AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ

Cambodia Chinese app: ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

chikkamagalur youth: ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಯಿಂದ, ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
ಭಾರತೀಯ ರಾಯಭಾರಿ ಕಚೇರಿಯಿಂದ ಕಾಂಬೋಡಿಯಾದಲ್ಲಿ ಸಿಲುಕಿದ್ದ ಕಾಫಿನಾಡಿನ ಯುವಕ ಅಶೋಕ್ ರಕ್ಷಣೆ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಸಾಧು ಶ್ರೀನಾಥ್​|

Updated on: Nov 04, 2023 | 2:07 PM

Share

ಚಿಕ್ಕಮಗಳೂರು, ನವೆಂಬರ್​ 4: ವಿದೇಶದ ಉದ್ಯೋಗದ ಆಸೆಗೆ ಬಿದ್ದು ಕಾಂಬೋಡಿಯಾ ದೇಶಕ್ಕೆ ಕೆಲಸಕ್ಕೆ ತೆರಳಿದ್ದ ಕಾಫಿನಾಡಿನ ಯುವಕ ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿ ನರಳಾಟ ಅನುಭವಿಸುತ್ತಿರುವ ಕುರಿತು ನಿರಂತರವಾಗಿ TV9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಯುವಕನನ್ನ ರಕ್ಷಿಸಿದ್ದು ಭಾರತಕ್ಕೆ ವಾಪಸ್ ಕರೆತರುವ ಪ್ರಕ್ರಿಯೆ ಆರಂಭವಾಗಿದೆ.

ಚೀನಿ ಆ್ಯಪ್ ಮಾಫಿಯಾಕ್ಕೆ ಸಿಲುಕಿದ್ದ ಯುವಕ:

ಕಳೆದ ಮೂರು ತಿಂಗಳ ಹಿಂದೆ ಕಾಂಬೋಡಿಯಾ ದೇಶಕ್ಕೆ ಉದ್ಯೋಗಕ್ಕಾಗಿ ತೆರಳಿದ್ದ ಚಿಕ್ಕಮಗಳೂರು ಜಿಲ್ಲೆಯ N.R ಪುರ ತಾಲೂಕಿನ ಮಹಲ್ಗೋಡು ಗ್ರಾಮದ ಅಶೋಕ್ ಚೀನಿ ಆ್ಯಪ್ ಮಾಫಿಯಾದಲ್ಲಿ ಸಿಲುಕಿದ್ದ.ವಂಚನೆಯ ಟಾರ್ಗೆಟ್ ನೀಡುತ್ತಿದ್ದ ಚೀನಿ ಆ್ಯಪ್ ಕಂಪನಿ ಟಾರ್ಗೆಟ್ ಪೂರ್ಣ ಮಾಡದ ಹಿನ್ನೆಲೆ ಅಶೋಕ್ ಗೆ ಚಿತ್ರಹಿಂಸೆ ನೀಡಿತ್ತು. ಅಶೋಕ್ ನನ್ನ ಬಂಧನದಲ್ಲಿ ಇರಿಸಿ 13 ಲಕ್ಷ ಹಣಕ್ಕಾಗಿ ಅಶೋಕ್ ಪೋಷಕರಿಗೆ ಬೇಡಿಕೆ ಹಾಕಿತ್ತು. ಆಶೋಕ್ ನನ್ನ ವಾಪಸ್ ಭಾರತಕ್ಕೆ ಕರೆತರುವಂತೆ ಆಶೋಕ್ ಕುಟುಂಬ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದೂರು ನೀಡುವ ಮೂಲಕ ರಾಜ್ಯ,ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು.

TV9 ನಲ್ಲಿ ನಿರಂತರವಾಗಿ ಸುದ್ದಿ ಪ್ರಸಾರ:

ಕಾಫಿನಾಡಿನ ಯುವಕ ಕಾಂಬೋಡಿಯಾ ದೇಶಗಳಲ್ಲಿ ಸಿಲುಕಿರುವ ಕುರಿತು ನಿರಂತರವಾಗಿ TV9 ಸುದ್ದಿ ಪ್ರಸಾರ ಮಾಡಿತ್ತು. TV9 ನಲ್ಲಿ ಪ್ರಸಾರವಾದ ಸುದ್ದಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (shobha karandlaje) ಸ್ಪಂದಿಸಿ ಆಶೋಕ್ ನನ್ನ ರಕ್ಷಣೆ ಮಾಡುವಂತೆ ಕಾಂಬೋಡಿಯಾ ದೇಶದ ಭಾರತೀಯ ರಾಯಭಾರಿ ಕಚೇರಿಗೆ ಪತ್ರ ವ್ಯವಹಾರ ನಡೆಸುವ ಮೂಲಕ ಮನವಿ ಮಾಡಿಕೊಂಡಿತ್ತು.

Also Read: ಕನ್ನಡಿಗರ ಪರದಾಟ, ಕಾಫಿನಾಡು ಯುವಕನಿಗೆ ಚಿತ್ರಹಿಂಸೆ -ಕಾಂಬೋಡಿಯಾದಲ್ಲಿ ಚೀನಿ ಆ್ಯಪ್‌ ಕರಾಳ ದಂಧೆ, ವಾಪಸ್ ಭಾರತಕ್ಕೆ ಕಳಿಸಲು ‌13 ಲಕ್ಷಕ್ಕೆ ಡಿಮ್ಯಾಂಡ್

ಆಶೋಕ್ ರಕ್ಷಣೆ ಮಾಡಿದ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿ:

ಕಳೆದ ಎರಡು ದಿನಗಳ ಹಿಂದೆ ಭಾರತೀಯ ರಾಯಭಾರಿ ಕಚೇರಿ ಸಿಬ್ಬಂದಿಗಳು ಕಾಂಬೋಡಿಯಾದ ವಿಯೆಟ್ನಾಂ ಬಾರ್ಡರ್ ನಲ್ಲಿರುವ ಚೀನಿ ಆ್ಯಪ್ ಕಚೇರಿಗೆ ಭೇಟಿ ನೀಡಿ ಆಶೋಕ್ ರಕ್ಷಣೆ ಮಾಡಲಾಗಿದ್ದ ಆಶೋಕ್ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳ ಜೊತೆಯಿದ್ದು ,ಸೋಮವಾರದ ಬಳಿಕ ಭಾರತಕ್ಕೆ ಆಶೋಕ್ ಕರೆತರಲು ಸಿದ್ದತೆ ಮಾಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ