಭಾಗವೇ ಕೊಚ್ಚಿ ಹೋಗಿತ್ತು.

ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಮೊದಲ ಒಂದು ತಿಂಗಳು ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿತ್ತು. ಆ ಬಳಿಕ ಬೆಳಗ್ಗೆ 6ರಿಂದ ಸಂಜೆ 6ವರೆಗೆ ಮಾತ್ರ ಲಘು ವಾಹನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದೀಗ ಬರೋಬ್ಬರಿ ಮೂರುವರೆ ತಿಂಗಳುಗಳ ಬಳಿಕ ಲಘು ವಾಹನಗಳಿಗೆ ರಸ್ತೆ ಸಂಚಾರವನ್ನ ಸಂಪೂರ್ಣ ಮುಕ್ತಗೊಳಿಸಲಾಗಿದೆ.

ರಸ್ತೆ ಸಂಚಾರ ಬಂದ್ ಆಗಿದ್ದರಿಂದ ಜನಸಾಮಾನ್ಯರು ಪಟ್ಟ ಕಷ್ಟ ಅಷ್ಟಿಷ್ಟಲ್ಲ. ಸದ್ಯ ಲಘುವಾಹನಗಳ ಓಡಾಟಕ್ಕೆ ಗ್ರೀನ್ ಸಿಗ್ನಲ್​ ಸಿಕ್ಕಿರೋದ್ರಿಂದ ಪ್ರಯಾಣಿಕರು, ವಾಹನ ಸವಾರರು ಸೇರಿದಂತೆ ಈ ಭಾಗದ ವ್ಯಾಪಾರಸ್ಥರು ಫುಲ್ ಖುಷ್ ಆಗಿದ್ದಾರೆ. ಆದ್ರೆ ತಕ್ಕಮಟ್ಟಿನ ದುರಸ್ತಿ ಕೆಲಸ ಮುಗಿದಿದ್ರೂ ಕೂಡ ರಸ್ತೆ ಕೊಚ್ಚಿ ಹೋಗಿರೋ ಬಹುತೇಕ ಕಡೆಗಳಲ್ಲಿ ಶಾಶ್ವತ ಕಾಮಗಾರಿ ನಡೆದಿಲ್ಲ, ಇದು ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ.

 

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us