AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ

ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ.

ಚಿಕ್ಕಮಗಳೂರು: ಶಾಲಾ ಆವರಣದಿಂದ ಹೊರ ಬಂದ ಕಾಡಾನೆ ಹಿಂಡು; 9 ಕ್ಕೂ ಅಧಿಕ ಗ್ರಾಮಗಳಲ್ಲಿ ಹೆಚ್ಚಿದ ಆತಂಕ
ಚಿಕ್ಕಮಗಳೂರು
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Jan 29, 2024 | 9:47 PM

Share

ಚಿಕ್ಕಮಗಳೂರು, ಜ.29: ನಗರದ ಕೂಗಳತೆ ದೂರದಲ್ಲಿರುವ ಪ್ರತಿಷ್ಠಿತ ಆ್ಯಂಬರ್ ವ್ಯಾಲಿ ಖಾಸಗಿ ವಸತಿ ಶಾಲೆಯಲ್ಲಿ 30 ಕಾಡಾನೆಗಳಿರುವ(Wild elephant) ಬೀಟಮ್ಮ ಗ್ಯಾಂಗ್ ಬೀಡು ಬಿಟ್ಟಿದ್ದು, ವಸತಿ ಶಾಲೆಯಲ್ಲಿರುವ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದಂತೆ ಸಿಬ್ಬಂದಿಗಳು ಆತಂಕಗೊಂಡಿದ್ದರು. ಇದೀಗ ಶಾಲೆಯ ಆವರಣದಲ್ಲಿ ಬೀಡುಬಿಟ್ಟಿದ್ದ 30 ಕಾಡಾನೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಓಡಿಸಲಾಗಿದ್ದು, ಶಾಲಾ ಆವರಣದಿಂದ ಕಾಡಾನೆ ಹಿಂಡು ಹೊರಬಂದಿದೆ.

ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ

ಆವರಣದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಪಟಾಕಿ ಸಿಡಿಸಿ ಸಿಬ್ಬಂದಿಗಳು ಓಡಿಸುತ್ತಿದ್ದಾರೆ. ಈ ಹಿನ್ನಲೆ ಕಾಡಾನೆ ಸಂಚಾರ ಮಾಡುವ ರಸ್ತೆಗಳಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. ಇದೀಗ ಕಾಡಾನೆ ಹಿಂಡು ಕದ್ರಿಮಿದ್ರಿ ಗ್ರಾಮದ ಕಡೆ ಸಂಚಾರ ಮಾಡುತ್ತಿದ್ದು, 9 ಕ್ಕೂ ಅಧಿಕ ಗ್ರಾಮಗಳಲ್ಲಿ ಆತಂಕ ಹೆಚ್ಚಿದೆ. ಆದ್ದರಿಂದ ಯಾರೂ ಕೂಡ ಮನೆಗಳಿಂದ ಹೊರ ಬರದಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಮಗಳೂರು-ಶೃಂಗೇರಿ ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ವಾಹನ ಸವಾರರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿ ಭಾಗಿ

ಬರೊಬ್ಬರಿ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಹಾಗೂ ಇಟಿಎಫ್‌ ಸಿಬ್ಬಂದಿಗಳು ಸೇರಿ ಕಾಡಾನೆಗಳ ಹಿಂಡನ್ನು ಮತ್ತೆ ಕಾಡಿಗಟ್ಟಲು ಪಟಾಕಿ ಸಿಡಿಸಿ ಹರಸಾಹಸ ಪಡುತ್ತಿದ್ದಾರೆ. ಬೆಳಗ್ಗೆಯಿಂದ ಶಾಲಾ ಆವರಣದಲ್ಲಿ ಬೀಟಮ್ಮ ಕಾಡಾನೆ ಗ್ಯಾಂಗ್ ಬೀಡು ಬಿಟ್ಟಿತ್ತು. ಈ ಹಿನ್ನಲೆ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಗಳು ವಸತಿ ಶಾಲೆಯೊಳಗೆ ಇದ್ದರು. ಇದೀಗ ಅರಣ್ಯ ಇಲಾಖೆ ರಾತ್ರಿವರೆಗೂ ಕಾದು ಕಾರ್ಯಾಚರಣೆ ಆರಂಭಿಸಿದ್ದಾರೆ. ಜೊತೆಗೆ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashwith Mavinaguni
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?