AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.26ರಂದು ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ

ಭಜರಂಗದಳ, ವಿಹೆಚ್​ಪಿ ನೇತೃತ್ವದಲ್ಲಿ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಒಂದು ಕಡೆಯಾದರೆ, ಮತ್ತೊಂದು ಕಡೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿಗೆ ಶ್ರೀರಾಮ ಸೇನೆ ನಿರ್ಧಾರ ಮಾಡಿದೆ. ಡಿ.26ರಂದು ದತ್ತಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ ಮಾಡಿದೆ.

ಡಿ.26ರಂದು ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮಸೇನೆ ನಿರ್ಧಾರ
ನಾಗೇನಹಳ್ಳಿ ದರ್ಗಾ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Dec 22, 2023 | 3:21 PM

Share

ಚಿಕ್ಕಮಗಳೂರು, ಡಿಸೆಂಬರ್​ 22: ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲೂ ದತ್ತ ಜಯಂತಿ ಆಚರಣೆಗೆ ಶ್ರೀರಾಮ ಸೇನೆ (Sri Ram Sena) ಮುಂದಾಗಿದೆ. ಆ ಮೂಲಕ ದರ್ಗಾದಲ್ಲಿಇದೆ ಮೊದಲ ಬಾರಿಗೆ ದತ್ತಜಯಂತಿ ಆಚರಣೆಗೆ ರಾಮಸೇನೆ ಪ್ಲಾನ್​ ಮಾಡಿಕೊಂಡಿದೆ. ಮುಸ್ಲಿಂರು ನಮ್ಮ ದತ್ತಪೀಠದಲ್ಲಿ ಉರುಸ್ ಆಚರಣೆ ಮಾಡುತ್ತಾರೆ. ನಾವು ನಾಗೇನಹಳ್ಳಿ ದರ್ಗಾದಲ್ಲಿ ಡಿ.26ರಂದು ದತ್ತಜಯಂತಿ ಆಚರಣೆ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ್ ಕುಲಕರ್ಣಿ ಹೇಳಿದ್ದಾರೆ.

ನಾಗೇನಹಳ್ಳಿ ದರ್ಗಾವನ್ನು ಪವಿತ್ರ ದರ್ಗಾ ಎಂದು ನಂಬಲಾಗಿದೆ. ರಾಜ್ಯ ಹೊರ ರಾಜ್ಯದಿಂದ ನಾಗೇನಹಳ್ಳಿ ದರ್ಗಾಕ್ಕೆ ಮುಸ್ಲಿಂ ಸಮುದಾಯದವರು ಆಗಮಿಸುತ್ತಾರೆ.

ಜಿಲ್ಲೆಯಾದ್ಯಂತ ಹೈಅಲರ್ಟ್ ಘೋಷಣೆ: 4 ಸಾವಿರ ಪೊಲೀಸರ ನಿಯೋಜನೆ

ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ಪ್ರತಿಕ್ರಿಯೆ ನೀಡಿದ್ದು, ಜಿಲ್ಲೆಯಲ್ಲಿ 28 ಚೆಕ್​ಪೋಸ್ಟ್​, 300ಕ್ಕೂ ಹೆಚ್ಚು ಸಿಸಿ ಕ್ಯಾಮರಾ, 50ಕ್ಕೂ ಬಾಡಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ.

ಇದನ್ನೂ ಓದಿ: ಚಿಕ್ಕಮಗಳೂರು: ಇದೇ ಮೊದಲ ಬಾರಿಗೆ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹುಣ್ಣಿಮೆ ಪೂಜೆ

ಪ್ರತಿಯೊಂದು ಚೆಕ್​ಪೋಸ್ಟ್​ಗೂ ವಿಶೇಷ ದಂಡಾಧಿಕಾರಿಗಳ ನೇಮಕ ಮಾಡಲಾಗಿದೆ. 7 ಎಎಸ್​ಪಿ, 30 ಡಿವೈಎಸ್​​ಪಿ, 30 ಇನ್ಸ್​ಪೆಕ್ಟರ್​ಗಳು, 100 ಹೋಂಗಾರ್ಡ್, 20 ಕೆಎಸ್​ಆರ್​ಪಿ, 25 ಡಿಎಆರ್​​ ನಿಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತ ಜಯಂತಿ; ಅರ್ಚಕ ಸೇರಿದಂತೆ ಐವರಿಗೆ ಅಂಗರಕ್ಷಕರ ನೇಮಕ

ದತ್ತ ಜಯಂತಿಗೆ ಅಧಿಕೃತ ಚಾಲನೆ ದೊರೆತಿದೆ. ಹತ್ತು ದಿನಗಳ ಕಾಲ ನಡೆಯುವ ದತ್ತಜಯಂತಿಗೆ ರಾಜ್ಯದಾದ್ಯಂತ ಹಲವು ಹಿಂದೂ ಪರ ಕಾರ್ಯಕರ್ತರು, ಸಾಧು ಸಂತರು ಭಾಗವಹಿಸಲಿದ್ದು, ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ.

ದತ್ತಮಾಲಾ ಅಭಿಯಾನ

ಇನಾಂ‌ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಶ್ರೀರಾಮಸೇನೆ ಇತ್ತೀಚೆಗೆ 7 ದಿನಗಳ ದತ್ತಮಾಲಾ ಅಭಿಯಾನವನ್ನು ಆರಂಭಿಸಿತ್ತು. ಈ ಬಾರಿ 20ನೇ ವರ್ಷದ ದತ್ತಮಾಲಾ ಅಭಿಯಾನ ನಡೆದಿದ್ದು ರಾಜ್ಯಾದ್ಯಂತ ಕಾರ್ಯಕರ್ತರು ದತ್ತಮಾಲಾಧಾರಣೆ ಮಾಡಿ ಏಳು ದಿನ ಅಭಿಯಾನ ಕೈಗೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ