AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ವಕೀಲರು,​ ಪೊಲೀಸರ‌ ನಡುವೆ ಗಲಾಟೆ ಪ್ರಕರಣ; ಡಿ.6 ರಿಂದ ಸಿಐಡಿ ತನಿಖೆ ಶುರು

ಹೆಲ್ಮಟ್ ವಿಚಾರಕ್ಕೆ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ವಕೀಲ ಪ್ರೀತಮ್ ಎಂಬುವವರ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಹೈಕೋರ್ಟ್​ ಈ ಘಟನೆಯ ಸಂಪೂರ್ಣ ವಿವರವನ್ನು ನೀಡುವಂತೆ ಸಿಐಡಿಗೆ ವಹಿಸಿತ್ತು. ಅದರಂತೆ ನಾಳೆ(ಡಿ.06) ತನಿಖೆ ಶುರುವಾಗಲಿದ್ದು, ಇಂದು ಸಿಐಡಿ ಅಧಿಕಾರಿಗಳು ಚಿಕ್ಕಮಗಳೂರಿಗೆ ಆಗಮಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ವಕೀಲರು,​ ಪೊಲೀಸರ‌ ನಡುವೆ ಗಲಾಟೆ ಪ್ರಕರಣ; ಡಿ.6 ರಿಂದ ಸಿಐಡಿ ತನಿಖೆ ಶುರು
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Dec 05, 2023 | 7:55 PM

Share

ಚಿಕ್ಕಮಗಳೂರು, ಡಿ.05: ವಕೀಲರು ಹಾಗೂ ಪೊಲೀಸರ‌ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ(ಡಿ.06)ಯಿಂದ ಸಿಐಡಿ ಎಸ್​ಪಿ ವೆಂಕಟೇಶ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯಲಿದೆ. ಘಟನೆ ಕುರಿತು ಹೈಕೋರ್ಟ್(High Court) ಡಿ.12ರಂದು ಸಂಪೂರ್ಣ ವರದಿ ಸಲ್ಲಿಸುವಂತೆ ಸಿಐಡಿ ಡಿಜಿಗೆ ಸೂಚಿಸಿತ್ತು. ಈ ಹಿನ್ನಲೆ ಚಿಕ್ಕಮಗಳೂರಿಗೆ ಸಿಐಡಿ (CID) ಅಧಿಕಾರಿಗಳ ತನಿಖಾ ತಂಡ ಆಗಮಿಸಿದೆ. ವಕೀಲ ಪ್ರೀತಮ್ ಮೇಲೆ ಚಿಕ್ಕಮಗಳೂರು ಠಾಣೆ ಪೊಲೀಸರಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಇಲಾಖೆ ಹಾಗೂ ವಕೀಲರ ವಿರುದ್ಧ ಧರಣಿ ಕುರಿತು ತನಿಖೆ ನಡೆಸಲಿದೆ.

ಘಟನೆ ವಿವರ

ಹೆಲ್ಮಟ್ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ನ.30 ರಂದು ವಕೀಲ ಪ್ರೀತಮ್ ಎಂಬುವವರ ಮೇಲೆ ಪಿಎಸ್​ಐ, ಒಬ್ಬ ಎಎಸ್​ಐ, ಒಬ್ಬ ಹೆಡ್ ಕಾನ್ಸ್​​ಸ್ಟೇಬಲ್ ಹಾಗೂ ಮೂವರು ಪೊಲೀಸ್ ಪೇದೆಗಳು ಸೇರಿ ಗಂಭೀರ ಸ್ವರೂಪದ ಹಲ್ಲೆ ನಡೆಸಿದ್ದರು. ಈ ಹಿನ್ನೆಲೆ ಠಾಣೆ ಮುಂದೆ ವಕೀಲರು ಜಮಾಯಿಸಿ ಆಕ್ರೋಶ ಹೊರಹಾಕಿದ್ದರು. ಸ್ಥಳಕ್ಕೆ ಆಗಮಿಸಿದ ಎಸ್​ಪಿ ವಿಕ್ರಂ, ವಿಚಾರಣೆ ನಡೆಸಿ ಪಿಎಸ್​ಐ ಸೇರಿದಂತೆ ಆರು ಸಿಬ್ಬಂದಿಯನ್ನು ಅಮಾನತು ಮಾಡಿದ್ದರು. ಜೊತೆಗೆ ಹಲ್ಲೆ ಮಾಡಿದ ಪೊಲೀಸರ ವಿರುದ್ದ ಐಪಿಸಿ ಸೆಕ್ಷನ್​​​​​​ 307, 324, 506, 504ರ ಅಡಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಚಿಕ್ಕಮಗಳೂರು: ಠಾಣೆಯಲ್ಲಿ ವಕೀಲನ ಮೇಲೆ ಹಲ್ಲೆ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ ಒಪ್ಪಿಸಿದ ರಾಜ್ಯ ಸರ್ಕಾರ

ಇನ್ನು ಈ ಘಟನೆ ತೀವ್ರ ಸ್ವರೂಪ ಪಡೆದು, ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ತಲೆಮರೆಸಿಕೊಂಡಿದ್ದರು. ಇವರ ಬಂಧನಕ್ಕೆ ಚಿಕ್ಕಮಗಳೂರು DYSP ಶೈಲೇಂದ್ರ ಕುಮಾರ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಎಲ್ಲ ಘಟನೆಯ ನಡುವೆಯೇ ವಕೀಲರು ಠಾಣೆಯಲ್ಲಿಯೇ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಲ್ಲೆ ಖಂಡಿಸಿ ಶನಿವಾರ ಮಧ್ಯರಾತ್ರಿವರೆಗೂ ನಗರದ ಹನುಮಂತಪ್ಪ ಸರ್ಕಲ್​​ನಲ್ಲಿ ಪೊಲೀಸರು ಮತ್ತು ಅವರ ಕುಟುಂಬಸ್ಥರು ಪ್ರತಿಭಟನೆ ನಡೆಸಿದ ಘಟನೆಯು ನಡೆದಿದೆ.

ವಕೀಲರು ಮೇಲೂ ಕೇಸ್​ ದಾಖಲು

ಈ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲಾ ಬಾರ್ ಅಸೋಸಿಯೇಷನ್ ಅಧ್ಯಕ್ಷ ಸುಧಾಕರ್, ವಕೀಲ ಪ್ರೀತಮ್ ಸೇರಿದಂತೆ 15 ವಕೀಲರ ವಿರುದ್ಧ ಸೆಕ್ಷನ್​ 503, 406, 353, 149 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನಲೆ ಈ ಎಲ್ಲದರ ಸಂಪೂರ್ಣ ವಿವರ ನೀಡುವಂತೆ ಹೈಕೋಟ್​ ಸಿಐಡಿಗೆ ಸೂಚಿಸಿತ್ತು. ಅದರಂತೆ ಇಂದು ಚಿಕ್ಕಮಗಳೂರಿಗೆ ಸಿಐಡಿ ತಂಡ ಆಗಮಿಸಿದ್ದು, ನಾಳೆಯಿಂದ ತನಿಖೆ ಶುರು ಮಾಡಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ