AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 29, 2024 | 9:47 PM

Share

ಚಿಕ್ಕಮಗಳೂರು, ಜ.29: ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಶಾಲೆಯ ಆವರಣದಲ್ಲಿ ಬೀಡುಬಿಟ್ಟಿದ್ದ 30 ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಓಡಿಸಲಾಗಿದ್ದು, ಶಾಲಾ ಆವರಣದಿಂದ ಕಾಡಾನೆ ಹಿಂಡು ಹೊರಬಂದಿದೆ.

ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ

ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಇದೀಗ ಕಾಡಾನೆ ಹಿಂಡು ಕದ್ರಿಮಿದ್ರಿ ಗ್ರಾಮದ ಕಡೆ ಸಂಚಾರ ಮಾಡುತ್ತಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ಯಾರೂ ಕೂಡ ಮನೆಗಳಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ವಾಹನ ಸವಾರರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿ ಭಾಗಿ

ಬರೊಬ್ಬರಿ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿಗಳು ಸೇರಿ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಪಟಾಕಿ ಸಿಡಿಸಿ ಹರಸಾಹಸ ಪಡುತ್ತಿದ್ದಾರೆ. ಬೆಳಗ್ಗೆಯಿಂದ ಶಾಲಾ ಆವರಣದಲ್ಲಿ ಬೀಟಮ್ಮ ಕಾಡಾನೆ ಗ್ಯಾಂಗ್ ಬೀಡು ಬಿಟ್ಟಿತ್ತು. ಈ ಹಿನ್ನಲೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ವಸತಿ ಶಾಲೆಯೊಳಗೆ ಇದ್ದರು. ಇದೀಗ ಅರಣ್ಯ ಇಲಾಖೆ ರಾತ್ರಿವರೆಗೂ ಕಾದು ಕಾರ್ಯಾಚರಣೆ ಆರಂಭಿಸಿದ್ದಾರೆ. ಜೊತೆಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ