AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ: ವ್ಯವಸ್ಥಾಪನ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಕಾಫಿನಾಡಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ವ್ಯವಸ್ಥಾಪನ ಸಮಿತಿಯನ್ನು ಕೂಡಲೇ ವಜಾ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ.

ದತ್ತಪೀಠ ವಿವಾದ ಮತ್ತೆ ಮುನ್ನೆಲೆಗೆ: ವ್ಯವಸ್ಥಾಪನ ಸಮಿತಿ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
ದತ್ತಪೀಠ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ವಿವೇಕ ಬಿರಾದಾರ|

Updated on:Aug 20, 2023 | 10:52 AM

Share

ಚಿಕ್ಕಮಗಳೂರು (ಆ.20): ಕಾಫಿನಾಡಿನ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠ (Dattapeeth) ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನೇಮಕವಾಗಿದ್ದ ವ್ಯವಸ್ಥಾಪನ ಸಮಿತಿಯನ್ನು ಕೂಡಲೇ ವಜಾ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೈಯದ್ ಬುಡೇನ್ ಶಾ ಖಾದ್ರಿ ಟ್ರಸ್ಟ್​​​ನ ಸದಸ್ಯರು ಮನವಿ ಸಲ್ಲಿಸಿದ್ದಾರೆ. ಹೈಕೋರ್ಟ್​ನ (High Court) ಆದೇಶದಂತೆ ಹಿಂದಿನ ಸರ್ಕಾರ ಸಮಿತಿ ರಚನೆ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಸಮಿತಿ ವಜಾ ಮಾಡುವಂತೆ ಮನವಿ ಸಲ್ಲಿಸಲಾಗಿದೆ.

8 ಜನ ಸದಸ್ಯರನ್ನು ಒಳಗೊಂಡಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾ ಸಂಬಂಧ ನೇಮಿಸಿರುವ ವ್ಯವಸ್ಥಾಪನ ಸಮಿತಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿರುವ ಆರೋಪ ಕೇಳಿಬಂದಿದೆ. ಸಮಿತಿ ಒಂದು ಸಮುದಾಯದ ಪರವಾಗಿ ಕೆಲಸ ಮಾಡುತ್ತಿದೆ. ದತ್ತಜಯಂತಿಗೆ ಮಾತ್ರ ನೇಮಕವಾಗಿದ್ದ ಹಿಂದೂ ಆರ್ಚಕರಿಂದ ಇಂದಿಗೂ ಪೂಜೆ ನಡೆಯುತ್ತಿದೆ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂದು ಆರೋಪ ಕೇಳಿಬಂದಿದೆ.

ಇನ್ನೂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಎಸ್​ಡಿಪಿಐ ಮುಖಂಡರು ಭೇಟಿ ನೀಡಿದ್ದಾರೆ. ಕಳೆದ ವಾರ ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದ ತಂಡ ಭೇಟಿ ನೀಡಿತ್ತು. ಬಳಿಕ ಇಲ್ಲಿಯ ವ್ಯವಸ್ಥಾಪನ ಸಮಿತಿಯನ್ನು ವಿರೋಧಿಸಿ ಸರ್ಕಾರಕ್ಕೆ ಮನವಿ ಮಾಡಿತ್ತು.

ಏನಿದು ವ್ಯವಸ್ಥಾಪನ ಸಮಿತಿ

2018ರಲ್ಲಿ ಅಂದಿನ ರಾಜ್ಯ ಸರ್ಕಾರ ದತ್ತಪೀಠದಲ್ಲಿ ಪೂಜಾ ವಿಧಿ-ವಿಧಾನ ನೆರವೇರಿಸಲು ಮುಸ್ಲಿಂ ಸಮುದಾಯದ ಸೈಯದ್‌ ಗೌಸ್‌ ಮೊಹಿಯುದ್ದೀನ್‌ ಶಾ ಖಾದ್ರಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ನಂತರ ಇದನ್ನು ಏಕ ಸದಸ್ಯ ನ್ಯಾಯಪೀಠ ರದ್ದುಪಡಿಸಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ; ಮೂವರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್​ ಕೇಸ್

ಏಕಸದಸ್ಯ ನ್ಯಾಯಪೀಠ 2021ರ ಸೆ.28ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸೈಯದ್‌ ಗೌಸ್‌ ಮೊಹಿಯುದ್ದೀನ್‌ ಶಾ ಖಾದ್ರಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿ ವಿಚಾರಣೆ ನಡೆಸಿದ್ದ ವಿಭಾಗೀಯ ಪೀಠ 8 ಜನ ಸದಸ್ಯರನ್ನು ಒಳಗೊಂಡಿರುವ ಸಮಿತಿ ರಚಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು.

ಅದರಂತೆ ಸರ್ಕಾರ ಹಿಂದೂ ಹಾಗೂ ಮುಸ್ಲಿಂ ಎರಡೂ ಧರ್ಮಗಳ ಸಂಪ್ರದಾಯಗಳ ಪ್ರಕಾರ ಪೂಜೆ ನೆರವೇರಿಸಲು ಮುಜಾವರ್‌ ಮತ್ತು ಅರ್ಚಕರನ್ನು ನೇಮಿಸಿ 2022ರ ಜು.19ರಂದು ಆದೇಶ ಹೊರಡಿಸಿತ್ತು. ಈ ಪೂಜಾ ಕೈಂಕರ್ಯಗಳ ಮೇಲೆ ನಿಗಾ ಇಡಲು ಎಲ್ಲ ಧರ್ಮದವರನ್ನು ಒಳಗೊಂಡ 8 ಮಂದಿ ಸದಸ್ಯರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Sun, 20 August 23

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ